ಮಳೆ ಬಂದು, ಮರ ಬಿದ್ದರೆ ಬಿಬಿಎಂಪಿಗೆ ದೂರು ನೀಡೋದು ಹೇಗೆ?
Recommended Video

ಬೆಂಗಳೂರು, ಸೆಪ್ಟೆಂಬರ್ 11: "ಮನೆಗೆ ಮಳೆ ನೀರು ನುಗ್ಗಿದೆ, ರಸ್ತೆಯ ಚರಂಡಿ ನೀರು ತುಂಬಿ ಹರಿಯುತ್ತಿದೆ, ಮರ ಬಿದ್ದಿದೆ, ಕಸದ ಸಮಸ್ಯೆ ಇದೆ" -ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂಥ ಸಮಸ್ಯೆಗಳ ಪೈಕಿ ಯಾವುದೇ ಇದ್ದರೂ ದೂರು ನೀಡಬಹುದು ಮತ್ತು ಅದನ್ನು ಸಂಬಂಧಪಟ್ಟವರು ನಲವತ್ತೆಂಟು ಗಂಟೆಗಳಲ್ಲಿ ಪರಿಹರಿಸಬೇಕು. ಅದಕ್ಕಾಗಿಯೇ ಸಹಾಯವಾಣಿ ಇದೆ ಎಂದು ನಿಮಗೆ ಗೊತ್ತಿದೆಯೇ?
ಅಷ್ಟೇ ಅಲ್ಲ, ಅನಧಿಕೃತವಾಗಿ ಫ್ಲೆಕ್ಸ್ ಹಾಕಿದ್ದರು ಸಹ ದೂರು ನೀಡಬಹುದು. ಯಾವುದೇ ಫ್ಲೆಕ್ಸ್ ಹಾಕಬೇಕೆಂದರೆ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಪಡೆದಿಲ್ಲ ಅಂದರೆ ಆ ಬಗ್ಗೆಯೂ ಮಾಹಿತಿ ನೀಡಬಹುದು. ಬೀದಿ ದೀಪದ ಸಮಸ್ಯೆಯಿದ್ದರೂ ತಿಳಿಸಬಹುದು.

ಸಹಾಯವಾಣಿ ಸಂಖ್ಯೆ- 080-22660000ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಕರೆ ಮಾಡಿದವರ ವಿಳಾಸ, ಹೆಸರು, ಸಂಪರ್ಕ ಸಂಖ್ಯೆಯನ್ನು ಸಹಾಯ ವಾಣಿಯವರು ಕೇಳಿ ಪಡೆಯುತ್ತಾರೆ. ಆ ನಂತರ ಸಂಬಂಧಪಟ್ಟ ವಿಭಾಗಕ್ಕೆ ದೂರನ್ನು ವರ್ಗಾಯಿಸುತ್ತಾರೆ. ಯಾವ ಅಧಿಕಾರಿಗೆ ದೂರನ್ನು ಪರಿಹರಿಸಲು ವರ್ಗಾಯಿಸಲಾಗಿದೆ ಎಂಬ ಬಗ್ಗೆ ಕೂಡ ದೂರುದಾರರಿಗೆ ಮಾಹಿತಿ ನೀಡಲಾಗುತ್ತದೆ. ದೂರು ನೀಡಿದ ನಲವತ್ತೆಂಟು ಗಂಟೆಗಳಲ್ಲಿ ನೆರವಿಗೆ ಬರುತ್ತಾರೆ.
ಮೊನ್ನೆ ಅಂದರೆ ಶನಿವಾರ ಒಂದೇ ದಿನ ಆರುನೂರು ದೂರುಗಳು ಇವರಿಗೆ ಬಂದಿವೆ. ಆ ಪೈಕಿ ಒಳಚರಂಡಿ ಸಮಸ್ಯೆ (ಮಳೆ ನೀರು), ಮರಗಳು ಬಿದ್ದಿರುವುದೇ ಹೆಚ್ಚಿನ ದೂರುಗಳಾಗಿವೆ. ಈ ಸಹಾಯವಾಣಿ ಮೂಲಕ ಸಮಸ್ಯೆಯ ಗಂಭೀರತೆ ತಿಳಿದು ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಲಾಗುತ್ತದೆ.
ಬೆಂಗಳೂರು ನಗರ ಬೃಹತ್ ಆಗಿದೆ. ಈ ಸಹಾಯ ವಾಣಿಯಿಂದ ಒಳ್ಳೆ ಪ್ರಯತ್ನ ಕೂಡ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ತಮಾಷೆಗಾಗಿಯೋ ಸುಮ್ಮನೆ ಪರೀಕ್ಷೆ ಮಾಡೋಣ ಅಂತಲೋ ಈ ಸಂಖ್ಯೆಗೆ ಕರೆ ಮಾಡಬೇಡಿ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು










Click it and Unblock the Notifications