ಅಶ್ವಿನಿ ಅಂಗಡಿ, ತಿಮ್ಮಕ್ಕ, ನಾಗತಿಹಳ್ಳಿ ರಮೇಶ್ ಗೆ ಸನ್ಮಾನ
ಬೆಂಗಳೂರು, ಆಗಸ್ಟ್ 23: ಹೂವಿನಹೊಳೆ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಅನಿಕೇತನ ಕನ್ನಡ ಬಳಗ ಮತ್ತು ಕುವೆಂಪು ಕಲಾ ನಿಕೇತನ ಸಹಯೋಗದಲ್ಲಿ ಮೂವರು ಸಾಧಕರಿಗೆ ವಿಶ್ವಾತ್ಮ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರದಾನ ಮಾಡಲಾಯಿತು.
ಹೂವಿನ ಹೊಳೆ ಪ್ರತಿಷ್ಠಾನ, ಸರ್ಕಾರಿ ನೌಕರರ ಸಂಘ, ಅನಿಕೇತನ ಕನ್ನಡ ಬಳಗ ಮತ್ತು ಕುವೆಂಪು ಕಲಾ ನಿಕೇತನ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಮಾರಂಭ ಯಶಸ್ವಿಯಾಗಿ ನಡೆಯಿತು.
ವಿಶ್ವಾತ್ಮಕ ನೆಲೆಯಲ್ಲಿ ಬದುಕಿನ ಉದ್ದಕ್ಕೂ ಯಾವುದೇ ಜಾತಿ -ಧರ್ಮ - ಮತಕ್ಕೆ ಸೀಮಿತ ವಾಗದೆ ಜಗವೆಲ್ಲ ಒಂದೇ - ಮನುಕುಲವೆಲ್ಲ ಒಂದೇ ಎನ್ನುವ ರೀತಿ ತಮ್ಮ ತಮ್ಮ ಕ್ಷೇತ್ರದಲ್ಲಿ ಮಾನವೀಯ ಕಳಕಳಿಯ ಸೇವೆಯನ್ನು ಮಾಡುತ್ತಿರುವ ಮೂರು ಜನ ಸಾಧಕರನ್ನು ''ವಿಶ್ವಾತ್ಮ'' ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

2015ನೇ ಸಾಲಿನ ಪ್ರಶಸ್ತಿಯನ್ನು ನಾಡೋಜ ಶ್ರೀಮತಿ ಸಾಲುಮರದ ತಿಮ್ಮಕ್ಕ, ಕವಿ ನಾಗತಿಹಳ್ಳಿ ರಮೇಶ್ ಹಾಗು ವಿಶಿಷ್ಟ ಚೇತನಗಳ ಸ್ಪೂರ್ತಿ ಸಂಕೇತ ಕುಮಾರಿ ಅಶ್ವಿನಿ ಅಂಗಡಿ ಅವರುಗಳಿಗೆ ಪ್ರದಾನ ಮಾಡಲಾಗಿದೆ, ಪ್ರಶಸ್ತಿಯು ತಲಾ 25 ಸಾವಿರ ನಗದು, ಸ್ಮರಣಿಕೆ , ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಮೂರ್ತಿ ಎ. ಜೆ ಸದಾಶಿವ ಅವರು ನೆರವೇರಿಸಿದರು ,ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರಾದ ಪಿ. ರಾಮಯ್ಯಅವರು ವಹಿಸಿದ್ದರು, ಪ್ರಶಸ್ತಿ ಪ್ರದಾನವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್ . ಎಸ್. ದೊರೆಸ್ವಾಮಿ ಅವರು ಮಾಡಿದರು.
ಮುಖ್ಯ ಅತಿಥಿಗಳಾಗಿ ಪ್ರೊ. ಚಂಪಾ ಅವರು, ಡಾ. ನಲ್ಲೂರು ಪ್ರಸಾದ್ ಅವರು, ವೇದಿಕೆಯಲ್ಲಿ ಜೊತೆಯಾದರು. ವಿಶೇಷ ಆಹ್ವಾನಿತರಾಗಿ ರಾಕೇಶ್ ಅಗರ್ ವಾಲ್, ಸರ್ಕಾರಿ ನೌಕರರ ಸಂಘದ ಪುಟ್ಟಸ್ವಾಮಿ, ಅನಿಕೇತನ ಮಾಯಣ್ಣ , ಕುವೆಂಪು ಕಲಾ ನಿಕೇತನದ ಡಿ . ಪ್ರಕಾಶ್ , ಹಾಗೂ ಪ್ರಶಾಂತ್ ಕಲ್ಲೂರು ಅವರುಗಳು ಸಹ ಉಪಸ್ಥಿತರಿದ್ದರು.

ಈ ಪ್ರಶಸ್ತಿಯನ್ನು ನಾಡಿನ ಹಿರಿಯ ಚೇತನಗಳಾದ ನ್ಯಾಯಮೂರ್ತಿ ಡಾ . ಎಂ . ಎನ್. ವೆಂಕಟಾಚಲಯ್ಯ , ನ್ಯಾಯಮೂರ್ತಿ ಎ. ಜೆ ಸದಾಶಿವ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್ . ಎಸ್. ದೊರೆಸ್ವಾಮಿ ,ಹಿರಿಯ ಪತ್ರಕರ್ತರಾದ ಪಿ. ರಾಮಯ್ಯ , ಹಿರಿಯ ಸಾಹಿತಿಗಳಾದ ಪ್ರೊ.ಚಂಪಾ, ಡಾ. ಆರ್. ಕೆ ನಲ್ಲೂರು ಪ್ರಸಾದ್, ಹೀಗೆ ವಿವಿಧ ರಂಗದ ಹಿರಿಯ - ಕಿರಿಯ ತಲೆಮಾರಿನ 50 ಕ್ಕೂ ಹೆಚ್ಚು ಗಣ್ಯರ ಸಲಹೆ ಸೂಚನೆಯನ್ನು ಪಡೆದು ಪ್ರತಿ ವರ್ಷ ಇಲ್ಲವೇ ಮೂರು ವರ್ಷಕ್ಕೆ ಒಮ್ಮೆ ಈ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ.
ಮುಂದಿನ ದಿನಗಳಲ್ಲಿ ಹೂವಿನಹೊಳೆ ಪ್ರತಿಷ್ಠಾನ ಇನ್ನು ಅನೇಕ ಅನೇಕ ಸಾಮಾಜಿಕ - ಶೈಕ್ಷಣಿಕ - ಸಾಹಿತ್ಯಿಕ - ಸಾಂಸ್ಕೃತಿಕ ಸೇವೆಗಳನ್ನು - ಕೆಲಸಗಳನ್ನು ಮಾಡುವ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಹೂವಿನಹೊಳೆ ಪ್ರತಿಷ್ಠಾನದ ಮುಖ್ಯಸ್ಥ ನಂದಿ ಜೆ ಹೂವಿನಹೊಳೆ ತಿಳಿಸಿದರು.
ನಂದಿ ಜೆ. ಹೂವಿನಹೊಳೆ ಸ್ಥಾಪಕ- ಅಧ್ಯಕ್ಷ : ಹೂವಿನಹೊಳೆ ಪ್ರತಿಷ್ಠಾನ
ನಾಯ್ಕಲ್ ದೊಡ್ಡಿ ಚಂದ್ರು , ಮಂಜು ಎಂ . ದೊಡ್ಡಮನಿ
ದೂ : 8088081008, 9008666668, 7353434040
E-MAIL: [email protected]
BLOG: nimmanandi.blogspot.in
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications