ಲಾಲ್ಬಾಗ್: ಜೇನು ದಾಳಿ ಕಡಿವಾಣಕ್ಕೆ ಸಿಬ್ಬಂದಿಗಳಿಗೆ ತರಬೇತಿ
ಬೆಂಗಳೂರು, ಮಾರ್ಚ್ 21: ಲಾಲ್ ಬಾಗ್ ನಲ್ಲಿ ಜೇನಿನ ದಾಳಿಗೆ ಸಾಕಷ್ಟು ಮಂದಿ ತುತ್ತಾಗುತ್ತಿದ್ದಾರೆ. ಆದರೆ ಇಷ್ಟು ದಿನ ಜೇನು ಗೂಡುಗಳನ್ನು ಬೇರೆಡೆಗೆ ಸಾಗಿಸಲಾಗುತ್ತಿತ್ತೇ ಹೊರತು, ಅವುಗಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಯಾರೂ ಕೂಡ ಒತ್ತು ನೀಡಿರಲಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ ಇದೀಗ ಲಾಲ್ ಬಾಗ್ ನಲ್ಲಿ ಜೇನುನೊಣಗಳಿಂದ ಪ್ರವಾಸಿಗರಿಗೆ ಹಾಗೂ ಇತರರಿಗೆ ಯಾವುದೇ ರೀತಿ ಹಾನಿ ಸಂಭವಿಸದಂತೆ ತಡೆಯಲು ಲಾಲ್ ಬಾಗ್ ನ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈ ನಿಟ್ಟಿನಲ್ಲಿ ಕೀಟ ಶಾಸ್ತ್ರ ತಜ್ಞರಾದ ಡಾ. ರಾಜಗೋಪಾಲ್ ಹಾಗೂ ಪಾರ್ಕ್ಸ್ ಅಂಡ್ ಗಾರ್ಡನ್ಸ್ ನ ಜಂಟಿ ನಿರ್ದೇಶಕ ಡಾ. ಎಂ ಜಗದೀಶ್ ಅವರ ನೇತೃತ್ವದಲ್ಲಿ ಉದ್ಯಾನದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜೇನು ದಾಳಿ ನಡೆಸಿದರೆ ತಕ್ಷಣ ಏನು ಮಾಡಬೇಕು , ದಾಳಿಗೆ ಒಳಗಾದವರನ್ನು ಯಾವ ರೀತಿ ಪಾರು ಮಾಡಬೇಕು ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು.

ಮತ್ತೊಂದು ಹಂತದಲ್ಲಿ ಇತರೆ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ. ಜತೆಗೆ ಜೇನು ದಾಳಿಯಾದರೆ ಅವರನ್ನು ರಕ್ಷಿಸಲು ಸಿಬ್ಬಂದಿಗೆ ಬೇಕಾದ ಗೋಣಿತಾಟು, ಮುಳ್ಳು ತೆರೆಯಲು ಚಿಮುಟಗಳನ್ನು ವಿತರಿಸಲಾಗುತ್ತದೆ. ಲಾಲ್ ಬಾಗ್ ವೆಸ್ಟ್ ಗೇಟ್ ಬಳಿ ಒಂದು ಸಿಲ್ಕ್ ಕಾಟನ್ ಮರದಲ್ಲಿ ಸುಮಾರು 15-20ಜೇನುಗೂಡುಗಳಿವೆ.
ಮುಖ್ಯ ಪ್ರವೇಶ ದ್ವಾರದ ಬಳಿ ಶೌಚಾಲಯದ ಪಕ್ಕದಲ್ಲಿರುವ ಸಿಲ್ಕ್ ಕಾಟನ್ ಮರದಲ್ಲಿ ಸುಮಾರು 20 ಜೇನು ಗೂಡುಗಳಿವೆ. ಜೆಡಿ ಕಚೇರಿ ಹಾದಿಯ ಮರದಲ್ಲಿ ಅಲ್ಲಲ್ಲಿ 5ಮರಗಳಲ್ಲಿ ಜೇನುಗೂಡುಗಳಿವೆ. ಈ ಪೈಕಿ ಅಧಿಕ ಜನಸಂಚಾರವಿರುವ ಬ್ಯಾಂಡ್ ಸ್ಟ್ಯಾಂಡ್, ಮುಖ್ಯದ್ವಾರ, ವೆಸ್ಟ ಗೇಟ್ ಬಳಿ ಜೇನು ಗೂಡುಗಳು ಕಟ್ಟಿರುವ ಮರಗಳಿಗೆ ಸುತ್ತಲೂ ತಾತ್ಕಾಲಿಕವಾಗಿ ದಾರದ ಬ್ಯಾರಿಕೇಡ್ ಅಳವಡಿಸಲಾಗಿದೆ. ಜತೆಗೆ ಒಬ್ಬ ಕಾವಲುಗಾರರನ್ನು ನೇಮಿಸಲಾಗಿದೆ. ಜೇನುಗಳಿರುವ ಬಗ್ಗೆ ಫಲಕಗಳನ್ನು ಅಳವಡಿಸಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications