ತೆರೆದಿದೆ ರಾಜಭವನ, ಓ.. ಬಾ ಅತಿಥಿ!
ಬೆಂಗಳೂರು, ಆಗಸ್ಟ್ 24: ರಾಜಭವನ ಸಾರ್ವಜನರಿಗೆ ಮುಕ್ತವಾಗಿ ಒಂಭತ್ತು ದಿನಗಳು ಕಳೆದಿವೆ. ಪ್ರತಿ ನಿತ್ಯವೂ 400 ಮಂದಿ ಭೇಟಿ ನೀಡುತ್ತಿದ್ದಾರೆ.
ಗುರುವಾರ 450ಜನರಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಸೆ.6ರವರೆಗೆ ರಾಜಭವನ ಮುಕ್ತವಾಗಿರುತ್ತದೆ. ಸಂಜೆ 4ರಿಂದ 8ಗಂಟೆವರೆಗೆ ನಡೆಯುವ ಈ ಸಾರ್ವಜನಿಕ ವೀಕ್ಷಣೆ ಕಾರ್ಯಕ್ರಮ ಜನರಿಗೆ ರಾಜಭವನದ ಹಲವು ಮಾಹಿತಿಗಳನ್ನು ನೀಡುತ್ತದೆ.
ಹದಿನಾರು ಎಕರೆ ಪ್ರದೇಶದಲ್ಲಿ ರಾಜಭವನ, ಗಾಜಿನ ಮನೆ,ಉದ್ಯಾನ, ಬ್ಯಾಂಕ್ವೆಟ್ ಹಾಲ್, ಕಾರಂಜಿ ಒಳಗೆ ಇಟ್ಟಿರುವ ಪುರಾತನ ವಸ್ತುಗಳನ್ನು ವೀಕ್ಷಿಸಲು ಅವಕಾಶ ಇರುತ್ತದೆ.

ಗುರುವಾರ ರಾಜಭವನಕ್ಕೆ ಭೇಟಿ ನೀಡಿದವರನ್ನು 20ತಂಡವಾಗಿ ವಿಂಗಡಿಸಿ ಪ್ರವಾಸಿ ಮಾರ್ಗದರ್ಶಿಗಳ ನೇತೃತ್ವದಲ್ಲಿ ಕರೆದೊಯ್ಯಲಾಯಿತು. ಗಾಜಿನ ಮನೆಯಲ್ಲಿ ಕಾಫಿ, ಬಿಸ್ಕತ್ತು, ಸೇವನೆ ಮುಗಿದ ಬಳಿಕ ಉದ್ಯಾನದಲ್ಲಿ ವಿಹಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ರಾಜಭವನ ಆವರಣದ ಬಹುತೇಕ ಭಾಗ ಉದ್ಯಾನದಿಂದ ಕೂಡಿದ್ದು, ಹತ್ತಕ್ಕೂ ಅಧಿಕ ತೋಟಗಾರಿಕ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪ್ರತಿದಿನ ಉದ್ಯಾನಕ್ಕೆ ನೀರು ಹಾಯಿಸಿ ಸದಾ ಹಸಿರಾಗಿರುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಮಾರ್ಗದರ್ಶಿಗಳು ವಿವರಿಸಿದ್ದಾರೆ.
1992-2002ರ ಅವಧಿಯಲ್ಲಿ ರಾಜ್ಯಪಾಲರಾಗಿದ್ದ ವಿ.ಎಸ್. ರಮಾದೇವಿ ಇದೇ ರೀತಿ ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದರು. ಹದಿನಾರು ವರ್ಷಗಳ ನಂತರ ಮತ್ತೆ ರಾಜಭವನವನ್ನು ಹತ್ತಿರದಿಂದ ನೋಡುವ ಅವಕಾಶ ಸಾರ್ವಜನಿಕರಿಗೆ ಲಭ್ಯವಾಗಿದೆ. ನಿಗದಿಗಿಂತ ಹೆಚ್ಚು ನೋಂದಣಿಯಾಗಿರುವ ಕಾರಣ ಆನ್ಲೈನ್ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications