ನಳಪಾಕದ ಹಿಂದಿರುವವರಿಗೆ ನಟಿ ನೀತು ಸನ್ಮಾನ
ಬೆಂಗಳೂರು, ಆಗಸ್ಟ್ 23: ನಾಲಗೆ ಮೇಲೆ ನೀರೂರಿಸುವ ತಿಂಡಿ ತಿಂದು, ಬಾಯಿ ಚಪ್ಪರಿಸಿ ಗೆಳೆಯ-ಗೆಳತಿಯರಿಗೆ ಹೋಟೆಲ್ ಹೆಸರು-ವಿಳಾಸ ಮೆಸೇಜ್ ಮಾಡಿ ಹೋಗ್ತೀವಿ. ಆದರೆ ಆ ತಿಂಡಿ ಅಷ್ಟು ಚೆನ್ನಾಗಿ ಆಗುವುದಕ್ಕೆ ಶ್ರಮಿಸಿದವರಿಗೆ 'ಸೂಪರ್ರಾಗಿದೆ ಗುರೂ..' ಅಂತ ಒಂದು ಮಾತು ಹೇಳಿರ್ತೀವಾ? ಇಲ್ಲ ಅಂತ ಹೇಳೋದಿಕ್ಕೆ ಆಗದಿದ್ದರೂ ಅಪರೂಪ ಅಂತ ಹೇಳಬಹುದು.
ಇದೇ ಮಾತನ್ನು ನೆನಪಿಸಿಕೊಳ್ಳುವ ಹಾಗೆ ಕೆ.ಅರ್.ಪುರಂ ಶಾಸಕ ಭೈರತಿ ಬಸವರಾಜ್ ಹೋಟೆಲ್ ಕಾರ್ಮಿಕರನ್ನು ಹೊಗಳಿದರು. ಯಾವುದೇ ಹೋಟೆಲ್ ಉದ್ಧಾರ ಆಗಬೇಕು ಅಂದರೆ ಕಾರ್ಮಿಕರ ಶ್ರಮ ಮುಖ್ಯ ಕಾರಣ ಎಂದರು. ಒಟ್ಟಿನಲ್ಲಿ ಕೆ.ಆರ್.ಪುರಂನಲ್ಲಿರುವ 'ಶ್ರೀಗುರು ನಳಪಾಕ' ಹೋಟೆಲ್ ಆಯೋಜಿಸಿದ್ದ ಕಾರ್ಮಿಕರ ಸನ್ಮಾನ ಕಾರ್ಯಕ್ರಮವನ್ನು ಶಾಸಕರು ಬಳಸಿದ್ದು ಅಲ್ಲಿನ ಕಾರ್ಮಿಕರ ಶ್ರಮವನ್ನು ನೆನಪಿಸಿಕೊಳ್ಳುವುದಕ್ಕೆ.

ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎನ್.ನಾಗರಾಜು ಕೂಡ ಹಾಜರಿದ್ದರು. ಗ್ರಾಹಕರಿಗೆ ರುಚಿಕರವಾದ ಆಹಾರ ಸೇವೆ ನೀಡುವ ಕಾರ್ಮಿಕರ ಬಗ್ಗೆ ಮೆಚ್ಚುಗೆ ಮಾತಾಡುವವರೇ ಕಡಿಮೆ. ಅಂಥದ್ದರಲ್ಲಿ ಈ ರೀತಿಯ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದು ತುಂಬ ಖುಷಿ ವಿಷಯ ಎಂದರು ಚಿತ್ರನಟಿ ನೀತು.[ಆರಡಿ ನೀತು ಹುಯ್ದ ಹನ್ನೆರಡಡಿ ಬೃಹತ್ ದೋಸೆ]
ಇದೇ ಸಂದರ್ಭದಲ್ಲಿ ಗಣೇಶ ಹಬ್ಬದಲ್ಲಿ ಮಣ್ಣಿನ ಗಣಪತಿಯನ್ನು ಪೂಜಿಸುವ ಕುರಿತು ಜನರಲ್ಲಿ ಅರಿವು ಮೂಡಿಸಲು ಮಾತಾಡ್ತಾನೆ ನೋಡಿ ನಮ್ಮ ಗಣೇಶ' ಎಂಬ ಬೀದಿ ನಾಟಕದ ಪ್ರದರ್ಶನ ನಡೆಯಿತು.
ಬಿಬಿಎಂಪಿ ಸದಸ್ಯರಾದ ಜಯಪ್ರಕಾಶ್, ಎಂ.ಎನ್.ಶ್ರೀಕಾಂತಗೌಡರು, ಪೂರ್ಣಿಮಾ ಶ್ರೀನಿವಾಸ್, ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ರಮಣಶ್ರೀ ಗೂಪ್ ಅಧ್ಯಕ್ಷ ಎಸ್.ಷಡಕ್ಷರಿ, ಕರ್ನಾಟಕ ಬ್ಯಾಂಕ್ ಉಪ ಮಹಾಪ್ರಬಂಧಕ ಗೋಕುಲದಾಸ ಪೈ, ಹೋಟೆಲ್ ಮಾಲೀಕ ಮಧುಸೂದನ್, ಮುಖ್ಯ ಕಟ್ಟಡ ವಿನ್ಯಾಸಗಾರ ಚಂದ್ರ ಆಚಾರ್ ಉಪಸ್ಥಿತರಿದ್ದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications