22 ವರ್ಷ ನೀರಿನ ಬಿಲ್ ಕಟ್ಟದ ಬೆಂಗಳೂರು ವಿಜ್ಞಾನಿಯ ಕಥೆ!
ಕಳೆದ 22 ವರ್ಷಗಳಿಂದ ಇವರು ಬೆಂಗಳೂರು ಜಲಮಂಡಲಿಗೆ ನೀರಿನ ಬಿಲ್ ಕಟ್ಟಿಲ್ಲ. ಹಾಗಂಥ ಇವರೇನು ನೀರು ಕದ್ದು ಬಳಸುತ್ತಿಲ್ಲ. ಹಾಗಾದರೆ ಮನೆಯ ಉಪಯೋಗಕ್ಕೆ ಬೇಕಾದ ನೀರನ್ನು ಹೇಗೆ ಹೊಂದಿಸುತ್ತಾರೆ ಎನ್ನುವುದೇ ಈ ಕುತೂಹಲಕಾರಿ ಕಥೆ.
ಬೆಂಗಳೂರು, ಮಾರ್ಚ್ 28: ಇವರು ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿ. ಕಳೆದ 22 ವರ್ಷಗಳಿಂದ ಇವರು ಬೆಂಗಳೂರು ಜಲಮಂಡಲಿಗೆ ನೀರಿನ ಬಿಲ್ ಕಟ್ಟಿಲ್ಲ. ಹಾಗಂಥ ಇವರೇನು ನೀರು ಕದ್ದು ಬಳಸುತ್ತಿಲ್ಲ. ಬಿಲ್ ಕಟ್ಟದೆ 22 ವರ್ಷಗಳಿಂದ ಬಿಲ್ ಬಾಕಿ ಉಳಿಸಿಕೊಂಡಿಲ್ಲ. ಹಾಗಾದರೆ ಮನೆಯ ಉಪಯೋಗಕ್ಕೆ ಬೇಕಾದ ನೀರನ್ನು ಹೇಗೆ ಹೊಂದಿಸುತ್ತಾರೆ ಎನ್ನುವುದೇ ಈ ಕುತೂಹಲಕಾರಿ ಕಥೆ.
ಎ.ಆರ್. ಶಿವಕುಮಾರ್ ಕಳೆದ 22 ವರ್ಷಗಳಿಂದ ನೀರಿನ ಬಿಲ್ ಕಟ್ಟಲು ಹೋಗಿಲ್ಲ. ಇವರ ಮನೆಗೆ ಕಾವೇರಿ ನೀರಿನ ಸಂಪರ್ಕವೂ ಇಲ್ಲ. ಹಾಗಂತ ಇವರ ಮನೆಯಲ್ಲಿ ಬಾವಿಯಾಗಲೀ, ಬೋರ್ ವೆಲ್ ಆಗಲೀ ಇಲ್ಲ. ಹೀಗಿದ್ದೂ ಇವರು ತಮ್ಮ ದಿನ ನಿತ್ಯಕ್ಕೆ ಬೇಕಾದ ನೀರನ್ನು ಹೊಂದಿಸುತ್ತಾರೆ. ಇದಕ್ಕಾಗಿ ಇವರು ಕಂಡು ಕೊಂಡ ಉಪಾಯ ಮಳೆ ನೀರಿನ ಕೊಯ್ಲು.[ಬಿಬಿಎಂಪಿ ಬಜೆಟ್ : ಸ್ವಚ್ಛ, ಹಸಿರು ಬೆಂಗಳೂರಿನತ್ತ ಒಂದು ಹೆಜ್ಜೆ!]
ಮಳೆ ನೀರನ್ನು ಸಂಗ್ರಹಿಸಿ ಅದನ್ನೇ ವರ್ಷ ಪೂರ್ತಿ ತಮ್ಮ ಮನೆಯ ಉಪಯೋಗಕ್ಕೆ ಬಳಸುತ್ತಾರೆ ಎ.ಆರ್.ಶಿವಕುಮಾರ್.

ಮಳೆ ಕೊಯ್ಲು
ಶಿವಕುಮಾರ್ 1995ರಲ್ಲಿ ಮನೆ ಕಟ್ಟಿದರು. ಈ ಸಂದರ್ಭದಲ್ಲಿ ಸುತ್ತ ಮುತ್ತಲ ಮನೆಗಳಿಗೆ ಬರುತ್ತಿದ್ದ ನೀರಿನ ಬಿಲ್ ಅನ್ನು ಅಧ್ಯಯನ ಮಾಡಿದರು. ನಂತರ ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆಯೊಂದು ಅವರ ಗಮನ ಸೆಳೆಯಿತು. 4 ಜನರಿರುವ ಕುಟುಂಬವೊಂದು ದಿನಕ್ಕೆ ಅಂದಾಜು 500 ಲೀಟರ್ ನೀರು ಬಳಕೆಗೆ ಸಾಕಾಗುತ್ತದೆ ಎಂಬುದು ಸಂಸ್ಥೆಯ ಸಂಶೋಧನೆಯಿಂದ ತಿಳಿದು ಬಂದಿತ್ತು. ನಂತರ ಕಳೆದ 100 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ಬಿದ್ದ ಮಳೆಯ ಪ್ರಮಾಣವನ್ನು ಲೆಕ್ಕ ಹಾಕಿದರು. ಇದನ್ನು ನೋಡಿದಾಗ ಅವರಿಗೆ ನಗರದಲ್ಲಿ ಬೀಳುವ ಮಳೆಯ ನೀರು ಗೃಹೋಪಯೋಗಿ ಬಳಕೆಗೆ ಸಾಕು ಎಂಬ ಅರಿವು ಬಂತು.['1300 ದಶಲಕ್ಷ ಲೀಟರ್ ತ್ಯಾಜ್ಯ ನೀರನ್ನು ಸಂಸ್ಕರಿಸಿ ಪುನರ್ ಬಳಕೆ']

ಕೊಯ್ಲು ಹೇಗೆ?
ಮನೆಯಲ್ಲಿ ನಿರ್ಮಿಸಲಾದ ಬೃಹತ್ ಟ್ಯಾಂಕಿಗೆ ಅತ್ಯಾಧುನಿಕ 'ಪಾಪ್ ಅಪ್' ಫಿಲ್ಟರನ್ನು ಅಳವಡಿಕೆ ಮಾಡಲಾಗುತ್ತದೆ. ಈ ಪಾಪ್ ಅಪ್ ಫಿಲ್ಟರಿನಲ್ಲಿ ಬೆಳ್ಳಿಯ ಹಾಳೆ ಇರುತ್ತದೆ. ಇದು ಸಂಗ್ರಹಿಸಲಾದ ಮಳೆ ನೀರಿನಲ್ಲಿರುವ ಕಲ್ಮಶಗಳನ್ನೆಲ್ಲಾ ತೆಗೆಯುತ್ತದೆ.

ಬೇರೆ ದೇಶಗಳಲ್ಲೂ ಇದೆ
ಮಳೆ ನೀರಿನ ಕೊಯ್ಲು ವಿಧಾನವನ್ನು ಆಫ್ರಿಕಾ, ಯೂರೋಪ್ ಸೇರಿದಂತೆ ಹಲವಾರು ದೇಶಗಳಲ್ಲಿ ಬಳಸಲಾಗುತ್ತದೆ. ಭಾರತ ಸರಕಾರದ ಜತೆ ಸೇರಿಕೊಂಡು ಈ ಯೋಜನೆ ನಿರ್ಮಿಸಲು ನಾರ್ವೆ ಸರಕಾರ ಈಗಾಗಲೇ ಒಪ್ಪಂದವನ್ನೂ ಮಾಡಿಕೊಂಡಿದೆ.

ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಶಿವಕುಮಾರ್
ಕೇಂದ್ರ ಸರಕಾರದ ರಾಷ್ಟ್ರೀಯ ಅನ್ವೇಷಣೆ ಪ್ರಶಸ್ತಿ, ಕರ್ನಾಟಕ ಸರಕಾರದ ಅಮೂಲ್ಯ ಪ್ರಶಸ್ತಿ, ರೋಟರಿ ಇಂಟರ್ನ್ಯಾಷನಲ್ ನ ಸಿಟಿಜನ್ ಎಕ್ಸ್ರಾಡಿನರಿ ಪ್ರಶಸ್ತಿಗಳು ಶಿವಕುಮಾರ್ ಗೆ ಸಂದಿವೆ. ತಮ್ಮ ಮಳೆ ನೀರಿನ ಕೊಯ್ಲು ಅವರಿಗೆ ಬಿಲ್ ಉಳಿಸಿದ್ದಲ್ಲದೇ ಹಲವು ಪ್ರಶಸ್ತಿಗಳನ್ನೂ ತಂದುಕೊಟ್ಟಿದೆ.

ಲಾಭಗಳು
ಸದ್ಯ ಕರ್ನಾಟಕ ಸರಕಾರ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಕಾಯ್ದೆಗೆ ತಿದ್ದುಪಡಿ ತಂದಿದ್ದು ಬೆಂಗಳೂರು ವ್ಯಾಪ್ತಿಯ 2400 ಚದರ ಅಡಿಗಿಂತ ಹೆಚ್ಚಿನ ವಿಸ್ತಾರದ ಮನೆ ಮತ್ತು ಕಚೇರಿಗಳಲ್ಲಿ ಮಳೆ ನೀರು ಕೊಯ್ಲು ಮಾಡುವುದನ್ನು ಕಡ್ಡಾಯಗೊಳಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications