ಸಲಿಂಗಕಾಮದ ಬಗ್ಗೆ ರವಿಶಂಕರ ಗುರೂಜಿ ಹೀಗಂತಾರೆ
ಬೆಂಗಳೂರು, ಡಿ. 12 : ಸಲಿಂಗಕಾಮ ಕಾನೂನು ಬಾಹಿರ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದ್ದನ್ನು ಹಿಂದೂವಾದಿ ಯೋಗಗುರು ಬಾಬಾ ರಾಮದೇವ್ ಅವರು ಮುಕ್ತಕಂಠದಿಂದ ಸ್ವಾಗತಿಸಿದ್ದರೆ, ಬೆಂಗಳೂರಿನ ಧಾರ್ಮಿಕ ಗುರು ಶ್ರೀಶ್ರೀ ರವಿಶಂಕರ ಗುರೂಜಿ ಅವರು ಸಲಿಂಗಕಾಮ ಕ್ರೈಂ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಸಲಿಂಗಕಾಮ ಅಪರಾಧವಲ್ಲ. ಲೈಂಗಿಕ ಆಯ್ಕೆಗೆ ಸಂಬಂಧಿಸಿದಂತೆ ಯಾರೂ ಭೇದಭಾವಕ್ಕೆ ಒಳಗಾಗಬಾರದು" ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಷನ್ ಸ್ಥಾಪಕ ರವಿಶಂಕರ ಗುರೂಜಿ ಅವರು ಸಾಲುಸಾಲು ಟ್ವೀಟ್ ಮಾಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ಹಿಂದೂ ಧರ್ಮದಲ್ಲಿ ಸಲಿಂಗಕಾಮವನ್ನು ಎಂದೂ ಅಪರಾಧವೆಂದು ಪರಿಗಣಿಸಿಯೇ ಇಲ್ಲ. ನಿಜ ಹೇಳಬೇಕೆಂದರೆ ಅಯ್ಯಪ್ಪ ದೇವರು ಹರಿ-ಹರನಿಂದಲೇ ಹುಟ್ಟಿದ್ದು. ಲೈಂಗಿಕ ಆಯ್ಕೆಯ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸುವುದು ಅಸಂಬದ್ಧ ಎಂದು ಗುರೂಜಿ ಅವರು, ಬಾಬಾ ರಾಮದೇವ್ ಅವರಿಗೆ ವ್ಯತಿರಿಕ್ತವಾದ ಹೇಳಿಕೆಯನ್ನು ನೀಡಿದ್ದಾರೆ. [ಸಿಡಿಮಿಡಿಗೊಂಡ ಸಲಿಂಗಿಗಳು]

ಸ್ಮೃತಿಯಲ್ಲಿ ಸಲಿಂಗಕಾಮವನ್ನು ಕಾನೂನು ಬಾಹಿರ ಎಂದು ಹೇಳಿಲ್ಲ. ಪ್ರತಿಯೊಬ್ಬನಲ್ಲಿಯೂ ಪುರುಷ ಮತ್ತು ಸ್ತ್ರೀ ಅಂಶಗಳು ಇದ್ದೇ ಇರುತ್ತವೆ. ಅವರವರ ಪ್ರಾಬಲ್ಯಕ್ಕೆ ತಕ್ಕಂತೆ ಅವರವರ ಪ್ರವೃತ್ತಿಗಳು ಬದಲಾಗುತ್ತಿರುತ್ತವೆ ಎಂದು ಜಾಗತಿಕ ಧಾರ್ಮಿಕ ಗುರು ಎಂದೇ ಖ್ಯಾತರಾಗಿರುವ ರವಿಶಂಕರ ಗುರೂಜಿ ಅವರು ವ್ಯಾಖ್ಯಾನಿಸಿದ್ದಾರೆ.
ಸಲಿಂಗಕಾಮ ಅಪರಾಧವಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು. ಬಿಜೆಪಿ ನಾಯಕ ಬಿ.ಪಿ. ಸಿಂಘಾಲ್, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಉತ್ಕಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ಅಪೊಸ್ಟೋಲಿಕ್ ಚರ್ಚಸ್ ಅಲೈಯನ್ಸ್ ಸಂಸ್ಥೆಗಳು ಜಂಟಿಯಾಗಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದವು. [ಸಲಿಂಗಕಾಮ ಅಪರಾಧ : ಸುಪ್ರೀಂ ಕೋರ್ಟ್]
ಸಲಿಂಗರತಿ ಅಪರಾಧವಲ್ಲ ಎಂದು 2009ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಡಿ.11ರಂದು ತಳ್ಳಿಹಾಕಿದೆ. ಈ ಮೂಲಕ ಗುದ ಸಂಭೋಗ ದಂಡಾರ್ಹ ಎಂದು ಹೇಳುವ ಭಾರತೀಯ ದಂಡ ಸಂಹಿತೆಯ ನಿಯಮ 377ರ ಸಾಂವಿಧಾನಿಕ ಸಿಂಧುತ್ವವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ತೀರ್ಪನ್ನು ವಿರೋಧಿಸಿ ದೇಶಾದ್ಯಂತ ಲೈಂಗಿಕ ಅಲ್ಪಸಂಖ್ಯಾತರಿಂದ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ.
ಈ ನಡುವೆ, ಸೋನಿಯಾ ಗಾಂಧಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸತ್ತಿನಲ್ಲಿ ದೇಶದ ಎಲ್ಲ ನಾಗರಿಕರ ಸ್ವಾತಂತ್ರ್ಯ ಹಕ್ಕನ್ನು ಉಳಿಸಲು ಎಲ್ಲ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಬುಧವಾರ ನೀಡಿದ ತೀರ್ಪಿನಲ್ಲಿ ಕೂಡ, ಬೇಕಿದ್ದರೆ ಭಾರತೀಯ ದಂಡ ಸಂಹಿತೆಯನ್ನೇ ತಿದ್ದುಪಡಿ ಮಾಡಿ 377 ಸೆಕ್ಷನ್ ಕಿತ್ತಹಾಕಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸವಾಲು ಎಸೆದಿದ್ದರು. [ಸಲಿಂಗಕಾಮಕ್ಕೆ ಜೈ ಎಂದ ಸೋನಿಯಾ]
Homosexuality has never been considered a crime in Hindu culture. In fact, Lord Ayyappa was born of Hari-Hara (Vishnu & Shiva). #Sec377
— Sri Sri Ravi Shankar (@SriSriSpeaks) December 11, 2013 -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications