ಬಿಜೆಪಿ ವಿರುದ್ಧ ಎಚ್.ಎಸ್.ದೊರೆಸ್ವಾಮಿ ಅಸಮಾಧಾನ

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಎಸ್.ದೊರೆಸ್ವಾಮಿ, ಸ್ವಾಮಿ ವಿವೇಕಾನಂದರು ಯಾವುದೇ ಪಕ್ಷದ ಆಸ್ತಿಯಲ್ಲ. ಅವರು ಭಾರತದ ಸಂಸ್ಕೃತಿ ಮತ್ತು ಗೌರವವನ್ನು ವಿಶ್ವಕ್ಕೆ ತಿಳಿಸಿಕೊಟ್ಟವರು. ಜಾತಿ, ಧರ್ಮವನ್ನು ಮೀರಿ ಚಿಂತಿಸಿದ ಅವರು ಮಾನವ ಧರ್ಮ ಒಂದೇ ಎಂದು ಸಾರಿದವರು ಎಂದು ದೊರೆಸ್ವಾಮಿ ಅಭಿಪ್ರಾಯಪಟ್ಟರು.
ವಿವೇಕಾನಂದರು ಯಾವುದೇ ಪಕ್ಷದ ಆಸ್ತಿಯಲ್ಲ. ಆದರೆ, ಬಿಜೆಪಿ ಸ್ವಾಮಿ ವಿವೇಕಾನಂದರನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ನಿಜಕ್ಕೂ ಇದೊಂದು ಹೇಯ ಕೃತ್ಯ ಇಂತಹ ಪ್ರಯತ್ನಗಳನ್ನು ಪಕ್ಷ ಮಾಡಬಾರದು ಎಂದರು.
ಆಮ್ ಆದ್ಮಿ ನೋಡಿ ಕಲಿಯಿರಿ : ನವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮಾಡಿದ ಸಾಧನೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಒಂದು ಎಚ್ಚರಿಕೆ ಪಾಠವಾಗಿದೆ ಎಂದು ಎಚ್.ಎಸ್. ದೊರೆಸ್ವಾಮಿ ಹೇಳಿದ್ದಾರೆ. ಪಕ್ಷಗಳು ಜನತೆಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದಾಗ ಈಡೇರಿಸಲಿದ್ದರೆ ಏನಾಗುತ್ತದೆ ಎನ್ನುವುದನ್ನು ದೆಹಲಿ ಚುನಾವಣೆ ಫಲಿತಾಂಶ ತೋರಿಸಿದೆ ಎಂದು ಅವರು ಹೇಳಿದರು.
ರಾಜಕೀಯ ಪಕ್ಷಗಳು ಜನರಿಗೆ ಕೊಟ್ಟ ಮಾತಿಗೆ ತಪ್ಪಿದರೆ ಜನರು ಕಸದಂತೆ ಗುಡಿಸುತ್ತಾರೆ ಎನ್ನುವುದನ್ನು ದೆಹಲಿ ಚುನಾವಣೆ ಫಲಿತಾಂಸ ನೋಡಿ ಪಕ್ಷಗಳು ಮನವರಿಕೆ ಮಾಡಿಕೊಳ್ಳಬೇಕು ಎಂದು ದೊರೆಸ್ವಾಮಿ ಹೇಳಿದರು. ರಾಜಕೀಯ ಪಕ್ಷಗಳು ತಮ್ಮ ತಪ್ಪುಗಳ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಕಾಲಕ್ಕೆ ತಕ್ಕಂತೆ ಜನರ ಆಶಯಗಳಿಗೆ ತೆರೆದುಕೊಳ್ಳಬೇಕು ಎಂದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications