"ಬೆಂಕಿ ಅಪಘಾತಕ್ಕೆ ಬಿಬಿಎಂಪಿ ಅಧಿಕಾರಿಗಳ ಭ್ರಷ್ಟಾಚಾರವೇ ಕಾರಣ''
ಬೆಂಗಳೂರು, ನ.12: ಹೊಸಗುಡ್ಡದಹಳ್ಳಿ ಅವಘಡ ನಡೆಯಲು ಬಿಬಿಎಂಪಿಯೇ ನೇರ ಹೊಣೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆರೋಪಿಸಿದ್ದಾರೆ.
ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಘೋರ ಬೆಂಕಿ ಅವಘಡದಿಂದ ನೂರಾರು ಕುಟುಂಬಗಳು ಬೀದಿಪಾಲಾಗಿವೆ. ಆದರೆ ಇದುವರೆಗೂ ಆ ಕುಟುಂಬಗಳಿಗೆ ಪುರ್ನವಸತಿ ಕಲ್ಪಿಸಿಲ್ಲ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕ ಕೃಷ್ಣಪ್ಪ ನಾಮಕಾವಸ್ಥೆಗೆ ಬಂದು ಕೈ ಬೀಸಿ ಹೋಗಿದ್ದು ಬಿಟ್ಟರೆ ಜನರ ಕಷ್ಟ ಕೇಳಿಲ್ಲ ಇಂತಹ ನಾಲಾಯಕ್ ಜನ ನಾಯಕರಿಗೆ ನಾಚಿಕೆ ಆಗಬೇಕು, ಜನರನ್ನು ನಡುಬೀದಿಯಲ್ಲಿ ಮಲಗಿಸಿದ ಇವರಿಗೆ ಮಾನವೀಯತೆ ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆನ್ಲೈನ್ ಮೂಲಕ ಉದ್ದಿಮೆ ಪರವಾನಗಿ ನೀಡಲಾಗುವುದು ಎಂದು ಮಾಧ್ಯಮಗಳ ಮುಂದೆ ಸುಳ್ಳು ಹೇಳಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ತಮ್ಮ ಕೆಳಗಿನ ಅಧಿಕಾರಿಗಳನ್ನು ರಕ್ಷಿಸುತ್ತಿದ್ದಾರೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಹಾಳುಗೆಡವಿ, ಉದ್ದಿಮೆದಾರರನ್ನು ಕಚೇರಿಗೆ ಕರೆಸಿ ನವೀಕರಣದ ಹೆಸರಿನಲ್ಲಿ ಹಣ ಕೀಳಲಾಗುತ್ತಿದೆ. ಈ ಘೋರ ದುರಂತಕ್ಕೆ ಎಲ್ಲಾ ಮಾಜಿ ಮೇಯರ್ಗಳು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಕಾರಣ, ಬಿಬಿಎಂಪಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನವಸತಿ ಪ್ರದೇಶದಲ್ಲಿ ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಬೆಂಗಳೂರಿನಲ್ಲಿ ಉದ್ದಿಮೆ ತೆರೆಯುವುದು ಇನ್ನು ಸುಲಭ ಎಂದು ಹೇಳಿದ್ದ ಬಿಬಿಎಂಪಿ ಹಿಂಬಾಗಿಲ ಮೂಲಕ ಉದ್ದಿಮೆದಾರರಿಂದ ಹಣ ದೋಚುತ್ತಿದ್ದು, ಜನವಸತಿ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಿದರೂ ಸರಿಯಾಗಿ ಪರಿಶೀಲಿಸದೆ ಜನಸಾಮಾನ್ಯರ ಜೀವದ ಜತೆ ಚೆಲ್ಲಾಟವಾಡುತ್ತಿದೆ. ಈ ಎಲ್ಲಾ ಅವಘಡಗಳ ಹಿಂದೆ ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಅಧಿಕಾರಿಗಳ ವ್ಯಾಪಕ ಅವ್ಯವಹಾರ ಇದೆ. ಪರವಾನಗಿ ನೀಡುವುದೇ ದಂದೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಅನಧಿಕೃತವಾಗಿ ನಡೆಯುತ್ತಿರುವ ಉದ್ದಿಮೆಗಳ ಸಂಖ್ಯೆ ದುಪ್ಪಟ್ಟು
198 ವಾರ್ಡ್ಗಳಲ್ಲಿ ಪರವಾನಗಿ ಪಡೆದು ಅಧಿಕೃತವಾಗಿ 50,383, ಅನಧಿಕೃತವಾಗಿ 59,130 ಉದ್ದಿಮೆಗಳು ನಡೆಯುತ್ತಿವೆ ಎಂದು ಆರೋಗ್ಯ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ಈ ಸಮೀಕ್ಷೆ ಸಾಕಷ್ಟು ಅನುಮಾನ ಮೂಡಿಸಿದ ಕಾರಣ ಮತ್ತೆ ಮರು ಸಮೀಕ್ಷೆ ನಡೆಸಲಾಯಿತು. ಆಗ 1.28 ಲಕ್ಷ ಅನಧಿಕೃತ, 50,150 ಅಧಿಕೃತ ಒಟ್ಟು 1,79,001 ಉದ್ದಿಮೆಗಳಿರುವುದು ಬೆಳಕಿಗೆ ಬಂದಿತ್ತು. ಅಂದಾಜಿನ ಪ್ರಕಾರ ನಗರದಲ್ಲಿ 5 ಲಕ್ಷ ಪರವಾನಗಿ ಪಡೆಯದ ಉದ್ದಿಮೆಗಳಿದ್ದು ಇವುಗಳಿಂದ ಎಲ್ಲಾ ರೀತಿಯ ಅಧಿಕಾರಿಗಳು ಕೋಟ್ಯಂತರ ರೂ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications