ಗಲಭೆ ಉಂಟಾದರೆ ಈ ಟ್ವಿಟರ್ ತಾಣದ ಮೇಲೆ ಕಣ್ಣಿಡಿ
ಬೆಂಗಳೂರು, ಸೆಪ್ಟೆಂಬರ್, 19: ಸಮಾಜದಲ್ಲಿನ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸಾಮಾಜಿಕ ತಾಣಗಳನ್ನು ಬೆಂಗಳೂರು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಕಾವೇರಿ ಜಲ ವಿವಾದ ಸಂದರ್ಭ ಉಂಟಾದ ಗಲಭೆ, ಹಿಂಸಾಚಾರ, ಕನ್ನಡಿಗರ ಮೇಲೆ ಹಲ್ಲೆ ಮುಂತಾದ ಘಟನೆಗಳನ್ನು ಆಧರಿಸಿ ಪೊಲೀಸರು ಹೊಸ ತಂತ್ರದ ಮೊರೆ ಹೋಗಿದ್ದಾರೆ.[ಬಸ್ಸು ಸುಡಲು ಕುಮ್ಮಕ್ಕು ನೀಡಿದ್ದು ಯಾದಗಿರಿಯ 22ರ ಯುವತಿ]

ಸಾರ್ವಜನಿಕರು ನೇರವಾಗಿ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರದ ಅಂಗಸಂಸ್ಥೆಗಳಿಗೆ ಸಂಬಂಧಿಸಿದ ಫೇಸ್ ಬುಕ್ ಅಥವಾ ಟ್ವಿಟ್ಟರ್ ಖಾತೆಗೆ ತಮ್ಮ ದೂರುಗಳನ್ನು ಅಥವಾ ಅನುಮಾನಾಸ್ಪದ ರೀತಿಯ ವಿಡಿಯೋಗಳನ್ನು ಅಪ್ ಲೋಡ್ ಮಾಡಿ ಮಾಹಿತಿ ನೀಡಬಹುದು. ಈ ಮೂಲಕ ಕ್ಷಿಪ್ರ ಪರಿಹಾರಕ್ಕೆ ಮುಂದಾಗಬಹುದು.[ಬಸ್ ಗೆ ಬೆಂಕಿ ಹಾಕೋದಕ್ಕೆ ಜನ ಏನಂತಾರೆ?]
ಬೆಂಗಳೂರು ನಗರ ಪೊಲೀಸ್ ಟ್ವಿಟ್ಟರ್ ಖಾತೆಗೆ 307 ಲಕ್ಷ ಫಾಲೋವರ್ಸ್ ಇದ್ದಾರೆ. ಸಿಎ೦ ಆಫ್ ಕರ್ನಾಟಕ 63 ಲಕ್ಷ ಫಾಲೋವರ್ಸ್, ಇಂಟರ್ ಫೋಲ್ 72.4 ಲಕ್ಷ ಫಾಲೋವರ್ಸ್ ಇದ್ದಾರೆ. ಇಲಾಖೆಗಳು ತಿಳಿಸುವ ಮಾಹಿತಿ ಕ್ಷಣ ಮಾತ್ರದಲ್ಲಿ ಇಷ್ಟು ಜನರನ್ನು ಏಕಕಾಲದಲ್ಲಿ ತಲುಪುತ್ತದೆ.
ಇದಲ್ಲದೇ ಹಿರಿಯ ಪೊಲೀಸ್ ಆರ್. ಹೀತೇ೦ದ್ರ, ಚರಣ್ ರೆಡ್ಡಿ, ಅಭೀಷೇಕ್ ಗೋಯೆಲ್, ಡಾ. ಎ೦.ಬಿ. ಬೋರಲಿ೦ಗಯ್ಯ. ಸ೦ದೀಪ್ ಪಾಟೀಲ್, ಪಿ. ಹರಿಶೇಖರನ್ ಅವರ ಹೆಸರಿನಲ್ಲಿಯೂ ಖಾತೆಗಳಿದ್ದು ಲಕ್ಷಾಂತರ ಫಾಲೋವರ್ಸ್ ಇದ್ದಾರೆ. ನಾಗರಿಕರು ಈ ಮೇಲಿನ ಟ್ವೀಟರ್ ಖಾತೆ ವೀಕ್ಷಣೆ ಮಾಡುವುದರೊಂದಿಗೆ ಮಾಹಿತಿಯನ್ನು ನೀಡಿ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ.
ಟ್ವಿಟರ್ ಖಾತೆಗಳು
ಬೆಂಗಳೂರು ಸಿಟಿ ಪೊಲೀಸ್
ಸಿಎಂ ಆಫ್ ಕರ್ನಾಟಕ
ಅಭೀಷೇಕ್ ಗೋಯಲ್
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications