ನಕ್ಷೆಯಲ್ಲಿ ಮಾತ್ರ ಇವೆ ಕೆರೆಗಳು, ಸದನ ಸಮಿತಿಗೆ ಅಚ್ಚರಿ!
ಬೆಂಗಳೂರು, ಮೇ 19 : ಬೆಂಗಳೂರಿನಲ್ಲಿ ನಡೆದಿರುವ ಕೆರೆ ಒತ್ತುವರಿ ಕುರಿತು ವರದಿ ನೀಡಲು ರಚನೆ ಮಾಡಿರುವ ಸದನ ಸಮಿತಿ ಸದಸ್ಯರು ಮಂಗಳವಾರ ವಿವಿಧ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದೊರೆಸಾನಿಪಾಳ್ಯದ ಕೆರೆ ಸಂಪೂರ್ಣ ಒತ್ತುವರಿಯಾಗಿರುವುದು ತಿಳಿದುಬಂತು, ನಕ್ಷೆಯಲ್ಲಿ ಮಾತ್ರ ಕೆರೆ ಇತ್ತು. [ಬೆಂಗಳೂರು ಕೆರೆಗಳ ಸ್ಥಿತಿ ನೋಡಿ]
ಶಾಸಕ ಕೆ.ಬಿ.ಕೋಳಿವಾಡ ನೇತೃತ್ವದ ಸದನ ಸಮಿತಿ ಮಂಗಳವಾರ ಬೆಳಗ್ಗೆ ಶಾಸಕರ ಭವನದಲ್ಲಿ ಸಭೆ ನಡೆಸಿದ ಬಳಿಕ ಕೆರೆಗಳ ಪರಿಶೀಲನೆಗೆ ತೆರಳಿತು. ಬಿಜೆಪಿ ಶಾಸಕ ಸುರೇಶ್ ಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯ ಜೊತೆ ಬಿಡಿಎ ಆಯುಕ್ತ ಶ್ಯಾಂ ಭಟ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. [ಯಮಲೂರು ಕೆರೆ ನೊರೆಯಲ್ಲಿ ಮತ್ತೆ ಬೆಂಕಿ]
ಮೊದಲು ಕೆಂಪಾಂಬುದಿ ಕೆರೆ ಪರಿಶೀಲನೆ ನಡೆಸಲಾಯಿತು. ಕೆರೆಯ ಎಷ್ಟು ಜಾಗ ಒತ್ತುವರಿಯಾಗಿದೆ? ಎಂದು ಕೆ.ಬಿ.ಕೋಳಿವಾಡ ಅವರು ಕೇಳಿದ ಪ್ರಶ್ನೆಗೆ ಅಧಿಕಾರಿಗಳ ಬಳಿ ಉತ್ತರವಿರಲಿಲ್ಲ. ಕೆಂಪಾಂಬುದಿ ಕೆರೆಯ 47 ಎಕರೆ 7 ಗುಂಟೆಯಲ್ಲಿ ಕೇವಲ 3 ಎಕರೆ 34 ಗುಂಟೆ ಮಾತ್ರ ಉಳಿದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿತು. [ಬೆಂಗಳೂರಿಗರ ಆತಂಕ ದೂರ ಮಾಡಿದ ಸರ್ಕಾರ]
ಕೆಂಪಾಬುದಿ ಕೆರೆ ಬಳಿಕ ಯಡಿಯೂರು ಕೆರೆಗೆ ಸಮಿತಿ ಭೇಟಿ ನೀಡಿತು. ಈ ವೇಳೆ 262 ಜನರು ಈ ಕೆರೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಮಿತಿ ಅಧ್ಯಕ್ಷ ಕೋಳಿವಾಡ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದರು. ಚಿತ್ರಗಳಲ್ಲಿ ನೋಡಿ ಸದನ ಸಮಿತಿ ಭೇಟಿ

ಒತ್ತುವರಿ ಪರಿಶೀಲನೆ ಆರಂಭಿಸಿದ ಸಮಿತಿ
ಬೆಂಗಳೂರಿನಲ್ಲಿ ನಡೆದಿರುವ ಕೆರೆ ಒತ್ತುವರಿ ಕುರಿತು ವರದಿ ನೀಡಲು ರಚನೆ ಮಾಡಿರುವ ಸದನ ಸಮಿತಿ ಸದಸ್ಯರು ಮಂಗಳವಾರ ವಿವಿಧ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಕೆ.ಬಿ.ಕೋಳಿವಾಡ ನೇತೃತ್ವದ ಸದನ ಸಮಿತಿಯಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂತಾದವರಿದ್ದಾರೆ.

ವಿವಿಧ ಕೆರೆಗಳಿಗೆ ಭೇಟಿ ಸಮಿತಿ ಭೇಟಿ
ಮಂಗಳವಾರ ಸಮಿತಿ ಕೆಂಪಾಂಬುಧಿ, ಯಡಿಯೂರು, ಅರಕೆರೆ, ದೊರೆಸಾನಿಪಾಳ್ಯ, ಪುಟ್ಟೇನಹಳ್ಳಿ, ದೊರೆಕೆರೆ, ಚಿಕ್ಕಲಸಂದ್ರ, ಇಟ್ಟುಮಡು, ಹಲಗೆವಡೇರಹಳ್ಳಿ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಅಧಿಕಾರಿಗಳ ಮೇಲೆ ಕೋಳಿವಾಡ ಗರಂ
ಸಮಿತಿ ಮೊದಲು ಕೆಂಪಾಂಬುದಿ ಕೆರೆಗೆ ಭೇಟಿ ನೀಡಿತು. ಕೆರೆಯ 47 ಎಕರೆ 7 ಗುಂಟೆಯಲ್ಲಿ ಕೇವಲ 3 ಎಕರೆ 34 ಗುಂಟೆ ಮಾತ್ರ ಉಳಿದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿತು. ಇಷ್ಟು ಜಾಗ ಒತ್ತುವರಿ ಆಗುತ ತನಕ ಏನು ಮಾಡುತ್ತಿದ್ದಿರಿ? ಎಂದು ಕೋಳಿವಾಡ ಅವರು ಬಿಡಿಎ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

262 ಜನರಿಂದ ಕೆರೆ ಒತ್ತುವರಿ
ಯಡಿಯೂರು ಕೆರೆಗೆ ಭೇಟಿ ನೀಡಿದಾಗ ಎಚ್.ಡಿ.ಕುಮಾರಸ್ವಾಮಿ ಅವರು, 262 ಜನರು ಈ ಕೆರೆಯನ್ನು ಒತ್ತುವರಿ ಮಾಡಿದ್ದಾರೆ ಎಂದು ಕೋಳಿವಾಡ ಅವರಿಗೆ ಮಾಹಿತಿ ನೀಡಿದರು. ಬಡವರು ಒತ್ತುವರಿ ಮಾಡಿದ್ದರೆ ಇಷ್ಟರೊಳಗೆ ತೆರವು ಮಾಡುತ್ತಿದ್ದರು. ಶ್ರೀಮಂತರಾಗಿರುವುದಕ್ಕೆ ಬಿಟ್ಟಿದ್ದಾರೆ ಎಂದು ಸ್ಥಳೀಯ ನಾಗರಿಕರು ಬಿಡಿಎ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. [ಯಡಿಯೂರು ಕೆರೆ ಮೇಲೊಂದು ಪಕ್ಷಿ ನೋಟ]

ಯಾರನ್ನೂ ರಕ್ಷಿಸುವುದಿಲ್ಲ : ಕೋಳಿವಾಡ
ಕೆರೆ ಒತ್ತುವರಿ ಮಾಡಿದ ಯಾವ ಭೂಗಳ್ಳರನ್ನು ರಕ್ಷಣೆ ಮಾಡುವುದಿಲ್ಲ. ಎಲ್ಲವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಕೆ.ಬಿ.ಕೋಳಿವಾಡ ಹೇಳಿದರು. ಕೆರೆ ಒತ್ತುವರಿ ಮಾಡಿ ನಿರ್ಮಿಸಿದ ಜೆಪಿನಗರ ಡಾಲರ್ಸ್ ಕಾಲೋನಿ ತೆರವುಗೊಳಿಸಲು ಶಿಫಾರಸು ಮಾಡಲಿದ್ದೇವೆ ಎಂದು ಅವರು ಹೇಳಿದರು.

ಸಮಿತಿಯ ವರದಿ ಹೆಚ್ಚು ಮಹತ್ವ ಪಡೆದಿದೆ
ಬೆಂಗಳೂರಿನಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆರೆ ಒತ್ತುವರಿ ತೆರವಿಗೆ ಸಂಬಂಧಿಸಿದ ಸದನ ಸಮಿತಿಯ ವರದಿ ಬರುವವರೆಗೆ ಕೆರೆ ಜಾಗದಲ್ಲಿ ಬಿಡಿಎ ನಿರ್ಮಿಸಿರುವ ಬಡಾವಣೆಗಳ ತೆರವು ಕಾರ್ಯ ಸ್ಥಗಿತಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದ್ದರಿಂದ ಸಮಿತಿಯ ವರದಿ ಮಹತ್ವ ಪಡೆದುಕೊಂಡಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications