ಟಾಯ್ಲೆಟ್ ನಲ್ಲಿ ಮಹಿಳಾ ಸಿಬ್ಬಂದಿಗಳ ಚಿತ್ರ ತೆಗೆದವನ ಬಂಧನ
ಬೆಂಗಳೂರು, ಜನವರಿ 23: ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳ ಫೋಟೋಗಳನ್ನು ಮೊಬೈಲ್ ನಲ್ಲಿ ತೆಗೆಯುತ್ತಿದ್ದ ಸ್ವಚ್ಛತಾ ಸಿಬ್ಬಂದಿಯೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ.
24 ವರ್ಷ ವಯಸ್ಸಿ ಧರ್ಮೇಂದ್ರ ಕುಮಾರ್ ಯಾದವ್ ಬಂಧಿತ ಆರೋಪಿ. ಉತ್ತರ ಪ್ರದೇಶ ಮೂಲದ ಈತ ಇಂದಿರಾನಗರದಲ್ಲಿ ವಾಸವಾಗಿದ್ದ, ಇಂದಿರಾನಗರದ ೮೦ ಅಡಿ ರಸ್ತೆಯಲ್ಲಿರುವ ಪ್ರತಿಷ್ಠಿತ ಕಂಪನಿಗೆ ಈತ ಮೂರು ವರ್ಷದ ಹಿಂದೆ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದ. ಕಚೇರಿಯಲ್ಲಿ ಕೆಲಸದಲ್ಲಿ ನಿರತರಾಗಿರುವ ವೇಳೆ ಮಹಿಳಾ ಟೆಕ್ಕಿಗಳು ನಾನಾ ಭಂಗಿಯಲ್ಲಿ ಕುಳಿತುಕೊಳ್ಳುತ್ತಿದ್ದರು.
ಇದನ್ನು ಮರೆಯಲ್ಲಿ ನಿಂತು ಧರ್ಮೇಂದ್ರ ಫೋಟೊ ತೆಗೆಯುತ್ತಿದ್ದ. ಈ ರೀತಿ ಮಾಡುವಾಗ ಮಹಿಳೆಯೊಬ್ಬರು ಗಮನಿಸಿದ್ದು, ಆತನ ಕೈಯಿಂದ ಮೊಬೈಲ್ ಕಿತ್ತು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಲವಾರು ಫೋಟೋಗಳು ಮೊಬೈಲ್ ನಲ್ಲಿ ಪತ್ತೆಯಾಗಿದೆ. ತಕ್ಚಣ ಆತನನ್ನು ಹಿಡಿದು ಕಂಪನಿಯ ಮ್ಯಾನೇಜರ್ ಮತ್ತು ಟೆಕ್ಕಿಯೊಬ್ಬರು ಕೊಟ್ಟ ದೂರಿನ ಆಧಾರದ ಮೇಲೆ ಪೊಲೀಸರು ಅತನನ್ನು ಬಂಧಿಸಿದ್ದಾರೆ.

ಸ್ವಚ್ಛತಾ ಸಿಬ್ಬಂದಿ ಆಗಿದ್ದ ಕಾರಣ ಮಹಿಳೆಯರ ಶೌಚಾಲಯಕ್ಕೂ ಆತನು ಹೋಗುತ್ತಿದ್ದ, ಅಲ್ಲಿಯೂ ಮೊಬೈಲ್ ಇಟ್ಟು, ಚಿತ್ರೀಕರಣ ಮಾಡಿರುವುದು ಮೊಬೈಲ್ ಪರಿಶೀಲನೆಗೆ ಒಳಪಡಿಸಿದಾಗ ತಿಳಿದಿದೆ. ಮೊಬೈಲ್ ನ್ನು ಫರೆನ್ಸಿಕ್ ಲ್ಯಾಭ್ ಗೆ ಕಳುಹಿಸಲಾಗಿದ್ದು, ಡಿಲೀಟ್ ಆಗಿರುವ ದೃಶ್ಯಗಳನ್ನೂ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications