ಬೆಂಗ್ಳೂರು ಈಗ ಡ್ರಗ್ ಮಾಫಿಯಾ ಡೀಲ್ ಗೆ ತಂಗುದಾಣ!
ಬೆಂಗಳೂರು, ಮೇ 03: ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಮಾದಕ ದ್ರವ್ಯಗಳನ್ನು ಕಳಿಸಲು ಐಟಿ ಸಿಟಿ ಬೆಂಗಳೂರನ್ನು ತಂಗುದಾಣವನ್ನಾಗಿ ಮಾಫಿಯಾ ದೊರೆಗಳು ಬಳಸುತ್ತಿದ್ದಾರೆ ಎಂಬ ಅಂಶ ಬಹಿರಂಗವಾಗಿದೆ.
ಮುಂಬೈ, ಹೈದರಾಬಾದ್, ಕೇರಳ, ತಮಿಳುನಾಡು, ಕೇರಳ ಹಾಗೂ ಗೋವಾ ಕಡೆಯಿಂದ ಬರುವ ಸರಕುಗಳನ್ನು ಬೆಂಗಳೂರಿಗೆ ತಂದು ಇಲ್ಲಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಳಿಸುವ ಭೂಗತ ವ್ಯವಸ್ಥೆ ಅವ್ಯಾಹತವಾಗಿ ನಡೆದಿದೆ. ಕಳೆದ ಒಂದೂವರೆ ವರ್ಷದಿಂದ ಅನೇಕ ರೈಡ್ ಗಳನ್ನು ಮಾಡಿದ ಕರ್ನಾಟಕ ಪೊಲೀಸ್ ಪಡೆಗೆ ಡ್ರಗ್ಸ್ ಜಾಲದ ವ್ಯಾಪ್ತಿಯ ಸಂಪೂರ್ಣ ಚಿತ್ರಣ ಇದೀಗ ಸಿಗುತ್ತಿದೆ.[ನಟಿ ಮಮತಾ ಕುಲಕರ್ಣಿ ಕೂಡಾ ಡ್ರಗ್ಸ್ ದಂಧೆಯಲ್ಲಿ ಭಾಗಿ!]
ಬೆಂಗಳೂರಿನಲ್ಲಿ ಎಷ್ಟೇ ರೈಡ್ ನಡೆದರೂ ಸೆಕ್ಯುರಿಟಿ ಅಷ್ಟಾಗಿ ಬಿಗಿ ಇಲ್ಲದ ಕಾರಣ ಸುಲಭವಾಗಿ ಹೊರ ರಾಜ್ಯ ನಂತರ ಹೊರ ದೇಶಗಳಿಗೆ ರವಾನೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಿಂದ ಬೆಳಗಾವಿ -ಗೋವಾ- ಮುಂಬೈ ಈಗ ಡ್ರಗ್ಸ್ ಸಾಗುವ ಹಾದಿ ಎನಿಸಿಕೊಂಡಿದೆ. ಈ ಎಲ್ಲಾ ಅಂಶಗಳು ಇತ್ತೀಚೆಗೆ ಗೋವಾದಲ್ಲಿ ನಡೆದ ತನಿಖೆಯಿಂದ ತಿಳಿದು ಬಂದಿದೆ.

ಹೆಚ್ಚಿನ ಪಡೆಗೆ ಮನವಿ: ಸಿಐಎಸ್ ಎಫ್ ಪಡೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಈ ವಿಷಯವನ್ನು ತಿಳಿಸಿ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಗೆ ಮನವಿ ಸಲ್ಲಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಕಳ್ಳ ಸಾಗಾಣೆಯ ರಾಜಪಥವಾಗಿದೆ.[ಮಕ್ಕಳನ್ನು ಫೆವಿಕಾಲ್, ಪೇಯಿಂಟ್ ನಿಂದ ದೂರವಿರಿಸಿ]
ಕರ್ನಾಟದಲ್ಲಿ ಕಳೆದ ಎರಡು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಸಾಕಷ್ಟು ಸುದ್ದಿ ಬಂದಿದೆ. ಆದರೆ, ಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ವಿದೇಶಕ್ಕೆ ಡ್ರಗ್ಸ್ ಪೂರೈಕೆಯಾಗುವ ಬಗ್ಗೆ ಮಾಹಿತಿ ತೀರಾ ಇತ್ತೀಚೆಗೆ ತಿಳಿದು ಬಂದಿದೆ. ಗೋವಾ ಹಾಗೂ ಮುಂಬೈಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ಚಟುವಟಿಕೆ ಹೆಚ್ಚಾಗಿರುವ ಬಗ್ಗೆ ಅನುಮಾನ ಬರುವ ಸಾಧ್ಯತೆ ಕಡಿಮೆ. ಹೀಗಾಗಿ ದೇಶ, ವಿದೇಶದ ಮಾಫಿಯಾ ಕಿಂಗ್ ಗಳು ಕರ್ನಾಟಕವನ್ನು ಡ್ರಗ್ಸ್ ಪೂರೈಕೆ ಮಾರ್ಗವಾಗಿ ಬಳಸಿಕೊಳ್ಳುತ್ತಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ












Click it and Unblock the Notifications