ಗೃಹ ನಿರ್ಮಾಣ ಸಂಘದಲ್ಲಿ ಅಕ್ರಮ: ಅಧ್ಯಕ್ಷ ಸೇರಿ ಏಳು ಮಂದಿಗೆ ಜೈಲು

ಬೆಂಗಳೂರು, ಮೇ 25; ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿ ಸದಸ್ಯರಲ್ಲದ ವ್ಯಕ್ತಿಗಳಿಗೂ ಸೈಟು ಹಂಚಿಕೆ ಮಾಡಿದ್ದ ಆರೋಪ ಸಂಬಂಧ ನಗರದ ಏರ್‌ಕ್ರಾಫ್ಟ್ ಎಂಪ್ಲಾಯೀಸ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಆರು ಮಂದಿ ನಿರ್ದೇಶಕರಿಗೆ ತಲಾ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಇದು ಇತರೆ ಗೃಹ ನಿರ್ಮಾಣ ಸಹಕಾರ ಸಂಘಗಳಿಗೆ ಎಚ್ಚರಿಕೆ ಗಂಟೆಯಾಗಿದೆ.

ಸೊಸೈಟಿಯ ಅಧ್ಯಕ್ಷ ಕೆ. ಭೂಪಾಲ, ನಿರ್ದೇಶಕರಾದ ಎಸ್. ಎನ್. ಶಿವಮೂರ್ತಿ, ಸೋಮಣ್ಣ, ಎಸ್. ಸದಾಶಿವಪ್ಪ, ಕೆ. ಸಿ. ಸರಳ, ಡಿ. ಶ್ರೀನಿವಾಸ್ ಹಾಗೂ ಸಿ. ಎಚ್. ಶಂಕರ್ ಶಿಕ್ಷೆಗೆ ಗುರಿಯಾಗಿರುವವರು. ಸೊಸೈಟಿಯ ಸದಸ್ಯರಾದ ಎಂ. ಶಶಿಧರನ್ ಹಾಗೂ ವಿ. ಮುನಿಯಪ್ಪ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಹಾಗೂ ಎಂ. ಜಿ. ಉಮಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

Housing Cooperative Society Scam

ನ್ಯಾಯಾಲಯ ಏನು ಹೇಳಿದೆ?; ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ ಬಳಿಕ ಈ ಏಳು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಿ ಎಲ್ಲರಿಗೂ ಮೂರು ತಿಂಗಳು ಸಾಧಾರಣ ಜೈಲು ಶಿಕ್ಷೆ ಹಾಗೂ ತಲಾ ಎರಡು ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 15 ದಿನಗಳ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಹೈಕೋರ್ಟ್ ಏಕಸದಸ್ಯ ಪೀಠವು 2017ರಲ್ಲಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿಯೇ ಉಲ್ಲಂಘಿಸಿ, ಎರಡು ನಿವೇಶನಗಳನ್ನು ಸೊಸೈಟಿಯ ಸದಸ್ಯರಲ್ಲದ ಮೂರನೇ ವ್ಯಕ್ತಿಗಳಿಗೆ ಪರಭಾರೆ ಮಾಡಲಾಗಿದೆ. ಪ್ರಕರಣದ ಏಳೂ ಆರೋಪಿಗಳ ವಿರುದ್ಧದ ಆರೋಪಗಳು ಸಂಶಯಾತೀತವಾಗಿ ಸಾಬೀತಾಗಿದೆ. ಹಾಗಾಗಿ ಅವರಿಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?; ಸೊಸೈಟಿಯ ಸದಸ್ಯರು ಮನೆ ನಿರ್ಮಿಸಲು ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ ಜಮೀನು ವಶಪಡಿಸಿಕೊಂಡು ಅಲ್ಲಿ ಬಡಾವಣೆ ನಿರ್ಮಿಸಲಾಗಿದೆ. ಆದರೆ, ಸೊಸೈಟಿ ಮತ್ತು ಸದಸ್ಯರ ನಡುವೆ ಕೆಲವೊಂದು ವಿವಾದ ಉಂಟಾಗಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಏಕ ಸದಸ್ಯಪೀಠವು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸಹಕಾರ ಇಲಾಖೆ ಜಂಟಿ ನಿರ್ದೇಶಕರಿಗೆ ನಿರ್ದೇಶಿಸಿತ್ತು. ಅದರಂತೆ ತನಿಖೆ ನಡೆಸಿದ್ದ ಜಂಟಿ ನಿರ್ದೇಶಕರು, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ 11 ಆರೋಪ ಹೊರಿಸಿ 2012ರಲ್ಲಿ ವರದಿ ಸಲ್ಲಿಸಿದ್ದರು.

Housing Cooperative Society Scam

ನಂತರ ಹಿರಿಯ ಸದಸ್ಯರ ಪಟ್ಟಿ (ಜೇಷ್ಠತಾ) ಸಿದ್ಧಪಡಿಸಬೇಕು. ಆ ಪಟ್ಟಿಯು ಸರ್ಕಾರದಿಂದ ಅನುಮೋದನೆ ಪಡೆಯುವವರೆಗೂ ನಿವೇಶನ ಹಂಚಿಕೆಗಾಗಿ ಸದಸ್ಯರು ಸಲ್ಲಿಸಿದ ಯಾವುದೇ ಮನವಿ ಪರಿಗಣಿಸಬಾರದು ಎಂದು ಸೊಸೈಟಿಯ ಕಾರ್ಯಕಾರಿ ಸಮಿತಿಗೆ ಜಂಟಿ ನಿರ್ದೇಶಕರು 2013ರ ಏಪ್ರಿಲ್‌ನಲ್ಲಿ ನಿರ್ದೇಶಿಸಿದ್ದರು. ಜಂಟಿ ನಿರ್ದೇಶಕರ ನಿರ್ದೇಶನಗಳನ್ನು ಸೊಸೈಟಿ ಜಾರಿಗೊಳಿಸಿಲ್ಲ ಎಂದು ಆರೋಪಿಸಿ ಸೊಸೈಟಿಯ ಸದಸ್ಯರು ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸಹಕಾರ ಸಂಘಗಳ ರಿಜಿಸ್ಟ್ರಾರ್ ಅನುಮೋದಿಸಿದ ಸದ್ಯಸರ ಜೇಷ್ಠತಾ ಪಟ್ಟಿ ಅನುಸರಿಸದೆಯೇ ಯಾವುದೇ ನಿವೇಶನ ಹಂಚಿಕೆ ಮಾಡಬಾರದು ಮತ್ತು ಮಾರಾಟ ಕ್ರಯ ಮಾಡಿಕೊಡಬಾರದು ಎಂದು 2017ರ ಆ.7ರಂದು ಮಧ್ಯಂತರ ಆದೇಶ ಮಾಡಿತ್ತು.

ಈ ಮಧ್ಯೆ 2020ರಲ್ಲಿ ಸೊಸೈಟಿಯ ಸದಸ್ಯರಾದ ಎಂ. ಶಶಿಧರನ್ ಮತ್ತು ವಿ. ಮುನಿಯಪ್ಪ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ, ಸಹಕಾರ ಸಂಘಗಳ ರಿಜಿಸ್ಟ್ರಾರ್ ಅವರಿಂದ ಸದಸ್ಯರ ಜೇಷ್ಠತಾ ಪಟ್ಟಿಗೆ ಅನುಮೋದನೆ ಪಡೆಯದೆ ಸೊಸೈಟಿಯು ಸದಸ್ಯರಲ್ಲದ ಮೂರನೇ ವ್ಯಕ್ತಿಗಳಿಗೆ 2020ರ ಮಾ.3ರಂದು ಎರಡು ನಿವೇಶನ ಮಾರಾಟ ಮಾಡಿ ಕ್ರಯ ಮಾಡಿಕೊಟ್ಟಿದ್ದೆ. ತನ್ಮೂಲಕ ಉದ್ದೇಶಪೂರ್ವಕವಾಗಿ ಏಕ ಸದಸ್ಯ ಪೀಠದ ಆದೇಶ ಉಲ್ಲಂಘಿಸಿದ್ದು, ಸಂಬಂಧಪಟ್ಟ ಅರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+