ಕೇದಾರನಾಥದ ಶಂಕರಾಚಾರ್ಯರ ಮೂರ್ತಿ ನೋಡಬೇಕೆನಿಸಿದೆ; ಮೋದಿಗೆ ಪತ್ರ ಬರೆದ ದೇವೇಗೌಡರು
ಬೆಂಗಳೂರು, ನವೆಂಬರ್ 6: 'ನೀವು (ಪ್ರಧಾನಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಆದಿ ಗುರು ಶ್ರೀ ಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನನಗೆ ನೋಡಬೇಕು ಅನಿಸಿದೆ' ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪತ್ರದ ಮೂಲಕ ತಮ್ಮ ಆಸೆ ತಿಳಿಸಿದ್ದಾರೆ.
ಶಂಕರಾಚಾರ್ಯರ ಪವಿತ್ರ ಕ್ಷೇತ್ರವನ್ನು ಪುನರ್ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ದೇವೇಗೌಡರು ಹೇಳಿದ್ದು, ಈ ವಿಚಾರವನ್ನು ಅವರು ಇಂದು (ನವೆಂಬರ್ 6) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
ನಾನು ಕರ್ನಾಟಕದ ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಅದು ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಒಂದಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಬರೆದುಕೊಂಡಿದ್ದಾರೆ.

ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ಶೃಂಗೇರಿ ಮಠದ ಬಗ್ಗೆ ಎಚ್.ಡಿ. ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
'ಈ ಧರ್ಮ ಕ್ಷೇತ್ರದ ಮಾರ್ಗದರ್ಶನವು ಇಂದಿನ ದಿನದವರೆಗೂ ಮುಂದುವರಿದಿದೆ. ಶೃಂಗೇರಿ ಮಠ, ವೈಯಕ್ತಿಕವಾಗಿ ನನಗೆ ಸಮಾಜದ ಸಾಮರಸ್ಯದ ಕೇಂದ್ರವಾಗಿ ಕಂಡಿದೆ. ಈ ಪವಿತ್ರ ಕ್ಷೇತ್ರದಿಂದ ನನ್ನ ಜೀವನದಲ್ಲಿ ಪಡೆದುಕೊಂಡ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿ ಇರುತ್ತೇನೆ' ಎಂದು ದೇವೇಗೌಡ ತಿಳಿಸಿದ್ದಾರೆ.

'ಶೀಘ್ರವೇ ಕೇದಾರನಾಥಕ್ಕೆ ಭೇಟಿ ಕೊಟ್ಟು, ಹೊಸತಾಗಿ ಉದ್ಘಾಟಿಸಿರುವ ಶಂಕರಾಚಾರ್ಯರ ಪ್ರತಿಮೆ ನೋಡಬೇಕು ಎಂದು ಕಾತುರನಾಗಿದ್ದೇನೆ. ಆ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವರು ರಚಿಸಿದ್ದಾರೆ ಎಂಬುದು ಸಂತೋಷಕ್ಕೆ ಹೆಚ್ಚಿನ ಕಾರಣವಾಗಿದೆ. ಪ್ರತಿಮೆ ರಚನೆಗೆ ಬಳಸಿದ ಕಪ್ಪು ಶಿಲೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆಯದ್ದು ಎಂದು ತಿಳಿದುಕೊಂಡಿದ್ದೇನೆ. ಈ ಕಾರ್ಯದಲ್ಲಿ ಕರ್ನಾಟಕದ ಭಾಗವೂ ಬಹಳಷ್ಟಿದೆ. ಭಗವಂತನ ಆಶೀರ್ವಾದ ನಿಮ್ಮ ಮೇಲಿರಲಿ' ಎಂದು ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಗೆ ಶುಭ ಹಾರೈಸಿದ್ದಾರೆ.
Recommended Video
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ









Click it and Unblock the Notifications