ಹನಿ ಟ್ರಾಪ್ : ಸಿಸಿಬಿ ಇನ್ ಸ್ಪೆಕ್ಟರ್ ಹೆಸರಿನಲ್ಲಿ ಸುಲಿಗೆ
ಬೆಂಗಳೂರು, ನವೆಂಬರ್21: ಸಿಸಿಬಿ ಇನ್ಸ್ಪೆಕ್ಟರ್ ಹೆಸರಿನಲ್ಲಿ ಉದ್ಯಮಿ ಅಕ್ರಮ ಸಂಬಂಧದ ಖಾಸಗಿ ವಿಡಿಯೋ ಬಿಡುಗಡೆ ಮಡುವುದಾಗಿ ಹೆದರಿಸಿ ಸುಲಿಗೆ ಮಾಡಿದ್ದ ಆರೋಪಿಯನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೇಬಲ್ ಆಪರೇಟರ್ ಮಂಜುನಾಥ್ ಹಣ ಕಳೆದುಕೊಂಡಿದ್ದು, ನಾಗಸಂದ್ರ ನಿವಾಸಿ, ಅರುಷ್ ಎಂಟರ್ ಪ್ರೈಸಸ್ ಫೈನಾನ್ಸ್ ಕಂಪನಿ ಮಾಲೀಕ ಶ್ರೀನಿವಾಸ್ ಗದ್ದುಗಿ ಬಂಧಿತ ಆರೊಪಿ. ಕೇಬಲ್ ನೆಟ್ವರ್ಕ್ ಕಚೇರಿ ಇಟ್ಟಿಕೊಂಡಿರುವ ಮಂಜುನಾಥ್ ಮದುವೆಯಾಗಿದ್ದರೂ ಪಕ್ಕದ ಮನೆಯ ಯುವತಿಯ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಯುವತಿ ಜತೆ ಸುಪ್ರೀಂ ಲಾಡ್ಜ್ ಗೆ ಹೋಗಿದ್ದರು. ಮಂಜುನಾಥ್ ಮೊಬೈಲ್ ಗೆ ಅನಾಮಿಕ ವ್ಯಕ್ತಿ ಕರೆ ಮಾಡಿ, ನಾನು ಸಿಸಿಬಿ ಇನ್ ಸ್ಪೆಕ್ಟರ್ ರಾಜು, ನೀನು ಯುವತಿ ಜತೆ ಖಾಸಗಿಯಾಗಿ ಕಳೆದ ವಿಡಿಯೋ ನನ್ನ ಬಳಿಯಿದೆ. ನೀನು ನಂಬರ್ ಇಟ್ಟುಕೋ.. ಮತ್ತೆ ನೀನೇ ಕರೆ ಮಾಡಬೇಡ. ನಾವು ಬ್ಯುಸಿಯಿದ್ದೇವೆ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದಾರೆ.
ಇದಾದ ಮರು ದಿನವೇ ಜ್ಯೋತಿ ಅವರು ಮಂಜುನಾಥ್ ಅವರನ್ನು ಸಂಪರ್ಕಿಸಿ, ನನಗೆ ಸಿಸಿಬಿ ಇನ್ಸ್ಪೆಕ್ಟರ್ ಕರೆ ಮಾಡಿದ್ದರು. ನಮ್ಮ ಕಂಪನಿ ಮಾಲೀಕ ಶ್ರೀನಿವಾಸ್ ಗದ್ದಿಗೆ ಜತೆ ನಮ್ಮಿಬ್ಬರ ಲಾಡ್ಜ್ ವಿಚಾರ ಮಾತನಾಡಿದ್ದಾರೆ. ನೀವು ನಮ್ಮ ಕಚೇರಿಗೆ ಬಂದು ಮಾಲೀಕರ ಬಳಿ ಮಾತನಾಡಲು ಹೇಳಿದ್ದಾರೆ ಎಂದು ತಿಳಿಸಿದ್ದಾಳೆ. ವಿಷಯ ಮನೆಯಲ್ಲಿ ಗೊತ್ತಾದರೆ ಭಯ ಎನ್ನುವ ಕಾರಣಕ್ಕೆ ಮಂಜುನಾಥ್ ಶ್ರೀನಿವಾಸ್ ಗದ್ದುಗೆ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ನಿನ್ನ ಲಾಡ್ಜ್ ವಿಚಾರದ ಬಗ್ಗೆ ಸಿಸಿಬಿ ಇನ್ ಸ್ಪೆಕ್ಟರ್ ಮಾತನಾಡಿದ್ದಾರೆ. ಇದು ವಯಸ್ಸಿನಲ್ಲಿ ಸಹಜ. ಪ್ರಕರಣ ಮುಚ್ಚಿ ಹಾಕಬೇಕಾದರೆ ಹತ್ತು ಲಕ್ಷ ರೂ. ಕೊಡಬೇಕು ಎಂದು ಹೇಳಿದ್ದಾರೆ. ಆದರೆ ನಾನು ಮಾತನಾಡಿ ಆರು ಲಕ್ಷ ರೂ.ಗೆ ಒಪ್ಪಿಸಿದ್ದೇನೆ. ಎಂದು ಹೇಳಿದ್ದಾರೆ. ಇದನ್ನು ನಂಬಿದ ಮಂಜುನಾಥ್, ಅಷ್ಟು ಹಣ ನನ್ನ ಬಳಿ ಇಲ್ಲ ಎಂದು ಹೇಳಿದ್ದು, ಜ್ಯೋತಿ ಕೈಯಲ್ಲಿ ಐದು ಲಕ್ಷ ರೂ . ಕೊಟ್ಟು ಕಳುಹಿಸಿದ್ದಾರೆ.

ಇದಾದ ಬಳಿಕ ಶ್ರೀನಿವಾಸ್ ನನ್ನು ಪ್ರಕರಣದ ಬಗ್ಗೆ ವಿಚಾರಸಿದಾಗ, ಯುವತಿಯನ್ನು ಸಿಸಿಬಿ ಪೊಲೀಸರು ಕರೆದೊಯ್ದಿದ್ದಾರೆ. ಚಾಮರಾಜಪೇಟೆ ಸಿಸಿಬಿ ಕಚೇರಿ ಬಳಿ ಕರೆದುಕೊಂಡು ಹೋಗಿದ್ದು, ಕರೋನಾ ಕಾರಣದಿಂದ ಕಚೇರಿ ಒಳಗೆ ಬಿಟ್ಟುಕೊಂಡಿಲ್ಲ. ಬದಲಿಗೆ ಚಾಮರಾಜಪೇಟೆಯಲ್ಲಿ ಅಪಾರ್ಟ್ ಮೆಂಟ್ನಲ್ಲಿ ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರಿಂದ ಮಂಜುನಾಥ್ ಭಯಗೊಂಡಿದ್ದು, ವಿಷಯವನ್ನು ಮನೆಯಲ್ಲಿ ತಿಳಿಸಿದ್ದಾರೆ. ಪತ್ನಿ ಜತೆ ರಂಪಾಟವಾಗಿದೆ. ಪ್ರಕರಣ ದಾಖಲಾಗದಂತೆ ನೋಡಿಕೊಳ್ಳಲು 9 ಲಕ್ಷ ರೂ. ನೀಡುವಂತೆ ಶ್ರೀನಿವಾಸ್ ತಿಳಿಸಿದ್ದಾರೆ. ವಿಡಿಯೋ ನೋಡಿದ್ದಾಗಿ ಯುವತಿ ಹೇಳಿದ್ದರಿಂದ ಭಯಗೊಂಡ ಮಂಜುನಾಥ್ ಅಷ್ಟು ದುಡ್ಡು ಕೊಡಲು ಸಾಧ್ಯವಿಲ್ಲ ಎಂದು ಮಂಜುನಾಥ್ ಕೇಳಿಕೊಂಡರೂ ಬಿಟ್ಟಿಲ್ಲ.
ತನ್ನ ಸ್ನೇಹಿತರೊಂದಿಗೆ ವಿಷಯ ಹಂಚಿಕೊಂಡಾಗ, ಶ್ರೀನಿವಾಸ್ ನಡುವಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಿಸಿಬಿ ಇನ್ಸ್ಪೆಕ್ಟರ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿರುವ ಬಗ್ಗೆ ಮಂಜುನಾಥ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯಾ ಪೊಲೀಸರು, ಶ್ರೀನಿವಾಸ್ ಗದ್ದುಗೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಿಸಿಬಿ ಪೊಲೀಸರ ಹೆಸರಿನಲ್ಲಿ ನಾಟಕವಾಡಿರುವ ಸಂಗತಿ ಗೊತ್ತಾಗಿದ್ದು ಶ್ರೀನಿವಾಸ್ ಗದ್ದುಗೆ ಎಂಬುವನನ್ನು ಬಂಧಿಸಿದ್ದಾರೆ. ಯುವತಿಯನ್ನೂ ಸಹ ಹೆದರಿಸಿ ನನಗೆ ವಂಚನೆ ಮಾಡಿದ್ದಾರೆ. ನಾನು ಕೊಟ್ಟಿರುವ ಹಣ ಇನ್ನೂ ವಾಪಸು ಬಂಧಿಲ್ಲ. ಪೊಲೀಸರು ಪೋನ್ ಮಾಡುವುದಾಗಿ ತಿಳಿಸಿದ್ದಾರೆ ಎಂದು ದೂರುದಾರ ಮಂಜುನಾಥ್ ಒನ್ ಇಂಡಿಯಾ ಕನ್ನಡ ಗೆ ತಿಳಿಸಿದ್ದಾರೆ.
Recommended Video
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications