Darshan First Day Jail: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಮೊದಲ ರಾತ್ರಿ ಹೇಗಿತ್ತು?
ಬೆಂಗಳೂರು ಜೂನ್ 23: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕಳೆದ ದಿನ ಜೈಲಿನಲ್ಲಿ ಮುದ್ದೆ ಊಟ ಮಾಡಿದ ದರ್ಶನ್ ರಾತ್ರಿ ಹೇಗೆ ಕಳೆದರು? ಜೈಲಿನಲ್ಲಿ ದರ್ಶನ್ ಮೊದಲ ರಾತ್ರಿ ಹೇಗಿತ್ತು? ಎಂದು ಹೆಸರು ಹೇಳಲು ಇಚ್ಚಿಸದ ಜೈಲು ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಜುಲೈ 4ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ನಾಲ್ವರು ಆರೋಪಿಗಳನ್ನೂ ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದ್ದಾರೆ. ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಕಳೆದ ದಿನ ಸರಿಯಾಗಿ ನಿದ್ದೆ ಮಾಡಿಲ್ಲ. ರಾತ್ರಿ ಊಟ ಕೂಡ ಅವರಿಗೆ ಸರಿಯಾಗಿ ಮಾಡಲು ಆಗಿಲ್ಲ. ನಿರಂತರ ವಿಚಾರಣೆಯಿಂದ ದಣಿದಿದ್ದ ದರ್ಶನ್ಗೆ ರಾತ್ರಿ ಊಟಕ್ಕಾಗಿ ಮುದ್ದೆ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ನೀಡಲಾಗಿತ್ತು.
ನಿತ್ಯ ಮನೆ ಹಾಗೂ ಹೋಟೆಲ್ನಲ್ಲಿ ಬಿರಿಯಾನಿ, ಕಬಾಬ್ ತಿನ್ನುತ್ತಿದ್ದ ದರ್ಶನ್ಗೆ ಜೈಲೂಟ ಸರಿ ಹೋಗಲೇ ಇಲ್ಲ. ಪೊಲೀಸ್ ಕಸ್ಟಡಿಯಲ್ಲಿ ಇದ್ದಿದ್ದರೆ ಬಿರಿಯಾನಿ ಊಟ ಮಾಡ್ತಾಯಿದ್ದರೆನೋ ಗೊತ್ತಿಲ್ಲ. ಆದರೆ ಕಳೆದ ದಿನ ಮಾತ್ರ ದರ್ಶನ್ ಸರಿಯಾಗಿ ಜೈಲಿನಲ್ಲಿ ಊಟ ಮಾಡಿಲ್ಲ. ಜೊತೆಗೆ ನಿದ್ದೆ ಕೂಡ ಸರಿಯಾಗಿ ಮಾಡಿಲ್ಲ ಎನ್ನಲಾಗುತ್ತಿದೆ. ಕಳೆದ ದಿನ ಮಂಕಾಗಿ ಕುಳಿದ್ದ ದಾಸ, ಗಾಢವಾಗಿ ಯಾವುದೋ ಯೋಚನೆಯಲ್ಲಿ ಮುಳಗಿದ್ದರು. ರಾತ್ರಿ 11.30ರ ನಂತರ ನಿದ್ದೆಗೆ ಅವರು ಜಾರಿದ್ದಾರೆನ್ನಲಾಗುತ್ತಿದೆ.

ಇನ್ನೂ ಇಂದು ಜೈಲಿನ ಮೆನುವಿನ ಪ್ರಕಾರ ದರ್ಶನ್ಗೆ ಪಲಾವ್ ನೀಡಲಾಗುತ್ತದೆ. ದರ್ಶನ್ 6.30ಕ್ಕೆ ಬೆಳಗ್ಗೆ ಎದ್ದು ನಿತ್ಯಕರ್ಮ ಮುಗಿಸಿ, ಸೆಲ್ನಲ್ಲಿ ಕುಳಿತಿದ್ದು ಅವರೊಂದಿಗೆ ಸಹಖೈದಿ ವಿನಯ್ ಸೆರೆವಾಸ ಅನುಭವಿಸುತ್ತಿದ್ದಾರೆ.
ಜೈಲು ಸೇರಿದ ಪವಿತ್ರಾ ಗೌಡ...
ಚಿತ್ರದುರ್ಗದ ತಮ್ಮ ಅಭಿಮಾನಿ ರೇಣುಕಾ ಸ್ವಾಮಿ ಬರ್ಬರ ಹತ್ಯೆ ಕೇಸ್ನ ಎರಡನೇ ಆರೋಪಿ ದರ್ಶನ್ ಇಂದು (ಜೂನ್ 22) ಜೈಲು ಪಾಲಾಗಿದ್ದಾರೆ. ದರ್ಶನ್ ಸೇರಿದಂತೆ ನಾಲ್ವರಿಗೆ (ವಿನಯ್, ಪ್ರದೂಶ್, ಧನರಾಜ್) 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಜೂನ್ 20 ರಂದು ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳು ಜೈಲು ಸೇರಿದ್ದರು. ಜುಲೈ 4 ರವರೆಗೂ ಎಲ್ಲಾ ಆರೋಪಿಗಳಿಗೂ ಜೈಲೇ ಗತಿ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ವಿಚಾರಣಾಧೀನ ಕೈದಿ ನಂಬರ್ 6106 ನೀಡಲಾಗಿದೆ. ದರ್ಶನ್ ಜೊತೆ ಇಂದು ಜೈಲು ಪಾಲಾಗಿರುವ ಧನರಾಜ್ - ವಿಚಾರಣಾಧೀನ ಕೈದಿ ನಂಬರ್ 6107, ವಿನಯ್ - ವಿಚಾರಣಾಧೀನ ಕೈದಿ ನಂಬರ್ 6108, ಪ್ರದೂಶ್ಗೆ - ವಿಚಾರಣಾಧೀನ ಕೈದಿ ನಂಬರ್ 6109 ಕೊಡಲಾಗಿದೆ.
ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ಗೆ ಜೈಲಿನಲ್ಲಿ ವಿಶೇಷ ಬ್ಯಾರಕ್ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದಾಗಿ ದರ್ಶನ್ ಅನ್ನು ವಿಶೇಷ ಬ್ಯಾರಕ್ನಲ್ಲಿ ಇರಿಸಲಾಗಿದೆ. ಇನ್ನೂ, ರೇಣುಕಾಸ್ವಾಮಿ ಹತ್ಯೆ ಕೇಸ್ನ ಎ1 ಆರೋಪಿ ಪವಿತ್ರಾ ಗೌಡರನ್ನ ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್ನಲ್ಲಿ ಇರಿಸಲಾಗಿದೆ. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ಸಂಖ್ಯೆ - 6024 ನೀಡಲಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications