ಶರತ್ ಬಚ್ಚೇಗೌಡಗೆ ವೋಟ್ ಹಾಕಬೇಡಿ ಎಂದು ಹಿಂದೆ ನಾನೇ ಹೇಳಿದ್ದೆ
ಬೆಂಗಳೂರು, ಫೆ 25: ನಿರೀಕ್ಷೆಯಂತೆ ಹೊಸಕೋಟೆ ಕ್ಷೇತ್ರದ ಯುವ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ಸಿನ ಹಿರಿಯ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ, ಗುರುವಾರ ಬಾಹ್ಯ ಬೆಂಬಲವನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಭೈರತಿ ಸುರೇಶ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, "ಕ್ಷೇತ್ರದಲ್ಲಿನ ಅಭಿವೃದ್ದಿಗೆ ನಮ್ಮ ಸಹಕಾರ ಬೇಕೆಂದು ಶರತ್ ಅವರು ಬಂದಿದ್ದಾರೆ. ಅವರಿಗೆ ಕಾಂಗ್ರೆಸ್ಸಿನ ಎಲ್ಲಾ ಬೆಂಬಲವೂ ಸಿಗಲಿದೆ"ಎಂದು ಹೇಳಿದರು.

"ಈ ಹಿಂದೆ ನಾನೇ ಶರತ್ ಅವರಿಗೆ ವೋಟ್ ಹಾಕಬೇಡಿ, ಭೈರತಿ ಅವರ ಪತ್ನಿಗೆ ಮತ ಹಾಕಿ ಎಂದು ಹೇಳಿದ್ದೆ. ಆದರೂ, ಕ್ಷೇತ್ರದ ಜನರು ಶರತ್ ಅವರನ್ನೇ ಆಶೀರ್ವದಿಸಿದರು. ನಮ್ಮ ಸಂಪೂರ್ಣ ಬೆಂಬಲ ಅವರಿಗಿರಲಿದೆ"ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
"ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುವ ಜೊತೆಗೆ, ಹೊಸಕೋಟೆಯಲ್ಲಿ ನಡೆಯುತ್ತಿರುವ ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ ನಾವು ಕೈಜೋಡಿಸಲಿದ್ದೇವೆ"ಎಂದು ಸಿದ್ದರಾಮಯ್ಯ ಹೇಳಿದರು.
"ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾದ ಶರತ್ ಬಚ್ಚೇಗೌಡ ಅವರು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧದ ತಮ್ಮ ಹೋರಾಟಗಳಿಗೆ ಕಾಂಗ್ರೆಸ್ನ ಬೆಂಬಲ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಶರತ್ ಬಚ್ಚೇಗೌಡ ಅವರು ಮತ್ತು ನಾವು ಒಟ್ಟಾಗಿ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗ್ರತಿ ಮೂಡಿಸುವ ಕೆಲಸ ಮಾಡಲಿದ್ದೇವೆ"ಎಂದು ಸಿದ್ದರಾಮಯ್ಯ ಹೇಳಿದರು.
Recommended Video
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications