ಲೂಡೋ ಆಡಿ 4 ಲಕ್ಷ ಸೋತ ಬೆಂಗಳೂರು ಮಹಿಳೆ : ಇಬ್ಬರು ಮಕ್ಕಳ ಜೊತೆ ಮನೆ ಬಿಟ್ಟು ಪರಾರಿ
ಜೂಜು ಹಲವರ ಮನೆಗಳ ಖುಷಿಯನ್ನೇ ನಾಶವಾಗಿಸಿದೆ. ಅದರಲ್ಲೂ ಆನ್ಲೈನ್ ಗೇಮ್ ಚಟಕ್ಕೆ ಬೀಳುವ ಯುವಜನತೆ ಲಕ್ಷ ಲಕ್ಷ ಹಣ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ ಮಹಿಳೆಯೊಬ್ಬರು ಆನ್ಲೈನ್ನಲ್ಲಿ ಲೂಡೋ ಆಡಿ ಬರೋಬ್ಬರಿ 4 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಹತಾಶರಾಗಿ ಮಕ್ಕಳ ಜೊತೆ ಮನೆ ಬಿಟ್ಟುಹೋಗಿದ್ದಾರೆ.
4 ಲಕ್ಷ ರೂಪಾಯಿ ಸೋತ ಬಳಿಕ ಮರ್ಯಾದೆಗೆ ಅಂಜಿದ 26 ವರ್ಷದ ಗೃಹಿಣಿಯೊಬ್ಬರು, ತನ್ನ ಗಂಡನಿಗೆ ಕ್ಷಮೆಯಾಚಿಸುವ ಪತ್ರವನ್ನು ಬರೆದಿಟ್ಟು ತನ್ನ ಇಬ್ಬರು ಮಕ್ಕಳೊಂದಿಗೆ ತನ್ನ ಮನೆಯನ್ನು ತೊರೆದಿರುವುದಾಗಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಒಂದು ಮಗುವಿಗೆ ಆರು ವರ್ಷ, ಇನ್ನೊಂದು ಮಗುವಿಗೆ ಒಂದು ವರ್ಷ ವಯಸ್ಸಾಗಿದೆ.

ಮಹಿಳೆ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವರ್ಷದ ಹಿಂದೆ 50,000 ರೂಪಾಯಿ ಕಳೆದುಕೊಂಡು 1.25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಡ ಇಟ್ಟಿದ್ದರು. ಆ ಹಣವನ್ನು ಕೂಡ ಸೋತಿದ್ದು, ನಂತರ ಪತಿಗೆ ತಿಳಿಯದಂತೆ ಸಂಬಂಧಿಕರಿಂದ 1.75 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಾರೆ.
ಬೆಂಬಿಡದ ವ್ಯಸನ, ಮನೆ ಬಿಟ್ಟ ಮಹಿಳೆ
ಮಹಿಳೆಯ ಗಂಡನಿಗೆ ಈ ವಿಚಾರ ಗೊತ್ತಾದ ಬಳಿಕ ಮತ್ತೆ ಆನ್ಲೈನ್ನಲ್ಲಿ ಲೂಡೋ ಆಡಲ್ಲ ಎಂದು ಭರವಸೆ ನೀಡಿದ್ದರು. ಆದರೆ ಜುಲೈ 19ರಂದು ಮಹಿಳೆ ಮತ್ತೆ ತನ್ನ ಚಿನ್ನಾಭರಣಗಳನ್ನು ಒತ್ತೆ ಇಟ್ಟು 1.20 ಲಕ್ಷ ರೂಪಾಯಿ ಪಡೆದುಕೊಂಡು ಜೂಜಾಡಿದ್ದಾರೆ, ಇದನ್ನು ತಿಳಿದ ಗಂಡ ಹೆಂಡತಿಯ ಪೋಷಕರಿಗೆ ವಿಷಯ ತಿಳಿಸಿ, ಆಟವಾಡದಂತೆ ಸಲಹೆ ನೀಡಿದ್ದಾರೆ.
ಮಕ್ಕಳ ಜೊತೆ ಮನೆ ಬಿಟ್ಟ ಮಹಿಳೆ
ಆಗಸ್ಟ್ 8ರಂದು ಪತಿ ತನ್ನ ಹಿರಿಯ ಮಗುವನ್ನು ಮಧ್ಯಾಹ್ನ 3 ಗಂಟೆಗೆ ಶಾಲೆಯಿಂದ ಮನೆಗೆ ಬಿಟ್ಟಿದ್ದಾರೆ ಎಂದು ವರದಿಯಾಗಿದೆ. ನಂತರ ಅವರು ಕೆಲಸಕ್ಕೆ ತೆರಳಿದರು. ಆದರೆ, ಸಂಜೆ 4.45ರ ಸುಮಾರಿಗೆ ಪತ್ನಿಗೆ ಕರೆ ಮಾಡಲು ಯತ್ನಿಸಿದಾಗ ಆಕೆ ಸ್ವೀಕರಿಸಲಿಲ್ಲ ಮತ್ತು ಫೋನ್ ಸ್ವಿಚ್ ಆಫ್ ಆಗಿತ್ತು. ಆತಂಕಗೊಂಡ ವ್ಯಕ್ತಿ ಮನೆಗೆ ಬಂದು ನೋಡಿದಾಗ ಬಾಗಿಲಿಗೆ ಬೀಗ ಹಾಕಾಲಾಗಿತ್ತು.
ತನ್ನ ಬಳಿ ಇದ್ದ ಬೇರೊಂದು ಕೀಯಿಂದ ಬಾಗಿಲು ತೆರೆದು ಒಳ ಪ್ರವೇಶಿಸಿದ್ದಾರೆ. ಲಿವಿಂಗ್ ರೂಮಿನಲ್ಲಿ ಪತ್ನಿ ಬರೆದಿಟ್ಟಿದ್ದ ಪತ್ರ ಸಿಕ್ಕಿದೆ, ಪತ್ನಿ ಬರೆದ ಪತ್ರದಲ್ಲಿ, "ನಾನು ನಿಮ್ಮ ಕ್ಷಮೆಯಾಚಿಸುತ್ತೇನೆ, ನಾನು ಮನೆಯಲ್ಲಿಟ್ಟ ಹಣವನ್ನು ತೆಗೆದುಕೊಳ್ಳುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ" ಎಂದು ಬರೆದಿದ್ದಾರೆ. ಮನೆಯಲ್ಲಿದ್ದ ಸ್ವಲ್ಪ ಹಣದ ಜೊತೆ ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಮಹಿಳೆ ಮತ್ತು ಮಕ್ಕಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications