ಜಾಣ ಹುಡುಗಿ ಕಾಂಗ್ರೆಸ್ ಪಾಸು ಮಾಡಿಸಿದ ಲೆಕ್ಕದ ಮೇಷ್ಟ್ರು ದೇವೇಗೌಡರು
Recommended Video

ಬೆಂಗಳೂರು ನಗರ ಜಿಲ್ಲೆಯ ಜಯನಗರ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಹೀಗೆ ಏನಾದರೂ ವಿಶ್ಲೇಷಣೆ ಬರೆದರೆ, ಏನು ಜಯನಗರದ ಮತದಾರರು ಬಿಜೆಪಿ ಪಾಲಿಗೆ ಆಸ್ತಿಯೆ? ಮತದಾರರೇನಾದರೂ ಬಿಜೆಪಿಯನ್ನೇ ಗೆಲ್ಲಿಸುವುದಾಗಿ ಬರೆದುಕೊಟ್ಟಿದ್ದಾರಾ ಎಂದು ಸಿಟ್ಟಾಗುವ ಸಾಧ್ಯತೆ ಇದೆ.
ಆದರೆ, 2008 ಹಾಗೂ 2013ರ ವಿಧಾನಸಭಾ ಚುನಾವಣೆಯ ಫಲಿತಾಂಶ ಗಮನಿಸಿದರೆ, ಈ ಸಲ ಬಿಜೆಪಿಯು ತನ್ನದೊಂದು ನೆಲೆ ಕಳೆದುಕೊಂಡಿರುವುದು ಸ್ಪಷ್ಟವಾಗುತ್ತದೆ. ಆದರೆ ಜೆಡಿಎಸ್ ನಿಂದ ಅಭ್ಯರ್ಥಿಯನ್ನು ವಾಪಸ್ ತೆಗೆಸಿ, ಕಾಂಗ್ರೆಸ್ ಗೆ ಬೆಂಬಲ ಸೂಚಿಸದಿದ್ದರೆ ಸೌಮ್ಯಾ ರೆಡ್ಡಿ ಅವರ ಸ್ಥಿತಿ ಈಗಿನ ಹಂತಕ್ಕೆ ಬಂದಿರುತ್ತಿರಲಿಲ್ಲ ಎಂಬುದನ್ನೇ ಈ ಹಿಂದಿನ ಚುನಾವಣಾ ಫಲಿತಾಂಶದ ಸಂಖ್ಯೆಗಳು ಬಹಿರಂಗಪಡಿಸುತ್ತವೆ.
ಈ ಎರಡು ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಇಲ್ಲಿ ನಿಂತು ಜಯ ಗಳಿಸಿದ ಬಿಜೆಪಿಯ ಬಿ.ಎನ್.ವಿಜಯ್ ಕುಮಾರ್ ಗಳಿಸಿದ ಮತಗಳ ಸಂಖ್ಯೆಯಲ್ಲಿ ದೊಡ್ಡ ವ್ಯತ್ಯಾಸ ಆಗಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳ ಲೆಕ್ಕಾಚಾರದಲ್ಲಿ ಗಮನಾರ್ಹ ಏರಿಕೆ ಆಗಿದೆ. ಒಂದು ವೇಳೆ ಜೆಡಿಎಸ್ ನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದರೆ ಎಂಟರಿಂದ ಹತ್ತು ಸಾವಿರ ಮತಗಳು ಕೀಳುವ ಸಾಧ್ಯತೆಯಿತ್ತು.

2018ರಲ್ಲಿ ಪಡೆದ ಮತಗಳು
ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54,457
ಬಿಜೆಪಿಯ ಬಿ.ಎನ್.ಪ್ರಹ್ಲಾದ್ 51,568
ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1,861

ಮೂರು ಸಾವಿರಕ್ಕಿಂತ ಕಡಿಮೆ ಮತಗಳ ಅಂತರ
ಆ ಪೈಕಿ ಕಾಂಗ್ರೆಸ್ ನ ಸಾಂಪ್ರದಾಯಿಕ ಮತ ಬುಟ್ಟಿಗೇ ಜೆಡಿಎಸ್ ಕೈ ಹಾಕಿರುತ್ತಿತ್ತು. ಈಗ ಸೌಮ್ಯಾ ರೆಡ್ಡಿ ಅವರ ಪಾಲಿಗೆ ಬಿಜೆಪಿ ವಿರುದ್ಧ ಒಲಿದಿರುವ ಮೂರು ಸಾವಿರಕ್ಕಿಂತ ಕಡಿಮೆ ಮತಗಳ ಅಂತರವು ಆಗ ಸಾಧ್ಯ ಇರಲಿಲ್ಲವೇನೋ ಎಂದು ಮೇಲ್ನೋಟಕ್ಕೆ ಅನಿಸುತ್ತದೆ. ವಿಜಯ್ ಕುಮಾರ್ ರ ಸಾವಿನಿಂದಾಗಿ ಜಯನಗರ ಕ್ಷೇತ್ರದಲ್ಲಿ ಚುನಾವಣೆ ಮುಂದಕ್ಕೆ ಹೋಗಿತ್ತು.

ಅನುಕಂಪದ ಮತ ಪಡೆಯುವ ಬಿಜೆಪಿ ಲೆಕ್ಕಾಚಾರ
ವಿಜಯ್ ಕುಮಾರ್ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ಹೆಸರು ಮಾಡಿದ್ದ ನಾಯಕ. ಅವರದೇ ಕುಟುಂಬದಿಂದ ವ್ಯಕ್ತಿಯೊಬ್ಬರನ್ನು ಕಣಕ್ಕೆ ಇಳಿಸಿದರೆ ಮತದಾರರ ಅನುಕಂಪವೂ ಬಿಜೆಪಿ ಪರವಾಗಿ ಇರುತ್ತದೆ ಎಂಬ ಲೆಕ್ಕಾಚಾರವಿತ್ತು. ಆ ಅಂಶ ನಿಜವೂ ಕೂಡ ಹೌದು. ಏಕೆಂದರೆ ಕಳೆದ ಎರಡು ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಗೆ ಹೆಚ್ಚಿನ ಮತಗಳು ಬಂದಿವೆ.

ಮತ ವಿಭಜನೆ ಆಗದಂತೆ ನೋಡಿಕೊಳ್ಳಲಾಯಿತು
ಆದರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಒಟ್ಟಿಗೆ ಸೇರಿ ಚುನಾವಣೆ ಎದುರಿಸಿದ್ದು, ಮತ ವಿಭಜನೆ ಆಗದಂತೆ ತಡೆಯಲು ಸಾಧ್ಯವಾಗಿದೆ. ಈ ಸಲ ವಿಜಯ್ ಕುಮಾರ್ ಅವರಿಗೇ ಸ್ಪರ್ಧೆ ಕಠಿಣ ಆಗುತ್ತದೆ ಎಂಬ ಮಾತಿತ್ತು. ಏಕೆಂದರೆ, ಅವರು ಎರಡು ಬಾರಿ ಸತತ ಗೆಲುವು ಸಾಧಿಸಿ, ಹ್ಯಾಟ್ರಿಕ್ ಗೆಲುವಿನ ಪ್ರಯತ್ನದಲ್ಲಿದ್ದರು. ಇಂಥ ಸಂದರ್ಭದಲ್ಲಿ ವಿವಿಧ ಕಾರಣಗಳಿಗೆ ಜನರು ಬದಲಾವಣೆ ಬಯಸುತ್ತಾರೆ. ಜತೆಗೆ ರಾಮಲಿಂಗಾ ರೆಡ್ಡಿ ಅವರ ಮಗಳೇ ಕಣದಲ್ಲಿ ಇದ್ದುದರಿಂದ ಸವಾಲು ಇನ್ನಷ್ಟು ಕಠಿಣವಾಗಿತ್ತು.

ಜೆಡಿಎಸ್- ಕಾಂಗ್ರೆಸ್ ಗೆ ಪ್ರಯೋಗ, ಬಿಜೆಪಿ ಪಾಲಿಗೆ ಪಾಠ
ದೇವೇಗೌಡರನ್ನು ಮನವೊಲಿಸಿದ ರಾಮಲಿಂಗಾ ರೆಡ್ಡಿ, ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು. ಬಿಜೆಪಿ ಪಾಲಿಗೆ ಭಾರೀ ಭದ್ರ ಕೋಟೆ ಎಂದೇ ಪರಿಗಣಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರವನ್ನು 'ಕೈ' ವಶ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ - ಜೆಡಿಎಸ್ ಗೆ ಇದೊಂದು ಪ್ರಯೋಗ ಹೌದು, ತನ್ನ ರಣತಂತ್ರ ಬದಲಿಸಿಕೊಳ್ಳಲು ಬಿಜೆಪಿಗೆ ಪಾಠವೂ ಹೌದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications