ರಸ್ತೆಯಲ್ಲಿ ತುಂಬಿದ ಚರಂಡಿ ನೀರು: ಮನೆಯಲ್ಲೇ ಬಂಧಿಯಾದ ಜನರು
ಬೆಂಗಳೂರು, ಏಪ್ರಿಲ್ 09: ನಗರದ ಎಚ್ಎಸ್ಆರ್ ಲೇಔಟ್ ನ 6ಹಾಗೂ 7ನೇ ಸೆಕ್ಟರ್ ನಲ್ಲಿರುವ ಸ್ಥಳೀಯರು ಮನೆಯಲ್ಲಿಯೇ ಬಂಧಿಯಾಗಿದ್ದಾರೆ. ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಏಕೆ ಅಂತೀರಾ, ಮನೆಯ ಮುಂದೆ ಕಾಲಿಟ್ಟರೆ ಚರಂಡಿ ನೀರು, ದುರ್ವಾಸನೆಯಿಂದಾಗಿ ಜನರು ಬೇಸತ್ತಿದ್ದಾರೆ.
ಮನೆಯ ಮುಂದೆ ಚರಂಡಿ ನೀರು ಹರಿಯುತ್ತಿರುವ ಕಾರಣ ಸಾವಿರಾರು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಒಂದೂವರೆ ತಿಂಗಳಿನಿಂದ ಕಾಮಗಾರಿ ನಡೆಯುತ್ತಿದೆ. ಇದುವರೆಗೂ ಪೂರ್ಣಗೊಂಡಿಲ್ಲ. ಮೂರು ವಾರಗಳಿಂದ ಕೆಲಸಗಾರರೇ ಇಲ್ಲ.
ಹೀಗೆ ಬಿಟ್ಟರೆ ಎಲ್ಲರಿಗೂ ಕಾಲಯಿಲೆ ಬರುವುದು ಖಚಿತ ಈ ಕುರಿತು ಎಂಎಲ್ ಎ ಗಳಿಗೆ ದೂರು ನೀಡಿದ್ದೇವೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತೆ ಅಂತ ಭರವಸೆ ನೀಡಿದ್ದರು ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಮನೆಯ ಮುಂದೆ ಕಾಂಪೌಂಡ್ ಬಳಿ ವಾಹನಗಳನ್ನು ನಿಲುಗಡೆ ಮಾಡಲು ಸಾಧ್ಯವಿಲ್ಲ, ರಸ್ತೆಯಲ್ಲೇ ನಿಲ್ಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಗೇಟ್ ಹೊರಗಡೆ ಕಾಲಿಡುವಂತಿಲ್ಲ, ಮರದ ಹಲಗೆಯ ಆಶ್ರಯ ಪಡೆದು ಮನೆಯಿಂದ ಹೊರಗಡೆ ಹೋಗುತ್ತಿದ್ದಾರೆ.
ಕಳೆದ ವರ್ಷ ಭಾರಿ ಮಳೆ ಬಂದಿದ್ ಸಂದರ್ಭದಲ್ಲಿ ಎರಡು ವಾರಗಳನ್ನು ತೆಗೆದುಕೊಂಡು ಚರಂಡಿ ನೀರು ರಸ್ತೆಗೆ ಹರಿಯದಂತೆ ಮಾಡಿದ್ದರು. ಆದರೆ ಈಗ ಆ ಬೀದಿಯಲ್ಲಿ ಸಂಪೂರ್ಣವಾಗಿ ಎಲ್ಲ ಕಡೆಗಳಲ್ಲೂ ಒಳಚರಂಡಿ ತೆರೆಯಲಾಗಿದೆ, ತೆರೆದು ಕಾಮಗಾರಿ ಮಾಡದೆ ಹಾಗೆಯೇ ಇಟ್ಟಿದ್ದಾರೆ ಎಂದು ಸ್ಥಳೀಯರಾದ ರಾಮಲಿಂಗಪ್ಪ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಬರುತ್ತಿರುವ ದುರ್ವಾಸನೆಗೆ ಹಿರಿಯ ನಾಗರಿಕರಿಗಂತೂ ಇನ್ನೂ ಕಷ್ಟವಾಗಿದೆ. 7ನೇ ಸೆಕ್ಟರ್ ನ 7ನೇ ಮುಖ್ಯರಸ್ತೆಯಲ್ಲಿ ಅಷ್ಟು ತೊಂದರೆಯಾಗಿಲ್ಲ. ಉಳಿದೆಲ್ಲಾ ಕಡೆಗಳಲ್ಲಿ ನಡೆದುಕೊಂಡು ಹೋಗುವುದು ಕೂಡ ಕಷ್ಟಸಾಧ್ಯವಾಗಿದೆ ಎಂದು ಎಂದು ಅಳಲು ತೋಡಿಕೊಂಡಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications