Get Updates
Get notified of breaking news, exclusive insights, and must-see stories!

ಮಹದೇವ ಪ್ರಸಾದ್ ನಿಧನ: ಕಣ್ಣೀರಿಟ್ಟ ಸಿದ್ದರಾಮಯ್ಯ

ಬೆಂಗಳೂರು, ಜನವರಿ 3: ಸಕ್ಕರೆ, ಸಹಕಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ನಿಧನ ಹೊಂದಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದು, ಮಂಗಳವಾರ ಸರಕಾರಿ ರಜೆ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ವೈಯಕ್ತಿಕವಾಗಿ ನಮಗೆ ನಷ್ಟವಾಗಿದೆ, ಪಕ್ಷಕ್ಕೆ ನಷ್ಟವಾಗಿದೆ ಅವರೊಬ್ಬ ಸಜ್ಜನ ರಾಜಕಾರಣಿ ಎಂದು ಹನಿಗಣ್ಣಾದರು. ನಂತರ ಮೂರು ದಿನಗಳ ಕಾಲ ಶೋಕಾಚರಣೆ ಮತ್ತು ಮಂಗಳವಾರ ಸಾರ್ವತ್ರಿಕ ರಜಾ ಘೋಷಣೆ ಮಾಡಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

siddaramaiah

ಸಚಿವ ಮಹದೇವ ಪ್ರಸಾದ್ ಮಿತ ಬಾಷಿಯಾಗಿದ್ದು, ಸೌಮ್ಯ, ಸಜನ ರಾಜಕಾರಣಿಯಾಗಿದ್ದರು. ಅವರು ಡಿಸೆಂಬರ್ 31 ರೊಂದು ನನ್ನೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅವರದ್ದು ಮಾದರಿ ಕುಟುಂಬ ಒಬ್ಬನೇ ಮಗ, ಇತ್ತಿಚೆಗೆ ಮೊಮ್ಮೊಗ ಜನಿಸಿದ್ದ. ಪ್ರಸಾದ್ ಅವರು ಯಾರೋಂದಿಗೂ ಜಗಳವಾಡಿದ್ದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]

ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ, ಮಹದೇವ ಪ್ರಸಾದ್ ಅವರಿಗೆ ದೇವರು ಚಿರಶಾಂತಿ ನೀಡಲಿ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+