ದೆಹಲಿ ಸೋಲು: ತಮ್ಮದೇ ಪಕ್ಷದ ಮುಖಂಡರ ವಿರುದ್ದ ಕಿಡಿಕಾರಿದ ಕಾಂಗ್ರೆಸ್ ಶಾಸಕ ಹ್ಯಾರಿಸ್
ಬೆಂಗಳೂರು, ಫೆ 15: ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷಕ್ಕಾದ ಅವಮಾನಕಾರಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ಕಾಂಗ್ರೆಸ್ ಮುಖಂಡರೆ ಕೂಗು ಹೆಚ್ಚಾಗುತ್ತಿದೆ. ಶರ್ಮಿಷ್ಠೆ ಮುಖರ್ಜಿ, ವೀರಪ್ಪ ಮೊಯ್ಲಿ ನಂತರ ಈಗ ಬೆಂಗಳೂರು ಶಾಂತಿನಗರ ಕ್ಷೇತ್ರದ ಶಾಸಕರ ಸರದಿ.
ದೆಹಲಿ ಸೋಲಿನಿಂದ ಕಾಂಗ್ರೆಸ್ ಎಚ್ಚೆತ್ತುಕೊಳ್ಳದಿರುವುದು ಆಘಾತಕಾರಿ ಎಂದು ಶಾಸಕ ಎನ್.ಎ.ಹ್ಯಾರಿಸ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣದಲ್ಲಿ ಹ್ಯಾರಿಸ್ ಬರೆದುಕೊಂಡಿದ್ದು ಹೀಗೆ. "ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ".
"ಪಕ್ಷದಲ್ಲಿ ಪದಾಧಿಕಾರಿಗಳು ಇರುವುದು ಯಾವ ಕೆಲಸಕ್ಕಾಗಿ ಪಕ್ಷವನ್ನು ಕಟ್ಟುವುದಕ್ಕಾಗಿಯೋ? ಅಥವಾ ತಮ್ಮ ಸ್ವಹಿತಾಸಕ್ತಿಗಳಿಗಾಗಿ ಪಕ್ಷವನ್ನು ಬಲಿ ಕೊಡುವುದಕ್ಕಾಗಿಯೋ? " ಎಂದು ಶಾಸಕ ಹ್ಯಾರಿಸ್ ಪ್ರಶ್ನಿಸಿದ್ದಾರೆ.

"ದೆಹಲಿಯಂತಹ ಫಲಿತಾಂಶ ಹಲವಾರು ಬಾರಿ ಬಂದಿದೆ. ಆದರೂ, ಈ ಬಗ್ಗೆ ಪಕ್ಷ ಯೋಚನೆ ಮಾಡದೇ ಇರುವುದು ತನ್ನ ತಪ್ಪುಗಳನ್ನು ತಿದ್ದಿಕೊಳ್ಳದೆ ಇರುವುದು ಯೋಚಿಸಬೇಕಾದ ವಿಚಾರ. ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ, ಆದರೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಚಿಂತಿಸುತ್ತಿಲ್ಲ" ಎಂದು ಹ್ಯಾರಿಸ್ ಬೇಸರ ವ್ಯಕ್ತಪಡಿಸಿದ್ದಾರೆ.
"ಸೋಲುಗಳು ಪಾಠವಾಗಬೇಕು ಅಭ್ಯಾಸವಾಗಬಾರದು. ದೆಹಲಿಯ ಫಲಿತಾಂಶ ಪಕ್ಷದ ಹಿರಿಯ ನಾಯಕರಿಗೆ ಸಂದೇಶವಾಗಬೇಕು ಎಂಬುದು ನನ್ನ ಆಗ್ರಹ " ಎಂದು ಹ್ಯಾರಿಸ್ ಬರೆದುಕೊಂಡಿದ್ದಾರೆ.
ದೆಹಲಿ ಫಲಿತಾಂಶದ ನಂತರ, ಬಿಜೆಪಿ ಸೋಲಿನ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿಕೆ ನೀಡಿದ್ದರು. ಇದಕ್ಕೆ, ಪಕ್ಷದಲ್ಲಿನ ಕೆಲವು ಮುಖಂಡರು, ಮೊದಲು ನಮ್ಮ ಸೋಲನ್ನು ನೋಡಿಕೊಳ್ಳೋಣ ಎಂದು ತಿರುಗೇಟು ನೀಡಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications