ನಾಡಪ್ರಭು ಕೆಂಪೇಗೌಡ ಜಯಂತಿ ಬಗ್ಗೆ ಬೆಂಗಳೂರಿಗರಿಗೆ ಎಷ್ಟು ಗೊತ್ತು?
Recommended Video

ಬೆಂಗಳೂರು, ಜೂನ್ 27: ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಜನ್ಮದಿನವನ್ನು ಸರ್ಕಾರ ಜೂನ್ 27ರಂದು ಆಚರಿಸುತ್ತಿದೆ.
ಬೆಂಗಳೂರು ವಿಶ್ವಮಟ್ಟದಲ್ಲಿ ಇಂದು ಮಾನ್ಯತೆ ಪಡೆದಿದೆ. ಇಲ್ಲಿನ ಪರಿಸರ, ವಾತಾವರಣ, ಬಡಾವಣೆಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಸುಮಾರು 500 ವರ್ಷದ ಹಿಂದೆ ಕೆಂಪೇಗೌಡ ನೀಡಿದ ಕೊಡುಗೆ ಮಹತ್ವದ್ದು.
ಕೆಂಪೇಗೌಡರ ಆಡಳಿತಾವಧಿಯಲ್ಲಿ ನಡೆದ ಅಭಿವೃದ್ಧಿ ಕ್ರಮಗಳಿಂದಲೇ ಅದು ಇಂದು ಬೃಹತ್ ನಗರವಾಗಿ ಬೆಳೆದಿದೆ. ಆದರೆ, ಕೆಂಪೇಗೌಡರ ಬಗ್ಗೆ ಬೆಂಗಳೂರಿನ ಜನರಿಗೆ ಎಷ್ಟು ತಿಳಿದಿದೆ?
ಈ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಹೋದರೆ ಸಿಗುವ ಉತ್ತರಗಳು ನಿರಾಶೆ ಮೂಡಿಸುತ್ತವೆ.
ಕೆಂಪೇಗೌಡ ಜಯಂತಿ ನೆಪದಲ್ಲಿ 'ಒನ್ ಇಂಡಿಯಾ' ಕೆಂಪೇಗೌಡರ ಕುರಿತು ಬೆಂಗಳೂರಿನ ಜನರಿಗೆ ಕೆಲವು ಪ್ರಶ್ನೆಗಳನ್ನು ಕೇಳಿತು. ಅದಕ್ಕೆ ಬಹುತೇಕ ಜನರು ಉತ್ತರ ಹೇಳಲು ತಡಬಡಾಯಿಸಿದರು.

ಜೂನ್ 27ರ ವಿಶೇಷ ಏನು ಎಂಬ ಪ್ರಶ್ನೆಗೆ ಅನೇಕರಿಗೆ ಉತ್ತರವೇ ತಿಳಿದಿರಲಿಲ್ಲ. ಕೆಲವು ವಿದ್ಯಾರ್ಥಿಗಳು ಕೆಂಪೇಗೌಡ ಜಯಂತಿ ಎಂದು ಸರಿಯಾದ ಉತ್ತರ ನೀಡಿದರು.
ಇನ್ನು ಕೆಲವರು ಕೆಂಪೇಗೌಡರ ಜಯಂತಿ ಎಂಬುದನ್ನು ಕೇಳಿ ಅಚ್ಚರಿಪಟ್ಟುಕೊಂಡರು. ಅದರ ಬಗ್ಗೆ ಕ್ಲೂ ಇಲ್ಲ. ಅದು ಯಾವುದಕ್ಕೆ ಸಂಬಂಧಿಸಿದ್ದು ಎಂಬ ಮರುಪ್ರಶ್ನೆ ಮುಂದಿಟ್ಟರು.
ಕೆಲವರು ಬೆಂಗಳೂರಿನ ಮೊದಲ ಹೆಸರು ಬೆಂದಕಾಳೂರು ಎಂಬುದನ್ನು ಈ ವೇಳೆ ನೆನಪಿಸಿಕೊಂಡರು. ಹೆಚ್ಚಿನವರಿಗೆ ಕೆಂಪೇಗೌಡರು ಹುಟ್ಟಿದ್ದು ಯಾವಾಗ ಎನ್ನುವುದು ತಿಳಿದಿರಲಿಲ್ಲ.
ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಕುರಿತು ಪ್ರಾಥಮಿಕ ಮಾಹಿತಿಯ ಕೊರತೆ ಇಲ್ಲದಿರುವುದು ಕಂಡುಬಂತು. ಕೆಂಪೇಗೌಡರು ಬೆಂಗಳೂರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ನೆನಪನ್ನು ಶಾಶ್ವತವಾಗಿ ಇರಿಸಲು ಸರ್ಕಾರ ಅವರ ಹೆಸರಿನಲ್ಲಿ ಸಾಕಷ್ಟು ಸಂಸ್ಥೆಗಳನ್ನು ಕಟ್ಟಿಸಿದ್ದಾರೆ ಎಂದು ಹಿರಿಯರೊಬ್ಬರು ನೆನಪಿಸಿಕೊಂಡರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications