ಎಂಟು ವರ್ಷದಿಂದ ಪೊಲೀಸರ ಕೈಗೆ ಸಿಗದೇ ಕಳವು ಮಾಡ್ತಿದ್ದ ಕಳ್ಳ ಸೆರೆ
ಬೆಂಗಳೂರು, ಫೆಬ್ರವರಿ 24: ಕಳೆದ ಎಂಟು ವರ್ಷದಿಂದ ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಗದೇ ಮನೆಗಳಲ್ಲಿ ಕದಿಯುತ್ತಿದ್ದ ಉತ್ತರ ಪ್ರದೇಶ ಮೂಲದ ಕಳ್ಳನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 61 ಲಕ್ಷ ರೂ. ಮೌಲ್ಯದ ಒಂದು ಕೆ.ಜಿಗೂ ಅಧಿಕ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಖುರ್ಷಿದ್ ಬಂಧಿತ ಆರೋಪಿ. ಮನೆ ಗಳ್ಳತನ ಮಾಡುವ ವೇಳೆ ಈತನನ್ನು ಹಿಡಿಯಲು ಯತ್ನಿಸಿದರೆ ಪಿಸ್ತೂಲಿನಿಂದ ಶೂಟ್ ಮಾಡುತ್ತಿದ್ದ. ಕಳೆದ 2013 ರಿಂದ ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ. ಎಂಟು ವರ್ಷದ ಬಳಿಕ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಖುರ್ಷಿದ್ ಬಗ್ಗೆ ಖಚಿತ ಮಹಿತಿ ಪಡೆದಿದ್ದ ಸಿಸಿಬಿ ಇನ್ಸ್ಪೆಕ್ಟರ್ , ಹತ್ತು ದಿನದಿಂದ ದೆಹಲಿ, ಹರ್ಯಾಣ ಸುತ್ತಾಡಿದ್ದರು. ಬಳಿಕ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಿದ್ದಾರೆ. ಈ ವೇಳೆ ಪಿಸ್ತೂಲು ಹಾಗೂ ಗುಂಡು ಸಿಕ್ಕಿದೆ.

Recommended Video
ಆರೋಪಿ ಖುರ್ಷಿದ್ ನನ್ನು ವಿಚಾರಣೆ ನಡೆಸಿದಾಗ, ಬೆಂಗಳೂರಿಗೆ ಬಂದು ಕಳ್ಳತನ ಮಾಡುತ್ತಿದ್ದ. ಇಲ್ಲಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ. ಇನ್ನು ಖದ್ದ ಮಾಲನ್ನು ದೆಹಲಿಯ ವೀರೇಂದ್ರ ಕುಮಾರ್ ಎಂಬಾತನ ಮೂಲಕ ವಿಲೇವಾರಿ ಮಾಡಿಸುತ್ತಿದ್ದ. ವೀರೇಂದ್ರ ಕುಮಾರ್ ನನ್ನು ಸಹ ದೆಹಲಿಯಲ್ಲಿ ವಿಚಾರಣೆಗೆ ಒಳಪಡಿಸಿ ಕದ್ದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಕಳ್ಳತನ ಮಾಡಿದ್ದು, ಈತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸಿಸಿಬಿ ಇನ್ಸ್ಪೆಕ್ಟರ್ ಹಜರೇಶ್ ಅವರ ಕಾರ್ಯ ಶೈಲಿಯನ್ನು ಸಿಸಿಬಿ ಪೊಲೀಸರು ಪ್ರಶಂಸೆ ಮಾಡಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications