ಜಮೀನಿನ ಗಲಾಟೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಕೊಲೆಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ: ಶರತ್ ಬಚ್ಚೇಗೌಡ
ಬೆಂಗಳೂರು, ಮೇ 17: ಜಮೀನು ವಿಚಾರವಾಗಿ ಕಿತ್ತಾಡಿಕೊಂಡು ನಡೆದ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಕಾಂಗ್ರೆಸ್ನವರ ಮೇಲೆ ಹಾಕುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಶಾಸಕ ಶರತ್ ಬಚ್ಚೇಗೌಡ ಎಂಟಿಬಿ ನಾಗರಾಜ್ ವಿರುದ್ಧ ಕಿಡಿ ಕಾರಿದ್ದಾರೆ.
ಬುಧವಾರ ಬೆಂಡಿಗಾನಹಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೊಸಕೋಟೆ ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಎಂಬುವವರ ಕೊಲೆ ನಡೆದಿತ್ತು. ಅದನ್ನು ಕಾಂಗ್ರೆಸ್ನವರ ಮೇಲೆ ಎತ್ತಿಹಾಕುವ ಪ್ರಯತ್ನ ನಡೆಯುತ್ತಿದೆ. ಅಸಲಿಗೆ ಈ ಕೊಲೆ ಜಮೀನು ವ್ಯಾಜ್ಯದ ವಿಚಾರವಾಗಿ ನಡೆದಿದೆ ಎಂದು ಅವರು ಸ್ಪಷ್ಟಪಡಿಸಿದರು.

ಘಟನೆಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಂಧವಿಲ್ಲ. ಜಮೀನು ವಿಚಾರಕ್ಕಾಗಿ ಕೃಷ್ಣಪ್ಪ ಮತ್ತು ಗಣೇಶಪ್ಪ ಸಹೋದರರ ಮಧ್ಯೆ ಜಗಳ ನಡೆದಿದೆ. ಅವರಿಬ್ಬರು ಎರಡು ತಿಂಗಳ ಹಿಂದೆ ಬಿಜೆಪಿ ಸೇರಿದ್ದರು. ನಂತರ ಎಂಟಿಬಿ ನಾಯಕರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದರು. ಇವರಿಬ್ಬರ ಪೈಕಿ ಜಗಳದಲ್ಲಿ ಕೃಷ್ಣಪ್ಪ ಅವರು ಮೃತಪಟ್ಟಿದ್ದಾರೆ.
ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ
ಈ ಕೊಲೆ ಹಿಂದೆ ಜಮೀನಿನ ವ್ಯಾಜ್ಯವಿದೆ, ಹೊರತು ಕಾಂಗ್ರೆಸ್ ಗೂ ಈ ಕೃಷ್ಣಪ್ಪನವರ ಕೊಲೆಗೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರು ಕಾಂಗ್ರೆಸ್ನವರಿಂದ ಕೃತ್ಯ ನಡೆದಿದೆ ನಡೆದಿದೆ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಈ ಮೂಲಕ ನನ್ನ ಹೆಸರಿಗೆ ಮಸಿ ಬಳೆಯುವ ದುರುದ್ದೇಶದಿಂದಲೇ ಇಂತಹ ವಿಫಲತ ಪ್ರಯತ್ನ ಮಾಡಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೊಲೆ ಪ್ರಕರಣ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ದೂರಿನಲ್ಲಿ ಕಾಂಗ್ರೆಸ್ ಕುರಿತಾಗಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದ ಶರತ್ ಬಚ್ಚೇಗೌಡರು, ಮೃತರಿಗೆ ಇದೇ ವೇಳೆ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಪಕ್ಷದವರಿಗೆ ಸೋಲಿನ ಹತಾಶೆ ಕಾಡುತ್ತಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಾಗಿದ್ದನ್ನು ಅವರಿಗೆ ತೆಡೆದುಕೊಳ್ಳಲು ಆಗದೇ ಹಿಗೆಲ್ಲ ಮಾಡುತ್ತಿದ್ದಾರೆ. ನಗರದ ಪಾವರ್ತಿಪುರದ ಎಂಟಿಬಿ ವೃತ್ತ ಧ್ವಂಸ ಘಟನೆಯನ್ನು ಅವರು ಖಂಡಿಸಿದ್ದಾರೆ. ಯನಕುಂಟೆ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಇಟ್ಟವರನ್ನು ಆದಷ್ಟು ಶೀಘ್ರವೇ ಬಂಧಿಸಲಾಗುವುದು ಎಂದು ಅವರು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications