ಅಶ್ವಿನಿ ಅಂಗಡಿ, ತಿಮ್ಮಕ್ಕ, ನಾಗತಿಹಳ್ಳಿ ರಮೇಶ್ ಗೆ ಸನ್ಮಾನ
ಬೆಂಗಳೂರು, ಆಗಸ್ಟ್ 23: ಹೂವಿನಹೊಳೆ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಅನಿಕೇತನ ಕನ್ನಡ ಬಳಗ ಮತ್ತು ಕುವೆಂಪು ಕಲಾ ನಿಕೇತನ ಸಹಯೋಗದಲ್ಲಿ ಮೂವರು ಸಾಧಕರಿಗೆ ವಿಶ್ವಾತ್ಮ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರದಾನ ಮಾಡಲಾಯಿತು.
ಹೂವಿನ ಹೊಳೆ ಪ್ರತಿಷ್ಠಾನ, ಸರ್ಕಾರಿ ನೌಕರರ ಸಂಘ, ಅನಿಕೇತನ ಕನ್ನಡ ಬಳಗ ಮತ್ತು ಕುವೆಂಪು ಕಲಾ ನಿಕೇತನ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಮಾರಂಭ ಯಶಸ್ವಿಯಾಗಿ ನಡೆಯಿತು.
ವಿಶ್ವಾತ್ಮಕ ನೆಲೆಯಲ್ಲಿ ಬದುಕಿನ ಉದ್ದಕ್ಕೂ ಯಾವುದೇ ಜಾತಿ -ಧರ್ಮ - ಮತಕ್ಕೆ ಸೀಮಿತ ವಾಗದೆ ಜಗವೆಲ್ಲ ಒಂದೇ - ಮನುಕುಲವೆಲ್ಲ ಒಂದೇ ಎನ್ನುವ ರೀತಿ ತಮ್ಮ ತಮ್ಮ ಕ್ಷೇತ್ರದಲ್ಲಿ ಮಾನವೀಯ ಕಳಕಳಿಯ ಸೇವೆಯನ್ನು ಮಾಡುತ್ತಿರುವ ಮೂರು ಜನ ಸಾಧಕರನ್ನು ''ವಿಶ್ವಾತ್ಮ'' ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

2015ನೇ ಸಾಲಿನ ಪ್ರಶಸ್ತಿಯನ್ನು ನಾಡೋಜ ಶ್ರೀಮತಿ ಸಾಲುಮರದ ತಿಮ್ಮಕ್ಕ, ಕವಿ ನಾಗತಿಹಳ್ಳಿ ರಮೇಶ್ ಹಾಗು ವಿಶಿಷ್ಟ ಚೇತನಗಳ ಸ್ಪೂರ್ತಿ ಸಂಕೇತ ಕುಮಾರಿ ಅಶ್ವಿನಿ ಅಂಗಡಿ ಅವರುಗಳಿಗೆ ಪ್ರದಾನ ಮಾಡಲಾಗಿದೆ, ಪ್ರಶಸ್ತಿಯು ತಲಾ 25 ಸಾವಿರ ನಗದು, ಸ್ಮರಣಿಕೆ , ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಮೂರ್ತಿ ಎ. ಜೆ ಸದಾಶಿವ ಅವರು ನೆರವೇರಿಸಿದರು ,ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರಾದ ಪಿ. ರಾಮಯ್ಯಅವರು ವಹಿಸಿದ್ದರು, ಪ್ರಶಸ್ತಿ ಪ್ರದಾನವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್ . ಎಸ್. ದೊರೆಸ್ವಾಮಿ ಅವರು ಮಾಡಿದರು.
ಮುಖ್ಯ ಅತಿಥಿಗಳಾಗಿ ಪ್ರೊ. ಚಂಪಾ ಅವರು, ಡಾ. ನಲ್ಲೂರು ಪ್ರಸಾದ್ ಅವರು, ವೇದಿಕೆಯಲ್ಲಿ ಜೊತೆಯಾದರು. ವಿಶೇಷ ಆಹ್ವಾನಿತರಾಗಿ ರಾಕೇಶ್ ಅಗರ್ ವಾಲ್, ಸರ್ಕಾರಿ ನೌಕರರ ಸಂಘದ ಪುಟ್ಟಸ್ವಾಮಿ, ಅನಿಕೇತನ ಮಾಯಣ್ಣ , ಕುವೆಂಪು ಕಲಾ ನಿಕೇತನದ ಡಿ . ಪ್ರಕಾಶ್ , ಹಾಗೂ ಪ್ರಶಾಂತ್ ಕಲ್ಲೂರು ಅವರುಗಳು ಸಹ ಉಪಸ್ಥಿತರಿದ್ದರು.

ಈ ಪ್ರಶಸ್ತಿಯನ್ನು ನಾಡಿನ ಹಿರಿಯ ಚೇತನಗಳಾದ ನ್ಯಾಯಮೂರ್ತಿ ಡಾ . ಎಂ . ಎನ್. ವೆಂಕಟಾಚಲಯ್ಯ , ನ್ಯಾಯಮೂರ್ತಿ ಎ. ಜೆ ಸದಾಶಿವ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್ . ಎಸ್. ದೊರೆಸ್ವಾಮಿ ,ಹಿರಿಯ ಪತ್ರಕರ್ತರಾದ ಪಿ. ರಾಮಯ್ಯ , ಹಿರಿಯ ಸಾಹಿತಿಗಳಾದ ಪ್ರೊ.ಚಂಪಾ, ಡಾ. ಆರ್. ಕೆ ನಲ್ಲೂರು ಪ್ರಸಾದ್, ಹೀಗೆ ವಿವಿಧ ರಂಗದ ಹಿರಿಯ - ಕಿರಿಯ ತಲೆಮಾರಿನ 50 ಕ್ಕೂ ಹೆಚ್ಚು ಗಣ್ಯರ ಸಲಹೆ ಸೂಚನೆಯನ್ನು ಪಡೆದು ಪ್ರತಿ ವರ್ಷ ಇಲ್ಲವೇ ಮೂರು ವರ್ಷಕ್ಕೆ ಒಮ್ಮೆ ಈ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ.
ಮುಂದಿನ ದಿನಗಳಲ್ಲಿ ಹೂವಿನಹೊಳೆ ಪ್ರತಿಷ್ಠಾನ ಇನ್ನು ಅನೇಕ ಅನೇಕ ಸಾಮಾಜಿಕ - ಶೈಕ್ಷಣಿಕ - ಸಾಹಿತ್ಯಿಕ - ಸಾಂಸ್ಕೃತಿಕ ಸೇವೆಗಳನ್ನು - ಕೆಲಸಗಳನ್ನು ಮಾಡುವ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಹೂವಿನಹೊಳೆ ಪ್ರತಿಷ್ಠಾನದ ಮುಖ್ಯಸ್ಥ ನಂದಿ ಜೆ ಹೂವಿನಹೊಳೆ ತಿಳಿಸಿದರು.
ನಂದಿ ಜೆ. ಹೂವಿನಹೊಳೆ ಸ್ಥಾಪಕ- ಅಧ್ಯಕ್ಷ : ಹೂವಿನಹೊಳೆ ಪ್ರತಿಷ್ಠಾನ
ನಾಯ್ಕಲ್ ದೊಡ್ಡಿ ಚಂದ್ರು , ಮಂಜು ಎಂ . ದೊಡ್ಡಮನಿ
ದೂ : 8088081008, 9008666668, 7353434040
E-MAIL: [email protected]
BLOG: nimmanandi.blogspot.in
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications