ಕಿತ್ತುಹೋದ ರಸ್ತೆಗುಂಡಿಗೆ ಪೂಜೆ, ಬಿಬಿಎಂಪಿಗೆ 'ಮಂಗಳಾರತಿ'
ಬೆಂಗಳೂರು, ಜುಲೈ, 09: ಕಿತ್ತು ಹೋಗಿರುವ ರಸ್ತೆ ಗುಂಡಿಗಳಿಗೆ ಎಚ್ ಎಸ್ ಆರ್ ಲೇಔಟ್ ನಿವಾಸಿಗಳು ಪೂಜೆ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳೆ ಎಲ್ಲಿದ್ದೀರಿ?.. ಬನ್ನಿ ಸಾರ್ ಬನ್ನಿ, ಬಂದು ತೀರ್ಥ-ಪ್ರಸಾದ ಸ್ವೀಕರಿಸಿ...
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಗೇನು ಬರವೇ? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಸ್ತೆ ದುರಸ್ತಿ ಮಾಡಿದೆ ಇನ್ನಾದರೂ ಆರಾಮವಾಗಿ ಓಡಾಡಬಹುದು ಎಂದು ಅಂದುಕೊಂಡಿದ್ದರೆ ಮರುದಿನ ಅದೇ ಜಾಗವನ್ನು ಜಲಮಂಡಳಿ ಅಗೆದು ಹಾಕಿರುತ್ತದೆ. ಈ ಬಗ್ಗೆ ಎಷ್ಟು ಹೇಳಿದರೂ ಅಷ್ಟೇ ಬಿಡಿ..[ರಸ್ತೆ ನಿಯಮ ಉಲ್ಲಂಘಿಸಿದವನ ಫೋಟೋ ತೆಗೆದಿದ್ದು ತಪ್ಪಾ?]

ರಸ್ತೆಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ ಮಾಡುವುದನ್ನು ನೋಡಿದ್ದೇವೆ, ಬೀದಿಗಿಳಿದು ಹೋರಾಟ ಮಾಡಿ ಮನವಿ ಸಲ್ಲಿಕೆ ಮಾಡಿದ್ದನ್ನು ನೋಡಿದ್ದೇವೆ. ಆದರೆ ಇದೆಲ್ಲಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್ ಎಸ್ ಆರ್ ಲೇಔಟ್ ನಾಗರಿಕರು ರಸ್ತೆ ಗುಂಡಿಗೆ ಪೂಜೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.[ಹೊಂಡ ಬಿದ್ದ ರಸ್ತೆ, ಕಟ್ಟಿದ ಚರಂಡಿ, ಕೊಳೆತ ಕಸ, ಅಯ್ಯಪ್ಪಾ..!]

ರಸ್ತೆ ಗುಂಡಿಯ ಸುತ್ತ ಕಲಶ ಇಟ್ಟು, ರಂಗೋಲಿ ಹಾಕಿ ಪೂಜೆ ಮಾಡಿ ಪ್ರಸಾದವನ್ನು ನೀಡಿದ್ದಾರೆ. #PotholePooje ಎಂಬ ಹಾಶ್ ಟ್ಯಾಗ್ ನ್ನು ಟ್ವಿಟ್ಟರ್ ನಲ್ಲಿ ಕ್ರಿಯೆಟ್ ಮಾಡಿದ್ದಾರೆ.[ಮಳೆ ಬಂದರೆ ಮಹಾನಗರ..!]

ಪೂಜೆ ಹೇಗೆ ನಡೆಯಿತು?
ಬಿದ್ದ ಮಳೆಗೆ ನೀರು ತುಂಬಿಕೊಂಡ ರಸ್ತೆ ಗುಂಡಿಯನ್ನು ಆಯ್ಕೆ ಮಾಡಿಕೊಳ್ಳಲಾಯಿತು. ನಂತರ ರಂಗೋಲಿ ಬಳಿದು, ತೆಂಗಿನ ಕಾಯಿ ಒಡೆಯಲಾಯಿತು. ಸರಿಯಾದ 'ಮಂಗಳಾರತಿ'ಯನ್ನು ಮಾಡಲಾಯಿತು.


-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications