ಭೂ ಕಬಳಿಕೆ: ರಾಮಸ್ವಾಮಿಗೆ ಸಾಂಗ್ಲಿಯಾನ ಚಾಲೆಂಜ್
ಬೆಂಗಳೂರು, ಅ.19: ತಮ್ಮ ಕುಟುಂಬದ ವಿರುದ್ಧದ ಭೂ ಕಬಳಿಕೆ ಆರೋಪವನ್ನು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಎಚ್.ಟಿ.ಸಾಂಗ್ಲಿಯಾನ ತಳ್ಳಿ ಹಾಕಿದ್ದಾರೆ. ಆರೋಪಗಳನ್ನು ಸಾಬೀತು ಪಡಿಸುವಂತೆ ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
ನಮ್ಮ ಕುಟುಂಬದಿಂದ ಯಾವುದೇ ಭೂ ಒತ್ತುವರಿಯಾಗಿಲ್ಲ. ಈ ಸಂಬಂಧ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ. ಸರ್ಕಾರ ತನಗೆ ಭೂಮಿ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಇಷ್ಟು ವರ್ಷದ ತನ್ನ ಸಾರ್ವಜನಿಕ ಜೀವನದಲ್ಲಿ ಯಾವುದೇ ಭೂಮಿಯನ್ನು ಪರಭಾರೆ ಮಾಡಿಲ್ಲ. ಸರ್ಕಾರದ ಯಾವುದೇ ಆಸ್ತಿಯನ್ನು ಅತಿಕ್ರಮಣ ಮಾಡಿಲ್ಲ. ನನ್ನ ವಿರುದ್ಧ ರಾಮಸ್ವಾಮಿ ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು ಎಂದು ಸಾಂಗ್ಲಿಯಾನ ಚಾಲೆಂಜ್ ಮಾಡಿದ್ದಾರೆ.
ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಉಪಾಧ್ಯಕ್ಷ ಡಾ.ಎಚ್.ಟಿ.ಸಾಂಗ್ಲಿಯಾನ ಕುಟುಂಬವು ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಬಡೇನಹಳ್ಳಿ ಗ್ರಾಮದಲ್ಲಿ ಆರು ಎಕರೆ ಭೂಮಿ(ಗೋಮಾಳದ ಜಾಗ)ಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ. ಸಾಂಗ್ಲಿಯಾನ ತಮ್ಮ ಮಗಳು ಎಲಿಜಬೆತ್ಯಾನಾ ಸಿಂಟೊ, ಅಳಿಯ ಜಾನ್ಪಾಲ್ ಸಿಂಟೊ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ಭೂಮಿಯನ್ನು ಕಬಳಿಸಿದ್ದಾರೆ. ಈ ಕಾರ್ಯಕ್ಕೆ ತಹಶೀಲ್ದಾರ್, ಉಪ ವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು ಕೈಜೋಡಿಸಿದ್ದಾರೆ ಎಂದು ರಾಮಸ್ವಾಮಿ ಆರೋಪಿಸಿದರು.
ಮತ್ತೊಂದು ಪ್ರಕರಣ: ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ಶ್ರೀನಿವಾಗಿಲು ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಆರ್ಥಿಕವಾಗಿ ಹಿಂದುಳಿದಿರುವವರಿಗಾಗಿ ನಿವೇಶನ ನೀಡಲು ಸರಕಾರ 1984ರಲ್ಲಿ 66 ಎಕರೆ 22 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು
ಆದರೆ, 2004ರವರೆಗೂ ಯಾವುದೇ ಕಾರ್ಯಚಟುವಟಿಕೆಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಾಂತಿನಗರ ಗೃಹ ನಿರ್ಮಾಣ ಸಂಘ ಈ ನಿವೇಶನಗಳನ್ನು ಕಬಳಿಸಲು ಸಂಚು ರೂಪಿಸಿದೆ. ಒಂದೇ ಕುಟುಂಬದವರಿಗೆ 150ಕ್ಕೂ ಹೆಚ್ಚು ನಿವೇಶನಗಳನ್ನು ಮಾರಾಟ ಮಾಡಿರುವುದು ಅನುಮಾನ ಮೂಡಿಸಿದೆ
ಸಾಂಗ್ಲಿಯಾನ ಹಾಗೂ ಶಾಂತಿನಗರ ಗೃಹ ನಿರ್ಮಾಣ ಸಂಘಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೊಳಪಡಿಸಬೇಕು. ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಮಸ್ವಾಮಿ ಆಗ್ರಹಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications