ಮೋದಿ ವಿರುದ್ದ ಹೋರಾಡುವ ಶಕ್ತಿ ಇನ್ನೂ ನನಗಿದೆ: ದೇವೇಗೌಡ
ಬೆಂಗಳೂರು, ಏ 9: ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ನಿಮ್ಮ ಪರವಾಗಿ ಹಗಲಿರುಳು ಕೆಲಸ ಮಾಡಬಲ್ಲ ಬುದ್ದಿವಂತ ಯುವ ನಾಯಕ ನಿಮಗೆ ಸಿಕ್ಕಿದ್ದಾರೆ. ಮತದಾರರಿಗೆ ಕೈಮುಗಿದು ಕೇಳುತ್ತೇನೆ. ದಯಮಾಡಿ ಕೃಷ್ಣ ಭೈರೇಗೌಡರಿಗೆ ಮತ ನೀಡಿ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಮನವಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ದೇವೇಗೌಡ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಮತಯಾಚನೆ ಮಾಡಿದರು.
ಇದೇನು ಕೃಷ್ಣ ಭೈರೇಗೌಡರ ವಿಶಿಷ್ಟ ರೀತಿಯ ಚುನಾವಣಾ ಪ್ರಚಾರ
ಜಕ್ಕೂರು ಏರೋಡ್ರೋಮ್ ಎದುರಿನ ಮೈದಾನದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ದೇವೇಗೌಡರು, ಐದು ವರ್ಷಗಳಲ್ಲಿ ಮೋದಿ ಏನು ಮಾಡಿದ್ದಾರೆ ಎಂಬುದನ್ನ ವಿಮರ್ಶೆ ಮಾಡಿ. ಅವರು ಕೊಟ್ಟಂತಹ ಆಶ್ವಾಸನೆ ಏನು, ಅವು ಎಷ್ಟರ ಮಟ್ಟಿಗೆ ಈಡೇರಿವೆ ಎಂಬುದನ್ನು ತಿಳಿದುಕೊಳ್ಳಿ ಎಂದಿದ್ದಾರೆ.
ಮೋದಿ ಅವರಿಂದ ಬಡವರಿಗೆ ಅನುಕೂಲವಾಗುವ ಯಾವ ಯೋಜನೆಯು ಜಾರಿಯಾಗಲಿಲ್ಲ. ಹೀಗಾಗಿಯೇ ಕಳೆದ ಬಾರಿ 295 ಸ್ಥಾನಗಳನ್ನು ಪಡೆದಂತೆ ಈ ಬಾರಿ ಆಗುವುದಿಲ್ಲ ಎಂಬುದು ಬಿಜೆಪಿ ಪಕ್ಷಕ್ಕೆ ಗೊತ್ತಿದೆ. ಅದಕ್ಕಾಗಿ ಪುಲ್ವಾಮಾ ಘಟನೆಗೆ ಮತ್ತೊಂದು ಸ್ವರೂಪ ಕೊಟ್ಟು, ಐದು ವರ್ಷಗಳಲ್ಲಿ ದೇಶದ ರಕ್ಷಣೆಗೆ ಬೇಕಾದ ಸಾಮಾಗ್ರಿಗಳನ್ನ ಜೋಡಿಸಿದ್ದೇವೆ. ರಷ್ಯಾ ಚೀನಾಗಿಂತ ಮುಂದೆ ಹೋಗಿದ್ದೇವೆ.
ಕೃಷ್ಣ ಬೈರೇಗೌಡರದ್ದು 420 ಬುದ್ಧಿ ಎನ್ನಬೇಕೆ ಎಂದು ಸದಾನಂದ ಗೌಡ ಪ್ರಶ್ನೆ
ಆಕಾಶದಲ್ಲಿ ಯುದ್ಧ ಮಾಡುತ್ತೇವೆ ಎನ್ನುವ ಮಾತುಗಳನ್ನಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಮನಮಹೋನ್ ಸಿಂಗ್ ಕಾಲದಲ್ಲಿ ಯಾವೆಲ್ಲಾ ಕ್ಷಿಪಣಿಗಳು ಉಡಾವಣೆಯಾಗಿವೆ ಎಂಬುದು ಜನರಿಗೆ ಗೊತ್ತು. ಆದರೆ ಎಲ್ಲವನ್ನೂ ನಾವೇ ಮಾಡಿರುವುದು ಎಂದು ಮೋದಿ ಹೇಳಿಕೊಳ್ಳುತ್ತಾರೆಂದು ದೇವೇಗೌಡ್ರು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
ಅವರೆನೇ ಹೇಳಿಕೊಂಡರೂ ಸಮೀಕ್ಷೆಗಳನ್ನು ನೋಡಿದಾಗ ಅತಂತ್ರ ಸ್ಥಿತಿ ಬರುತ್ತದೆ ಎಂಬುದು ವ್ಯಕ್ತವಾಗಿದೆ. ಮತ್ತೆ ನನಗೆ ಪಾರ್ಲಿಮೆಂಟ್ ಗೆ ಹೋಗೋ ಅವಕಾಶ ಸಿಕ್ಕಿದರೆ ಮೋದಿಯ ಎದುರು ಹೋರಾಡುವ ಶಕ್ತಿ ನನಗಿದೆ. ರಾಜ್ಯದಲ್ಲಿ 18 ರಿಂದ 20 ಸ್ಥಾನ ನಾವು ಗೆದ್ದರೆ ಸಮ್ಮಿಶ್ರ ಸರ್ಕಾರಕ್ಕೊಂದು ಅರ್ಥ ಬರುತ್ತದೆ ಎಂದು ದೇವೇಗೌಡರು ಹೇಳಿದರು.