ಸಾರಕ್ಕಿ ಆಯ್ತು, ಬಾಣಸವಾಡಿ ಕೆರೆ ಒತ್ತುವರಿ ತೆರವು
ಬೆಂಗಳೂರು, ಮೇ. 2: ಅಕ್ರಮ ಕೆರೆ ಒತ್ತುವರಿ ವಿರುದ್ಧದ ಜಿಲ್ಲಾಡಳಿತದ ಕಾರ್ಯಾಚರಣೆ ಬಾಣಸವಾಡಿಯಲ್ಲಿ ಮುಂದುವರಿದಿದೆ. ಎಚ್. ಎಸ್.ಆರ್.ಬಡಾವಣೆಯಲ್ಲಿ 70ಕ್ಕು ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ಶನಿವಾರ ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ.
ತಹಸೀಲ್ದಾರ್ ಹರೀಶ್ನಾಯಕ್ ಅವರ ನೇತೃತ್ವದಲ್ಲಿ ಇಂದು 300ಕ್ಕೂ ಹೆಚ್ಚು ಸಿಬ್ಬಂದಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು. 42.38 ಎಕರೆ ಪ್ರದೇಶದಲ್ಲಿರುವ ಕೆರೆಯ ಕಾಲು ಭಾಗ ಒತ್ತುವರಿಯಾದ ದಾಖಲೆಗಳು ಜಿಲ್ಲಾಡಳಿತದ ಬಳಿ ಇದೆ.[ಡಿಸಿ ಶಂಕರ್ ದಿಟ್ಟ ನಡೆ: ಸಾರಕ್ಕಿ ಕೆರೆ ತೆರವು]

ಮೊದಲೇ ಸರ್ವೇ ನಡೆಸಿ ತೆರವು ಮಾಡುವಂತೆ ಆಡಳಿತ ನೋಟಿಸ್ ನೀಡಿತ್ತು. ಆದರೆ ಪುನಃ ಸರ್ವೇ ನಡೆಸುವಂತೆ ಒತ್ತುವರಿದಾರರು ಕೇಳಿಕೊಂಡಿದ್ದರು. ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಶನಿವಾರ ತೆರವು ಮಾಡಲಾಗಿದೆ. ಒತ್ತುವರಿ ಪರಿಣಾಮ ರಿಂಗ್ ರಸ್ತೆಯಲ್ಲಿ ಸಂಚಾರ ಸಮಸ್ಯೆ ಉಂಟಾಗಿತ್ತು.
ಪ್ರದೇಶದಲ್ಲಿರುವ ಸುಮಾರು 200 ಮನೆಗಳಿಗೆ ತೆರವು ಮಾಡಲು ತಿಳಿಸಲಾಗಿದ್ದು ಎರಡು ದಿನ ಕಾಲಾವಕಾಶ ನೀಡಲಾಗಿದೆ. ಎಂದು ಜಿಲ್ಲಾಧಿಕಾರಿ ಶಂಕರ್ ತಿಳಿಸಿದ್ದಾರೆ.
700 ಎಕರೆ ಅರಣ್ಯ ಭೂಮಿ ವಶ
ಕಾಡುಗೋಡಿಯಲ್ಲಿ ಒತ್ತುವರಿಯಾಗಿದ್ದ 771 ಎಕರೆ ಜಮೀನಿನ್ನು ವಶಪಡಿಸಿಕೊಂಡು ಅರಣ್ಯ ಇಲಾಖೆ ಸುಪರ್ದಿಗೆ ನೀಡಲು ಆಡಳಿತ ಮುಂದಾಗಿದೆ. ಇಲ್ಲಿ ಕೆಲ ದಲಿತರ ಮನೆಗಳಿದ್ದು ಅದನ್ನು ಸದ್ಯಕ್ಕೆ ತೆರವು ಮಾಡುವುದಿಲ್ಲ ಎಂದು ಆಡಳಿತ ಸ್ಪಷ್ಟನೆ ನೀಡಿದೆ. ಕೆಐಡಿಬಿ ಸೇರಿದಂತೆ ಅನೇಕರು ಇಲ್ಲಿ ಒತ್ತುವರಿ ನಡೆಸಿದ್ದು ತೆರವು ಮಾಡಲಾಗುವುದು. ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ, ಉಪವಿಭಾಗಾಧಿಕಾರಿ ಮಹೇಶ್ ಬಾಬು, ಜಾಗೃತದಳದ ಸಹಾಯಕ ಆಯುಕ್ತ ನಾಗರಾಜ್ರೆಡ್ಡಿ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications