ಕೊಡಗು ಸಂತ್ರಸ್ತರಿಗೆ 758 ಮನೆ ನಿರ್ಮಾಣ: ಯು.ಟಿ. ಖಾದರ್
ಬೆಂಗಳೂರು, ಆಗಸ್ಟ್ 27: ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ 758 ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದು ವಸತಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊಡಗು ಜಿಲ್ಲಾಧಿಕಾರಿ ನೀಡಿದ್ದು, ಅದನ್ನು ಅನುಸರಿಸಿ ಮುಖ್ಯಮಂತ್ರಿ ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು. ಕೊಡಗು ಜಿಲ್ಲೆಯ ಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ನಷ್ಟಉಂಟಾಗಿದೆ. ಅಯಾ ಇಲಾಖೆಗಳು ಪುನರ್ ನಿರ್ಮಾಣ ಕಾರ್ಯವನ್ನು ನಿರ್ವಹಿಸುತ್ತವೆ. ವಸತಿ ಇಲಾಖೆಯ ಅಡಿಯಲ್ಲಿ ಮನೆಗಳ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಕೊಡಗು ಪ್ರವಾಹದಲ್ಲಿ ಗಂಡನನ್ನು ಕಳೆದುಕೊಂಡ ಹೆಂಡತಿಯ ಕಥೆ ವ್ಯಥೆ....
ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಕೊಡಗು ಮರುಸ್ಥಾಪನೆಗೆ ಸರ್ಕಾರ ಬದ್ದವಾಗಿದೆ. ವಸತಿ ಕಳೆದುಕೊಂಡವರು ಸದ್ಯ ಕಾಳಜಿ ಕೇಂದ್ರದಲ್ಲಿದ್ದಾರೆ. ಮನೆಗಳ ನಿರ್ಮಾಣಕ್ಕೆ 42 ಎಕರೆ ಜಮೀನು ಗುರುತಿಸಲಾಗಿದೆ ಎಂದು ಖಾದರ್ ತಿಳಿಸಿದರು.

ಸಿಎಂ ಪರಿಹಾರ ನಿಧಿಗೆ ಹರಿದುಬಂದ ದೇಣಿಗೆ: ಜನತೆಗೆ ಲೆಕ್ಕಕೊಟ್ಟ ಎಚ್ಡಿಕೆ
ಕೊಡಗು, ಮಡಿಕೇರಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಿಂದ ಪ್ರಭಾವದಿಂದ ಪ್ರವಾಹವೇ ಸೃಷ್ಟಿಯಾಗಿದೆ, ಸಾವಿರಾರು ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ವಾಸಿಸುತ್ತಿದ್ದಾರೆ ಕೆಲವು ಮಂದಿ ತಮ್ಮ ಮನೆಗಗಳಿಗೆ ತೆರಳಿಸಿದ್ದಾರೆ.












Click it and Unblock the Notifications