ಲಾಲ್ಬಾಗ್: ಜೇನು ದಾಳಿ ಕಡಿವಾಣಕ್ಕೆ ಸಿಬ್ಬಂದಿಗಳಿಗೆ ತರಬೇತಿ
ಬೆಂಗಳೂರು, ಮಾರ್ಚ್ 21: ಲಾಲ್ ಬಾಗ್ ನಲ್ಲಿ ಜೇನಿನ ದಾಳಿಗೆ ಸಾಕಷ್ಟು ಮಂದಿ ತುತ್ತಾಗುತ್ತಿದ್ದಾರೆ. ಆದರೆ ಇಷ್ಟು ದಿನ ಜೇನು ಗೂಡುಗಳನ್ನು ಬೇರೆಡೆಗೆ ಸಾಗಿಸಲಾಗುತ್ತಿತ್ತೇ ಹೊರತು, ಅವುಗಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಯಾರೂ ಕೂಡ ಒತ್ತು ನೀಡಿರಲಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ ಇದೀಗ ಲಾಲ್ ಬಾಗ್ ನಲ್ಲಿ ಜೇನುನೊಣಗಳಿಂದ ಪ್ರವಾಸಿಗರಿಗೆ ಹಾಗೂ ಇತರರಿಗೆ ಯಾವುದೇ ರೀತಿ ಹಾನಿ ಸಂಭವಿಸದಂತೆ ತಡೆಯಲು ಲಾಲ್ ಬಾಗ್ ನ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈ ನಿಟ್ಟಿನಲ್ಲಿ ಕೀಟ ಶಾಸ್ತ್ರ ತಜ್ಞರಾದ ಡಾ. ರಾಜಗೋಪಾಲ್ ಹಾಗೂ ಪಾರ್ಕ್ಸ್ ಅಂಡ್ ಗಾರ್ಡನ್ಸ್ ನ ಜಂಟಿ ನಿರ್ದೇಶಕ ಡಾ. ಎಂ ಜಗದೀಶ್ ಅವರ ನೇತೃತ್ವದಲ್ಲಿ ಉದ್ಯಾನದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜೇನು ದಾಳಿ ನಡೆಸಿದರೆ ತಕ್ಷಣ ಏನು ಮಾಡಬೇಕು , ದಾಳಿಗೆ ಒಳಗಾದವರನ್ನು ಯಾವ ರೀತಿ ಪಾರು ಮಾಡಬೇಕು ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು.

ಮತ್ತೊಂದು ಹಂತದಲ್ಲಿ ಇತರೆ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ. ಜತೆಗೆ ಜೇನು ದಾಳಿಯಾದರೆ ಅವರನ್ನು ರಕ್ಷಿಸಲು ಸಿಬ್ಬಂದಿಗೆ ಬೇಕಾದ ಗೋಣಿತಾಟು, ಮುಳ್ಳು ತೆರೆಯಲು ಚಿಮುಟಗಳನ್ನು ವಿತರಿಸಲಾಗುತ್ತದೆ. ಲಾಲ್ ಬಾಗ್ ವೆಸ್ಟ್ ಗೇಟ್ ಬಳಿ ಒಂದು ಸಿಲ್ಕ್ ಕಾಟನ್ ಮರದಲ್ಲಿ ಸುಮಾರು 15-20ಜೇನುಗೂಡುಗಳಿವೆ.
ಮುಖ್ಯ ಪ್ರವೇಶ ದ್ವಾರದ ಬಳಿ ಶೌಚಾಲಯದ ಪಕ್ಕದಲ್ಲಿರುವ ಸಿಲ್ಕ್ ಕಾಟನ್ ಮರದಲ್ಲಿ ಸುಮಾರು 20 ಜೇನು ಗೂಡುಗಳಿವೆ. ಜೆಡಿ ಕಚೇರಿ ಹಾದಿಯ ಮರದಲ್ಲಿ ಅಲ್ಲಲ್ಲಿ 5ಮರಗಳಲ್ಲಿ ಜೇನುಗೂಡುಗಳಿವೆ. ಈ ಪೈಕಿ ಅಧಿಕ ಜನಸಂಚಾರವಿರುವ ಬ್ಯಾಂಡ್ ಸ್ಟ್ಯಾಂಡ್, ಮುಖ್ಯದ್ವಾರ, ವೆಸ್ಟ ಗೇಟ್ ಬಳಿ ಜೇನು ಗೂಡುಗಳು ಕಟ್ಟಿರುವ ಮರಗಳಿಗೆ ಸುತ್ತಲೂ ತಾತ್ಕಾಲಿಕವಾಗಿ ದಾರದ ಬ್ಯಾರಿಕೇಡ್ ಅಳವಡಿಸಲಾಗಿದೆ. ಜತೆಗೆ ಒಬ್ಬ ಕಾವಲುಗಾರರನ್ನು ನೇಮಿಸಲಾಗಿದೆ. ಜೇನುಗಳಿರುವ ಬಗ್ಗೆ ಫಲಕಗಳನ್ನು ಅಳವಡಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications