ಬೆಳ್ಳಂದೂರು ಕೆರೆ ಸ್ವಚ್ಛ ಮಾಡಲು ಎಷ್ಟು ವರ್ಷ ಬೇಕು?
ಬೆಂಗಳೂರು, ಡಿಸೆಂಬರ್, 14: ಬೆಳ್ಳಂದೂರು ಕೆರೆ ರಾಸಾಯನಿಕ ನೊರೆ ಸಮಸ್ಯೆ ಬಗ್ಗೆ ಮಾಧ್ಯಮಗಳೂ ಸಾಕಷ್ಟು ವರದಿ ಮಾಡಿವೆ. ಆದರೆ ಸದ್ಯಕ್ಕಂತೂ ಯಾವುದೇ ಪರಿಹಾರ ಸಿಕ್ಕಿಲ್ಲ.
ಕರ್ನಾಟಕ ಸರ್ಕಾರ ಅನೇಕ ಏಜೆನ್ಸಿಗಳ ಬಾಗಿಲು ಬಡಿದಿದೆ. ಬಿಬಿಎಂಪಿ ಸಹ ಪರ್ಯಾಯ ಕ್ರಮಗಳ ಬಗ್ಗೆ ಚಿಂತನೆ ಮಾಡಿದೆ. ಸ್ಥಳೀಯರು ಮತ್ತು ಕರೆ ಸುತ್ತಲಿನ ರಸ್ತೆಯಲ್ಲಿ ಸಂಚಾರ ಮಾಡುವವರು ಕಳೆದ 4 ವರ್ಷಗಳಿಂದ ಪ್ರತಿದಿನ ನೊರೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾದರೆ ಸದ್ಯದ ಸ್ಥಿತಿ ಏನು?[ಒಡಲಲಿ ವಿಷ ತುಂಬಿಕೊಂಡ ಬೆಳ್ಳಂದೂರು ಕೆರೆಯ ಕಥೆ ವ್ಯಥೆ]

ತಾತ್ಕಾಲಿಕ ಪರಿಹಾರ
ಬೆಂಗಳೂರು ಜಲಮಂಡಳಿ ಆಯುಕ್ತ ವಿಜಯ್ ಭಾಸ್ಕರ್, ನಾವು ಅನೇಕ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬೆಳ್ಳಂದೂರು ಮತ್ತು ವರ್ತೂರು ಕೆರೆಗೆ ಬಿಡುವ ನೀರನ್ನು ಶುದ್ಧೀಕರಣ ಮಾಡಿ ಬಿಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿದಿನ 800 ಮಿಲಿಯನ್ ಲೀಟರ್ ವಿಷಯುಕ್ತ ನೀರು ಕೆರೆಗೆ ಸೇರುತ್ತಿದ್ದು ಅದನ್ನು ತರೆಯಲಾಗಿದೆ. ಬಿಬಿಎಂಪಿ ಮತ್ತು ಬಿಡಿಎ ಸಹ ಕೆರೆ ರಕ್ಷಣೆಗೆ ಕಾರ್ಯಬದ್ಧವಾಗಿವೆ. ಬಿಡಿಎ ಕೆರೆ ಸುತ್ತ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ.[ಗೂಗಲ್ ಮ್ಯಾಪ್ ನಲ್ಲಿ 'ಬೆಳ್ಳಂದೂರು ಲೇಕ್' ಹುಡುಕಬೇಡಿ!]
ವಿದ್ಯಾರ್ಥಿಗಳ ಯೋಜನೆ
ಕೆರೆ ಸಂರಕ್ಷಣೆ ಪಣ ತೊಟ್ಟಿರುವ ವಿದ್ಯಾರ್ಥಿಗಳು ಜಾಗೃತಿ ಅಭಿಯಾನ ಆರಂಭ ಮಾಡಿದ್ದಾರೆ. ಮೌಂಟ್ ಕಾರ್ಮೆಲ್ ಕಾಲೇಜಿನ ಅಂತಿಮ ಬಿಎಸ್ ಸಿ ವಿದ್ಯಾರ್ಥಿನಿಯರಾದ ಸಂಜನಾ ಚೆವಲನ್, ಅಸ್ಪ್ರಿತ್ ಕೌರ್, ನಾಮ್ಗೆ ಚೊಡನ್, ಮಾನಸಿ ಆನಂದ್, ಅನಾಮಿತ್ರಾ ಚಟರ್ಜಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಸೆಂಟ್ರಲ್ ಮಾಲ್ ನಿಂದ ಕೆರೆ ವರೆಗೆ ಪಾದಯಾತ್ರೆ ಮಾಡಿ ಜಾಗೃತಿ ಮೂಡಿಸಿದ್ದಾರೆ.
ವಿದ್ಯಾರ್ಥಿಗಳು ತಾವೇ ತಯಾರು ಮಾಡಿದ ಪ್ರಾತ್ಯಕ್ಷಿಕೆಯೊಂದನ್ನು ಮುಂದೆ ಇಟ್ಟಿದ್ದಾರೆ. ಬೆಂಗಳೂರು ಜಲಮಂಡಳಿಗೆ ಅಂತಿಮ ಕರಡನ್ನು ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
-
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ












Click it and Unblock the Notifications