ಹನಿಟ್ರ್ಯಾಪ್: ಕನ್ನಡ ಕಿರುತೆರೆ ನಟಿ ಹರ್ಷಿಣಿ ಬಂಧನ
ಬೆಂಗಳೂರು, ಆ. 01: ಅಶ್ಲೀಲ ಚಿತ್ರ ಚಿತ್ರೀಕರಣ ಮಾಡಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡವೊಂದು ಪೊಲೀಸರ ಬಲೆಗೆ ಬಿದ್ದಿದೆ. ಕಿರುತೆರೆ ನಟಿ, ರೂಪದರ್ಶಿ ಹರ್ಷಿಣಿ ಸೇರಿದಂತೆ ನಾಲ್ಕು ಜನರನ್ನು ಬಂಧಿಸಲಾಗಿದೆ.
ವಿನೋದ್ ಕುಮಾರ್ ಎಂಬುವರು ನೀಡಿದ್ದ ದೂರನ್ನು ಆಧರಿಸಿ ಜ್ಞಾನಭಾರತಿ ಪೋಲೀಸರು ರೂಪದರ್ಶಿ ಹರ್ಷಿಣಿ, ಲೋಕೇಶ್, ಬ್ರಿಜೇಷ್, ಸುನೀಲ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಾರ್, ಲಕ್ಷ ರು. ಮತ್ತು 4 ಲಕ್ಷ ರು. ನ ಖಾಲಿ ಚೆಕ್ ವಶಪಡಿಸಿಕೊಳ್ಳಲಾಗಿದೆ.[ವೈದ್ಯರಿಗೆ ಬ್ಲಾಕ್ ಮೇಲ್ ಮಾಡಿದ್ದ ನಟಿ ನಯನಾ ಕೃಷ್ಣ]

ಶ್ರೀಮಂತ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತಿದ್ದ ತಂಡ ಫ್ಯಾನ್ ನಲ್ಲಿ ರಹಸ್ಯ ಕ್ಯಾಮರಾ ಇಟ್ಟು ಚಿತ್ರೀಕರಣ ಮಾಡುತ್ತಿತ್ತು. ನಂತರ ಕರೆ ಮಾಡಿ ಹಣ ನೀಡುವಂತೆ ಬೇಡಿಕೆ ಇಡುತ್ತಿತ್ತು.[ಫೇಸ್ ಬುಕ್ ನಲ್ಲೂ ಹನಿ ಟ್ರ್ಯಾಪ್ ಮಾಡ್ತಾರೆ, ಹುಷಾರು!]
ಇಂಜಿನಿಯರ್ ವಿನೋದ್ ಕುಮಾರ್ ಎಂಬುವರು ಜ್ಞಾನಭಾರತಿ ಠಾಣೆಗೆ ದೂರು ದಾಖಲಿಸಿದ ನಂತರ ಕಾರ್ಯನಿರತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಿಂದೆ ವೈದ್ಯರೊಬ್ಬರನ್ನು ಅಶ್ಲೀಲ ದೃಶ್ಯಗಳಿರುವ ಸಿ.ಡಿ. ತೋರಿಸಿ ಬ್ಲಾಕ್ಮೇಲ್ ಮಾಡಲು ಪ್ರಯತ್ನಿಸಿದ್ದಕ್ಕೆ ನಟಿ ನಟಿ ನಯನಾಕೃಷ್ಣ ಅವರನ್ನು ಬಂಧಿಸಲಾಗಿತ್ತು.
More From
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications