ಒಡೆದ ಹುಳಿಮಾವು ಕೆರೆ; ಸಮಿತಿ ರಚನೆ ಮಾಡಿದ ಸರ್ಕಾರ
ಬೆಂಗಳೂರು, ಡಿಸೆಂಬರ್ 04 : ಹುಳಿಮಾವು ಕೆರೆ ಒಡೆದು ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಘಟನೆಗೆ ಕಾರಣ ಏನು? ಎಂದು ವರದಿ ನೀಡಲು ಕರ್ನಾಟಕ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ನವೆಂಬರ್ 24ರಂದು ಕೆರೆ ಒಡೆದು ಬಡಾವಣೆಗಳಿಗೆ ನೀರು ನುಗ್ಗಿತ್ತು.
ಬೆಂಗಳೂರು ನಗರಾಭಿವೃದ್ಧಿ ಸಚಿವ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಚನೆಯಂತೆ ಕರ್ನಾಟಕ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ಮೂವರು ಸದಸ್ಯರ ಸಮಿತಿ 10 ದಿನದಲ್ಲಿ ಸರ್ಕಾರಕ್ಕೆ ವರದಿಯನ್ನು ನೀಡಲಿದೆ.
ನವೆಂಬರ್ 24ರ ಭಾನುವಾರ ಹುಳಿಮಾವು ಕೆರೆ ಒಡೆದಿತ್ತು. ವಿವಿಧ ಬಡಾವಣೆಗಳಿಗೆ ಕೆರೆಯ ಕೊಳಚೆ ನೀರು ನುಗ್ಗಿತ್ತು. 250ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ಕೆರೆ ಒಡೆದಿದ್ದು ಯಾರು? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪ ಚುನಾವಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದ ಸರ್ಕಾರ ಈಗ ಕೆರೆ ಒಡೆದ ಕಾರಣ ತಿಳಿದುಕೊಳ್ಳಲು ಸಮಿತಿಯನ್ನು ರಚನೆ ಮಾಡಿದೆ. ಯಡಿಯೂರಪ್ಪ ಸಹ ಕೆರೆ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮೂವರು ಸದಸ್ಯರ ಸಮಿತಿ
ಹುಳಿಮಾವು ಕೆರೆ ಒಡೆದ ದುರಂತದ ಬಗ್ಗೆ ವರದಿ ನೀಡಲು ಸರ್ಕಾರ ಮೂವರು ಸದಸ್ಯರ ಸಮಿತಿ ರಚನೆ ಮಾಡಿದೆ. ಐಐಎಸ್ಸಿ ನಿವೃತ್ತ ಪ್ರಾಧ್ಯಾಪಕ ಬಿ. ಆರ್. ಶ್ರೀನಿವಾಸಮೂರ್ತಿ, ಶಾಂತರಾಜಣ್ಣ ಮತ್ತು ನಿವೃತ್ತ ಇಂಜಿನಿಯರ್ ಎಂ. ಎಲ್.ಮಾದಯ್ಯ ಸಮಿತಿಯಲ್ಲಿದ್ದಾರೆ.

ಯಡಿಯೂರಪ್ಪ ಭೇಟಿ ನೀಡಿದ್ದರು
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹುಳಿಮಾವು ಕೆರೆ ಒಡೆದು ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ದುರಂತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ರೂ. 50,000 ಪರಿಹಾರ ಧನವನ್ನು ತಕ್ಷಣ ಜಮೆ ಮಾಡಲು ಸೂಚಿಸಿದ್ದರು.

ಹೈಕೋರ್ಟ್ ತರಾಟೆ
ಹುಳಿಮಾವು ಕೆರೆ ಒಡೆದ ಪ್ರಕರಣ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಬಿಬಿಎಂಪಿ, ಬಿಡಿಎಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವರದಿ ನೀಡುವಂತೆ ಬಿಬಿಎಂಪಿಗೆ ಸೂಚಿಸಿದ್ದರು.

ಬಡಾವಣೆಗಳು ಜಲಾವೃತ
ನವೆಂಬರ್ 24ರಂದು ಹುಳಿಮಾವು ಕೆರೆಯ ದಕ್ಷಿಣ ಭಾಗ ಒಡೆದ ಪರಿಣಾಮ ಕೃಷ್ಣ ಬಡಾವಣೆ, ಅವನಿ ಶೃಂಗೇರಿ ನಗರ ಬಡಾವಣೆ, ಆರ್. ಆರ್. ಬಡಾವಣೆ, ನ್ಯಾನಪ್ಪನಹಳ್ಳಿ ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications