ಕಮಿಷನ್ ಸರ್ಕಾರ ಎಂದಿದ್ದ ಮೋದಿ ಎಷ್ಟು ಕಮಿಷನ್ ಪಡೆದಿದ್ದಾರೆ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಅಕ್ಟೋಬರ್ 13: ತಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದಿದ್ದ ಮೋದಿ ಅವರಿಗೆ ಸಿದ್ದರಾಮಯ್ಯ ಅವರು 'ನೀವೆಷ್ಟು ಕಮಿಷನ್ ಪಡೆದಿದ್ದೀರಿ?' ಎಂದು ಪ್ರಶ್ನೆ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ಎಚ್ಎಎಲ್ ನೌಕರರೊಡನೆ ಸಂವಾದ ನಡೆಸಿದ ಬೆನ್ನಲ್ಲೆ ಟ್ವಿಟ್ಟರ್, ಫೇಸ್ಬುಕ್ ನಲ್ಲಿ ಮೋದಿ ಅವರಿಗೆ ಪ್ರಶ್ನೆಗಳ ಬಾಣಗಳನ್ನು ಸಿದ್ದರಾಮಯ್ಯ ಎಸೆಯುತ್ತಿದ್ದಾರೆ.
ಆಧಾರ ರಹಿತವಾಗಿ ನಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದ ಮೋದಿ ಅವರೇ, ರಫೆಲ್ ಒಪ್ಪಂದಕ್ಕೆ ಅಂಬಾನಿಯಿಂದ ನೀವು ಪಡೆದ ಕಮಿಷನ್ ಎಷ್ಟು? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ನಿಮ್ಮಂತಹಾ ಮಹಾನ್ ಭಾಷಣಕಾರರೇ ರಫೆಲ್ ಆರೋಪದ ಬಗ್ಗೆ ಮೌನವಾದರೆ ಹೇಗೆ? ಎಂದು ಮೋದಿ ಅವರ ಕಾಲೆಳೆದಿದ್ದಾರೆ ಸಿದ್ದರಾಮಯ್ಯ. ಅವರು ಹಾಕಿರುವ ಪೋಸ್ಟ್ಗೆ ರಾಹುಲ್ ವಿತ್ ಎಚ್ಎಎಲ್ ಎಂಬ ಹ್ಯಾಷ್ಟ್ಯಾಗ್ ಸಹ ಜೋಡಿಸಿಕೊಂಡಿದ್ದಾರೆ.

ಬಂಡವಾಳ ಶಾಹಿಗಳಿಗಾಗಿ ವಿದೇಶ ಯಾತ್ರೆ
ದೇಶದ ಪ್ರಧಾನಿಯೊಬ್ಬರು ಬಂಡವಾಳ ಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜನ ಸೇವೆ ಮಾಡಲಿಲ್ಲ ನೀವು
ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ, ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ, ಬಗ್ಗೆಯಾದರೂ ಮಾತನಾಡಿ ಎಂದು ನರೇಂದ್ರ ಮೋದಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಅಂಬಾನಿಗೆ ತೋರುತ್ತಿರುವ ನಿಷ್ಠೆ ದೇಶಕ್ಕೆ ತೋರಿ
ರಫೆಲ್ ಡೀಲ್ನಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಬಗೆಗೆ ತೋರಿದ್ದರೆ ಡಾಲರ್ ಮೌಲ್ಯ ಇಂದು ರೂ.74ರ ಗಡಿ ದಾಟುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಮೋದಿ ಅವರಿಗೆ ಕುಟುಕಿದ್ದಾರೆ.

ಎಚ್ಎಎಲ್ಗೆ ವಿಶ್ವದಲ್ಲಿಯೇ ಗೌರವವಿದೆ
ಎಚ್ಎಎಲ್ ಬಗ್ಗೆ ವಿಶ್ವದಲ್ಲಿಯೇ ಗೌರವ ಇದೆ, ದೇಶಕ್ಕಾಗಿ ಅನೇಕ ಯುದ್ಧ ವಿಮಾನಗಳನ್ನು ನಿರ್ಮಿಸಿದ ಗೌರವ ಅದಕ್ಕಿದೆ ಆದರೆ ಎಚ್ಎಎಲ್ಗೆ ನೀಡಿದ್ದ ಒಪ್ಪಂದವನ್ನು ಬಿಜೆಪಿಯು ಕಿತ್ತುಕೊಂಡು ಅಂಬಾನಿಗೆ ಕೊಟ್ಟಿದೆ ಇದೆಲ್ಲ ಮೋದಿ ಅವರ ಒಪ್ಪಿಗೆ ಇಲ್ಲದೆ ಆಗುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಂಡವಾಳ ಶಾಹಿಗಳಿಗಾಗಿ ವಿದೇಶ ಯಾತ್ರೆ
ದೇಶದ ಪ್ರಧಾನಿಯೊಬ್ಬರು ಬಂಡವಾಳ ಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜನ ಸೇವೆ ಮಾಡಲಿಲ್ಲ ನೀವು
ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ, ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ, ಬಗ್ಗೆಯಾದರೂ ಮಾತನಾಡಿ ಎಂದು ನರೇಂದ್ರ ಮೋದಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications