ಬಿಜೆಪಿ ವಿರುದ್ಧ ಎಚ್.ಎಸ್.ದೊರೆಸ್ವಾಮಿ ಅಸಮಾಧಾನ

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಎಸ್.ದೊರೆಸ್ವಾಮಿ, ಸ್ವಾಮಿ ವಿವೇಕಾನಂದರು ಯಾವುದೇ ಪಕ್ಷದ ಆಸ್ತಿಯಲ್ಲ. ಅವರು ಭಾರತದ ಸಂಸ್ಕೃತಿ ಮತ್ತು ಗೌರವವನ್ನು ವಿಶ್ವಕ್ಕೆ ತಿಳಿಸಿಕೊಟ್ಟವರು. ಜಾತಿ, ಧರ್ಮವನ್ನು ಮೀರಿ ಚಿಂತಿಸಿದ ಅವರು ಮಾನವ ಧರ್ಮ ಒಂದೇ ಎಂದು ಸಾರಿದವರು ಎಂದು ದೊರೆಸ್ವಾಮಿ ಅಭಿಪ್ರಾಯಪಟ್ಟರು.
ವಿವೇಕಾನಂದರು ಯಾವುದೇ ಪಕ್ಷದ ಆಸ್ತಿಯಲ್ಲ. ಆದರೆ, ಬಿಜೆಪಿ ಸ್ವಾಮಿ ವಿವೇಕಾನಂದರನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ನಿಜಕ್ಕೂ ಇದೊಂದು ಹೇಯ ಕೃತ್ಯ ಇಂತಹ ಪ್ರಯತ್ನಗಳನ್ನು ಪಕ್ಷ ಮಾಡಬಾರದು ಎಂದರು.
ಆಮ್ ಆದ್ಮಿ ನೋಡಿ ಕಲಿಯಿರಿ : ನವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮಾಡಿದ ಸಾಧನೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಒಂದು ಎಚ್ಚರಿಕೆ ಪಾಠವಾಗಿದೆ ಎಂದು ಎಚ್.ಎಸ್. ದೊರೆಸ್ವಾಮಿ ಹೇಳಿದ್ದಾರೆ. ಪಕ್ಷಗಳು ಜನತೆಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದಾಗ ಈಡೇರಿಸಲಿದ್ದರೆ ಏನಾಗುತ್ತದೆ ಎನ್ನುವುದನ್ನು ದೆಹಲಿ ಚುನಾವಣೆ ಫಲಿತಾಂಶ ತೋರಿಸಿದೆ ಎಂದು ಅವರು ಹೇಳಿದರು.
ರಾಜಕೀಯ ಪಕ್ಷಗಳು ಜನರಿಗೆ ಕೊಟ್ಟ ಮಾತಿಗೆ ತಪ್ಪಿದರೆ ಜನರು ಕಸದಂತೆ ಗುಡಿಸುತ್ತಾರೆ ಎನ್ನುವುದನ್ನು ದೆಹಲಿ ಚುನಾವಣೆ ಫಲಿತಾಂಸ ನೋಡಿ ಪಕ್ಷಗಳು ಮನವರಿಕೆ ಮಾಡಿಕೊಳ್ಳಬೇಕು ಎಂದು ದೊರೆಸ್ವಾಮಿ ಹೇಳಿದರು. ರಾಜಕೀಯ ಪಕ್ಷಗಳು ತಮ್ಮ ತಪ್ಪುಗಳ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಕಾಲಕ್ಕೆ ತಕ್ಕಂತೆ ಜನರ ಆಶಯಗಳಿಗೆ ತೆರೆದುಕೊಳ್ಳಬೇಕು ಎಂದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications