ಬೆಂಗಳೂರು ಪೊಲೀಸರು ಹೊಸ ವರ್ಷಾಚರಣೆ ಮಾಡಿದ್ದು ಹೀಗೆ
ಬೆಂಗಳೂರು, ಜನವರಿ 01 : ಹೊಸವರ್ಷಾಚರಣೆಯಲ್ಲಿ ಜನರು ತೊಡಗಿದ್ದರೆ ಪೊಲೀಸರು ಅವರ ರಕ್ಷಣೆಗೆ ನಿಂತಿದ್ದರು. ಅದರಲ್ಲೂ ಬೆಂಗಳೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಪೊಲೀಸರು ಹೊಸ ವರ್ಷಾಚರಣೆ ಹೇಗೆ ಮಾಡಿದರು ಗೊತ್ತಾ?.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್, ದಕ್ಷಿಣ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ಮುಂತಾದ ಅಧಿಕಾರಿಗಳು ಜನರ ಜೊತೆ ಹೊಸ ವರ್ಷ ಆಚರಿಸಿದ್ದಾರೆ. ಹೊಸ ವರ್ಷದಂದು ಪೊಲೀಸರು ಮನೆ ಬಾಗಿಲಿಗೆ ಬಂದಾಗ ಜನರ ಸಂತಸ ಇಮ್ಮಡಿಯಾಗಿತ್ತು.
ಬೆಂಗಳೂರು ನಗರ ಪೊಲೀಸರು ಟ್ವಿಟರ್ನಲ್ಲಿ ಹೊಸ ವರ್ಷಾಚರಣೆಯ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಮಧ್ಯರಾತ್ರಿ ಜನರ ಮನೆ ಬಾಗಿಲು ತಟ್ಟಿದ ಪೊಲೀಸರು ಅವರ ಮನೆಯಲ್ಲಿ ಕಳ್ಳತನವಾಗಿದ್ದ ವಸ್ತುಗಳನ್ನು ವಾಪಸ್ ನೀಡಿದರು.

ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿದ್ದ ಪೊಲೀಸರು ಕಳುವಾದ ವಸ್ತುಗಳನ್ನು ಜನರಿಗೆ ಹೊಸ ವರ್ಷದ ದಿನ ನೀಡಿದರು. ಪೊಲೀಸರು ಮನೆ ಬಾಗಿಲಿಗೆ ಹೋಗಿ ವಸ್ತುಗಳನ್ನು ನೀಡಿದ್ದು ವಿಶೇಷವಾಗಿತ್ತು. ಚಿನ್ನದ ಆಭರಣದಿಂದ ಹಿಡಿದು ದುಬಾರಿ ಕ್ಯಾಮರಾ ತನಕ ಹಲವು ವಸ್ತುಗಳಿದ್ದವು.
'ತಡರಾತ್ರಿ ಜನರ ಮನೆಗೆ ಹೋಗಿ ಕಳುವಾದ ವಸ್ತುಗಳನ್ನು ನೀಡಿದಾಗ ಅವರ ಮುಖದಲ್ಲಿ ಕಾಣುವ ಮಂದಹಾಸವನ್ನು ನೋಡವುದೇ ಸಂತಸದ ವಿಚಾರ' ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.
There is no greater joy when a victim gets back their stolen property. That too when the police visit your doorsteps to deliver your hard earned property at the stroke of midnight!!!
— Deputy Commissioner of Police--South (@DCPSouthBCP) December 31, 2018
New year 2019 rings in style for them. Wishing you the best of 2019. @CPBlr @BlrCityPolice pic.twitter.com/WUtVGYwtY9
ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ವಿವಿಧ ಕಡೆ ಹೊಸ ವರ್ಷಾಚರಣೆಗೆ ಪೊಲೀಸರು ಭದ್ರತೆ ಒದಗಿಸುವ ಜೊತೆಗೆ ಜನರನ್ನು ಮಧ್ಯರಾತ್ರಿ ಭೇಟಿಯಾಗಿ ಹೊಸ ವರ್ಷದ ಉಡುಗೊರೆ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications