ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಡೆದ ಹುಳಿಮಾವು ಕೆರೆ ದಂಡೆ; ಹಾವು ಹಿಡಿಯಲು ಕರೆ

|
Google Oneindia Kannada News

ಬೆಂಗಳೂರು, ನವೆಂಬರ್ 25 : ಹುಳಿಮಾವು ಕೆರೆ ದಂಡೆ ಒಡೆದು ವಿವಿಧ ಬಡಾವಣೆಗಳಿಗೆ ಭಾನುವಾರ ನೀರು ನುಗ್ಗಿತ್ತು. ನೀರು ಇಳಿದು ಜನರು ಮನೆಗಳತ್ತ ಹೊರಟರೆ ಹಾವುಗಳ ಕಾಟ ಆರಂಭವಾಗಿದೆ. ಹಾವು ಹಿಡಿಯಿರಿ ಎಂದು ಪಾಲಿಕೆಗೆ ಕರೆಗಳು ಹೋಗುತ್ತಿವೆ.

ಕೆರೆ ನೀರಿನಿಂದ ವಿವಿಧ ಬಡಾವಣೆಗಳು ಜಲಾವೃತವಾಗಿತ್ತು. ಸೋಮವಾರ ನೀರು ಇಳಿಮುಖವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೀರು, ಕಸ ಆವರಿಸಿದ ಜನ ವಸತಿ ಸ್ಥಳದಲ್ಲಿ ಸ್ವಚ್ಚತೆಯ ಕಾರ್ಯವನ್ನು ಕೈಗೊಂಡಿದೆ.

ಒಡೆದ ಹುಳಿಮಾವು ಕರೆ; ಮೂವರಲ್ಲಿ ಯಾರು ಜವಾಬ್ದಾರಿ? ಒಡೆದ ಹುಳಿಮಾವು ಕರೆ; ಮೂವರಲ್ಲಿ ಯಾರು ಜವಾಬ್ದಾರಿ?

Hulimavu Lake Bund Breached Snake Creates Panic

ಹುಳಿಮಾವು ಕೆರೆ ಒಡೆದಿದ್ದರಿಂದ ಸಂತ್ರಸ್ತರಾಗಿ, ಆಶ್ರಯ ತಾಣದಲ್ಲಿ ಉಳಿದು ಕೊಂಡಿರುವ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸಂಚಾರಿ ಶೌಚಾಲಯಗಳ ವ್ಯವಸ್ಥೆಯನ್ನು ಬಿಬಿಎಂಪಿಯಿಂದ ಮಾಡಲಾಗಿದೆ. ನೀರು ಇಳಿಮುಖವಾಗಿದ್ದು, ಜನರು ಮನೆಯತ್ತ ಧಾವಿಸುತ್ತಿದ್ದಾರೆ.

ಹುಳಿಮಾವು ಕೆರೆ ಕಟ್ಟೆ ಒಡೆದು, ಲೇಔಟಿಗೆ ನೀರು, ಆತಂಕದಲ್ಲಿ ಜನತೆ ಹುಳಿಮಾವು ಕೆರೆ ಕಟ್ಟೆ ಒಡೆದು, ಲೇಔಟಿಗೆ ನೀರು, ಆತಂಕದಲ್ಲಿ ಜನತೆ

Hulimavu Lake Bund Breached Snake Creates Panic

ನೀರು ಇಳಿಮುಖವಾದರೂ ಕಸ ಆವರಿಸಿದೆ. ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಫಾಗಿಂಗ್ ಮಾಡಲಾಗುತ್ತಿದೆ. ನೀರಿನ ಜೊತೆ ಕೆರೆಯಲ್ಲಿದ್ದ ಹಾವುಗಳು ಬಡಾವಣೆಗಳಿಗೆ ನುಗ್ಗಿವೆ. ಅವುಗಳನ್ನು ಹಿಡಿಯಿರಿ ಎಂದು ಪಾಲಿಕೆಗೆ ಕರೆ ಬರುತ್ತಿದೆ.

11 ವರ್ಷದ ನಂತರ ತುಂಬಿದ ಕಳಸಾಪುರ ದೊಡ್ಡ ಕೆರೆ11 ವರ್ಷದ ನಂತರ ತುಂಬಿದ ಕಳಸಾಪುರ ದೊಡ್ಡ ಕೆರೆ

ವರದಿ ಕೇಳಿದ ಲೋಕಾಯುಕ್ತ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಕೆರೆ ಒಡೆದ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ. ಸಂತ್ರಸ್ತರಾದವರಿಗೆ ಪರಿಹಾರ ನೀಡುವ ಕುರಿತು ಚಿಂತನೆ ನಡೆಸುವಂತೆ ತಿಳಿಸಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. "ಯಾರೋ ಸ್ವಾರ್ಥಕ್ಕೆ ಕೆರೆ ಕಟ್ಟೆ ಒಡೆಯುವ ಕೆಲಸ ಮಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಅವರನ್ನು ಹಿಡಿದು ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದರು.

English summary
After Hulimavu lake water flooded the area Bengaluru Mahanagara Palike (BBMP) getting call to catch snake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X