'ಕನ್ನಡ ನಾಡಿನ ಜನರಿಗೆ ಪ್ರಾಮಾಣಿಕ ಸೇವೆಗೈಯಲು ಇರುವಂತಹ ನಾಯಿ ನಾನು' -ಬೊಮ್ಮಾಯಿ
ಬೆಂಗಳೂರು ಜನವರಿ 4: 'ಪ್ರತಿಯೊಂದು ಪ್ರಾಣಿಗಳಿಗೂ ಒಂದೊಂದು ರೀತಿಯ ಗುಣಧರ್ಮಗಳಿವೆ. ಅದರಲ್ಲಿಯೂ ನಾಯಿ ಎಂದರೇ ನಿಷ್ಠೆ ಹಾಗೂ ಪ್ರಾಮಾಣಿಕತೆಯ ಸಂಕೇತ. ನಾನು ಕನ್ನಡ ನಾಡಿನ ಜನರಿಗೆ ಪ್ರಾಮಾಣಿಕ ಸೇವೆಗೈಯಲು ಇರುವಂತಹ ನಾಯಿ, ಹಾಗೂ ಕನ್ನಡ ನಾಡಿನ ಜನರಿಗೆ ದ್ರೋಹ ಬಗೆಯುವರನ್ನು ವಿರೋಧಿಸುವ ನಾಯಿ ಸಹ' ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪ್ರತಿಯೊಂದು ಪ್ರಾಣಿಗಳಿಗೂ ಒಂದೊಂದು ರೀತಿಯ ಗುಣಧರ್ಮಗಳಿವೆ. ಅದರಲ್ಲಿಯೂ ನಾಯಿ ಎಂದರೇ ನಿಷ್ಠೆ ಹಾಗೂ ಪ್ರಾಮಾಣಿಕತೆಯ ಸಂಕೇತ. ನಾನು ಕನ್ನಡ ನಾಡಿನ ಜನರಿಗೆ ಪ್ರಾಮಾಣಿಕ ಸೇವೆಗೈಯಲು ಇರುವಂತಹ ನಾಯಿ, ಹಾಗೂ ಕನ್ನಡ ನಾಡಿನ ಜನರಿಗೆ ದ್ರೋಹ ಬಗೆಯುವರನ್ನು ವಿರೋಧಿಸುವ ನಾಯಿ ಸಹ. pic.twitter.com/QCkSQjTYOR
— Basavaraj S Bommai (@BSBommai) January 4, 2023
ಪ್ರಧಾನಿ ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿ ಮರಿ ರೀತಿ ಆಡ್ತಾರೆ ಅಂದಿದ್ದ ಸಿದ್ದರಾಮಯ್ಯ ಹೇಳಿಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 'ನಾಯಿ ನಿಯತ್ತಿನ ಪ್ರಾಣಿ, ಜನರಿಗೆ ನಾನು ನಿಯತ್ತಾಗಿ ಕೆಲಸ ಮಾಡ್ತಿದ್ದೀನಿ, ನಿಯತ್ತಿನ ಗುಣವನ್ನ ಜನರ ಪರವಾಗಿ ಉಳಿಸಿಕೊಂಡಿದ್ದೇನೆ' ಎಂದು ಬೊಮ್ಮಾಯಿ ಹೇಳಿದ್ದಾರೆ. ಇನ್ನು ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ಕೂಡ ಕಿಡಿಕಾರಿದ್ದಾರೆ.

'ಇದು ಸಿದ್ದರಾಮಯ್ಯ ಅವರ ಸಂಸ್ಕೃತಿ ತೋರಿಸುತ್ತದೆ. ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದ್ದ ಸಿದ್ದರಾಮಯ್ಯ ಈ ರೀತಿ ಮಾತನಾಡಿರುವುದು ದುರದೃಷ್ಟಕರ' ಎಂದು ಶ್ರೀರಾಮುಲು ಹೇಳಿದ್ದಾರೆ. ಸಿದ್ದರಾಮಯ್ಯ ಬಹಿರಂಗವಾಗಿ ಬಿಜೆಪಿಯ ಕ್ಷಮೆ ಕೇಳಬೇಕು. ಸೋನಿಯಾ ಗಾಂಧಿ ಮುಂದೆ ಸಿದ್ದರಾಮಯ್ಯ ಇಲಿ. ಬೆಕ್ಕು. ಜಿರಳೆ ಹಾಗೆ ಇರುತ್ತಾರೆ ಅಂತ ನಾವು ಹೇಳಲ್ಲ ಅಂತಾ ಕಾಲೆಳೆದಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications