ಹೊಸ ನೋಟು ಸಿಕ್ಕಿದ ಮೇಲೆ ಆದ ಅನುಕೂಲವೇನು?
ಬೆಂಗಳೂರು, ನವೆಂಬರ್, 15: ದೇಶದಲ್ಲಿ ಹೊಸ ನೋಟಿನ ಪರದಾಟದಿಂದ ಜನ ಪರಿತಪಿಸುತ್ತಿದ್ದಾರೆ. ಹಾಗೆಯೇ ಹೊಸ ನೋಟಿನಿಂದಾಗಿ ಕೆಲವು ಬದಲಾವಣೆಗಳೂ ಆಗಿವೆ.
ಕೇಂದ್ರ ಸರ್ಕಾರ ಐನೂರು, ಸಾವಿರ ನೋಟಿನ ಮೇಲೆ ನಿಷೇಧ ಹೇರಿದ ಮೇಲೆ ಟೋಲ್ ಗಳಲ್ಲಿ ಹಣ ಪಾವತಿಸುವುದನ್ನು ನಿಲ್ಲಿಸಲಾಗಿದ್ದು ಇದನ್ನು ನವೆಂಬರ್ 21ರವರೆಗೆ ವಿಸ್ತರಿಸಲಾಗಿದೆ.
ಇನ್ನು ಸೋಮವಾರ ರಾತ್ರಿಯಿಂದಲೇ ಜಾರಿಯಾಗುವಂತೆ ದೇಶಾದ್ಯಂತ ಎಲ್ಲ ಏರ್ ಪೋರ್ಟ್ ಗಳಲ್ಲಿ ಅನ್ವಯಿಸುವಂತೆ ಪಾರ್ಕಿಂಗ್ ಶುಲ್ಕವನ್ನು ಇದೇ 21 ರವರೆಗೆ ರದ್ದು ಮಾಡಲಾಗಿದೆ ಎಂದು ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.[ಎರಡು ಸಾವಿರ ರುಪಾಯಿ ನೋಟಿನಲ್ಲಿ ಕಾಗುಣಿತ ತಪ್ಪು?]

ಹಾಗೆಯೇ ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಲ್ಲರೆ ಕಾರಣಕ್ಕೆ ಯಾವುದೇ ರೋಗಿಯ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ ಎಂದು ಸುತ್ತೋಲೆಯನ್ನು ಹೊರಡಿಸಿ ಬಡ ಮತ್ತು ತುರ್ತು ಪರಿಸ್ಥಿತಿಯ ರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿದೆ.[ಪರಸ್ಥಳದಿಂದ ಬೆಂಗಳೂರಿಗೆ ಬಂದವರ ನೋಟಿನ ಪರದಾಟಗಳು]
ತಮ್ಮ ಖಾತೆಯನ್ನು ಹೊಂದಿರುವ ಬ್ಯಾಂಕ್ ನಲ್ಲಿ ಒಟ್ಟು ಐದು ಬಾರಿ ಮತ್ತು ಬೇರೆ ಬ್ಯಾಂಕಿನಲ್ಲಿ ಮೂರು ಬಾರಿ ಹಣವನ್ನು ಹೊರತೆಗೆಯುವ ನಿಯಮವನ್ನು ಬ್ಯಾಂಕ್ ಗಳು ವಿಧಿಸಿದ್ದವು. ಆದರೀಗ ಬ್ಯಾಂಕುಗಳಲ್ಲಿ ಹಣವನ್ನು ಎಷ್ಟು ಬಾರಿ ಹೊರತೆಗೆದರೂ ಯಾವುದೇ ಶುಲ್ಕ ವಿಧಿಸದಂತೆ ಆರ್ ಬಿಐ ಸೂಚಿಸಿದೆ.
ಇದೇ ರೀತಿ ಜಲಮಂಡಲಿಯು ಗ್ರಾಹಕರಿಗೆ ಅನುಕೂಲವಾಗುವಂತೆ ನ.21ರ ವರೆಗೆ ನೀರಿನ ಬಿಲ್ಲನ್ನು ಹಳೇ ನೋಟಿಯಲ್ಲಿಯೇ ಕಟ್ಟಿ ಎಂದು ಹೇಳಿದೆ.
ಬ್ಯಾಂಕುಗಳಲ್ಲಿ ಹೊಸ ಐನೂರು ರು ನೋಟುಗಳು ಸೋಮವಾರದಿಂದ ಹರಿದಾಡುತ್ತಿದ್ದು, ಎಟಿಎಂ, ಮತ್ತು ಬ್ಯಾಂಕುಗಳಲ್ಲಿ ಹಣ ಬದಲಾಯಿಸುವ ಹಣದ ಪ್ರಮಾಣವನ್ನು ಹೆಚ್ಚಿಸಲಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications