ನಾಡಪ್ರಭು ಕೆಂಪೇಗೌಡ ಜಯಂತಿ ಬಗ್ಗೆ ಬೆಂಗಳೂರಿಗರಿಗೆ ಎಷ್ಟು ಗೊತ್ತು?
Recommended Video

ಬೆಂಗಳೂರು, ಜೂನ್ 27: ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಜನ್ಮದಿನವನ್ನು ಸರ್ಕಾರ ಜೂನ್ 27ರಂದು ಆಚರಿಸುತ್ತಿದೆ.
ಬೆಂಗಳೂರು ವಿಶ್ವಮಟ್ಟದಲ್ಲಿ ಇಂದು ಮಾನ್ಯತೆ ಪಡೆದಿದೆ. ಇಲ್ಲಿನ ಪರಿಸರ, ವಾತಾವರಣ, ಬಡಾವಣೆಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಸುಮಾರು 500 ವರ್ಷದ ಹಿಂದೆ ಕೆಂಪೇಗೌಡ ನೀಡಿದ ಕೊಡುಗೆ ಮಹತ್ವದ್ದು.
ಕೆಂಪೇಗೌಡರ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ಧಿ ಕ್ರಮಗಳಿಂದಲೇ ಅದು ಇಂದು ಬೃಹತ್ ನಗರವಾಗಿ ಬೆಳೆದಿದೆ. ಆದರೆ, ಕೆಂಪೇಗೌಡರ ಬಗ್ಗೆ ಬೆಂಗಳೂರಿನ ಜನರಿಗೆ ಎಷ್ಟು ತಿಳಿದಿದೆ?
ಈ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಹೋದರೆ ಸಿಗುವ ಉತ್ತರಗಳು ನಿರಾಶೆ ಮೂಡಿಸುತ್ತವೆ.
ಕೆಂಪೇಗೌಡ ಜಯಂತಿ ನೆಪದಲ್ಲಿ 'ಒನ್ ಇಂಡಿಯಾ' ಕೆಂಪೇಗೌಡರ ಕುರಿತು ಬೆಂಗಳೂರಿನ ಜನರಿಗೆ ಕೆಲವು ಪ್ರಶ್ನೆಗಳನ್ನು ಕೇಳಿತು. ಅದಕ್ಕೆ ಬಹುತೇಕ ಜನರು ಉತ್ತರ ಹೇಳಲು ತಡಬಡಾಯಿಸಿದರು.

ಜೂನ್ 27ರ ವಿಶೇಷ ಏನು ಎಂಬ ಪ್ರಶ್ನೆಗೆ ಅನೇಕರಿಗೆ ಉತ್ತರವೇ ತಿಳಿದಿರಲಿಲ್ಲ. ಕೆಲವು ವಿದ್ಯಾರ್ಥಿಗಳು ಕೆಂಪೇಗೌಡ ಜಯಂತಿ ಎಂದು ಸರಿಯಾದ ಉತ್ತರ ನೀಡಿದರು.
ಇನ್ನು ಕೆಲವರು ಕೆಂಪೇಗೌಡರ ಜಯಂತಿ ಎಂಬುದನ್ನು ಕೇಳಿ ಅಚ್ಚರಿಪಟ್ಟುಕೊಂಡರು. ಅದರ ಬಗ್ಗೆ ಕ್ಲೂ ಇಲ್ಲ. ಅದು ಯಾವುದಕ್ಕೆ ಸಂಬಂಧಿಸಿದ್ದು ಎಂಬ ಮರುಪ್ರಶ್ನೆ ಮುಂದಿಟ್ಟರು.
ಕೆಲವರು ಬೆಂಗಳೂರಿನ ಮೊದಲ ಹೆಸರು ಬೆಂದಕಾಳೂರು ಎಂಬುದನ್ನು ಈ ವೇಳೆ ನೆನಪಿಸಿಕೊಂಡರು. ಹೆಚ್ಚಿನವರಿಗೆ ಕೆಂಪೇಗೌಡರು ಹುಟ್ಟಿದ್ದು ಯಾವಾಗ ಎನ್ನುವುದು ತಿಳಿದಿರಲಿಲ್ಲ.
ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಕುರಿತು ಪ್ರಾಥಮಿಕ ಮಾಹಿತಿಯ ಕೊರತೆ ಇಲ್ಲದಿರುವುದು ಕಂಡುಬಂತು. ಕೆಂಪೇಗೌಡರು ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ನೆನಪನ್ನು ಶಾಶ್ವತವಾಗಿ ಇರಿಸಲು ಸರ್ಕಾರ ಅವರ ಹೆಸರಿನಲ್ಲಿ ಸಾಕಷ್ಟು ಸಂಸ್ಥೆಗಳನ್ನು ಕಟ್ಟಿಸಿದ್ದಾರೆ ಎಂದು ಹಿರಿಯರೊಬ್ಬರು ನೆನಪಿಸಿಕೊಂಡರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications