ಶಶಿಕಲಾರನ್ನು ಜೈಲಿನಿಂದ ಹೊರತರಬಲ್ಲೆ : ಡೀಲರ್
ಎಐಎಡಿಎಂಕೆ ಪಕ್ಷಕ್ಕೆ ಎರಡು ಹಸಿರೆಲೆ ಇರುವ ಪಕ್ಷದ ಚಿಹ್ನೆಯನ್ನು ಕೊಡಿಸುವ ಡೀಲ್ ಒಪ್ಪಿಕೊಂಡಿದ್ದ ಸುಕೇಶ್, ಶಶಿಕಲಾರನ್ನು ಜೈಲಿನಿಂದ ಹೊರ ತರಬಲ್ಲೇ ಎಂದು ಡೀಲ್ ಮಾತನಾಡಿದ್ದ
ಬೆಂಗಳೂರು, ಏಪ್ರಿಲ್ 18: ಎಐಎಡಿಎಂಕೆ ಪಕ್ಷಕ್ಕೆ ಎರಡು ಹಸಿರೆಲೆ ಇರುವ ಪಕ್ಷದ ಚಿಹ್ನೆಯನ್ನು ಕೊಡಿಸುವ ಡೀಲ್ ಒಪ್ಪಿಕೊಂಡಿದ್ದ ಸುಕೇಶ್ ಚಂದ್ರಶೇಖರನ್ ಡೀಲ್ ಗಳ ಕಥೆ ಒಂದೊಂದಾಗಿ ಹೊರ ಬರುತ್ತಿದೆ. ಶಶಿಕಲಾರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ತರಬಲ್ಲೇ ಎಂದು ಡೀಲ್ ಮಾತನಾಡಿದ್ದ ಎಂಬ ವಿಷಯ ಬಹಿರಂಗಗೊಂಡಿದೆ.
ಎಐಎಡಿಎಂಕೆ ಪಕ್ಷಕ್ಕೆ ಎರಡು ಹಸಿರೆಲೆ ಇರುವ ಪಕ್ಷದ ಚಿಹ್ನೆ ಕೊಡಿಸಲು 50 ಕೋಟಿ ರು ಡೀಲ್ ಮಾಡಿಕೊಂಡು ಸಿಕ್ಕಿಬಿದ್ದಿರುವ ಸುಕೇಶ್, ವಿಚಾರಣೆ ವೇಳೆ ಈ ವಿಷಯ ಬಾಯ್ಬಿಟ್ಟಿದ್ದಾನೆ.[ಎಐಎಡಿಎಂಕೆ ಚಿನ್ಹೆಗಾಗಿ ಲಂಚ: ಯಾರು ಈ ಚಾಲಾಕಿ ಮಧ್ಯವರ್ತಿ?]
ನಾನು ಅತ್ಯಂತ ಪ್ರಭಾವಿ ವ್ಯಕ್ತಿ. ಯಾರನ್ನು ಬೇಕಾದರೂ ಲಂಚ ನೀಡಿ ನನ್ನ ಹಿಡಿತಕ್ಕೆ ತೆಗೆದುಕೊಳ್ಳಬಲ್ಲೆ. ದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿ ಚಿಹ್ನೆ ಕೊಡಿಸುತ್ತೇನೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ನಿಮ್ಮ ಸಂಬಂಧಿ ಶಶಿಕಲಾ ನಟರಾಜನ್ ರನ್ನು ಬಿಡಿಸುತ್ತೇನೆ ಎಂದು ಟಿವಿವಿ ದಿನಕರನ್ ಗೆ ಆಶ್ವಾಸನೆ ನೀಡಿದ್ದ ಸುಕೇಶ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದು, ವಿಚಾರಣೆಗಾಗಿ ಬೆಂಗಳೂರಿಗೂ ಕರೆ ತರಲಾಗುತ್ತದೆ.

ಎಐಎಡಿಎಂಕೆ ಪಕ್ಷಕ್ಕೆ ಡೀಲ್ ಖುದುರಿಸುವುದಾಗಿ ಹೇಳಿದ್ದ ಸುಕೇಶ್ ಬೆಂಗಳೂರು ಮೂಲದವರು. ದಿನಕರನ್ ಜತೆ 50 ಕೋಟಿ ರು ಡೀಲ್ ಮಾಡಿಕೊಂಡಿದ್ದು, ಅಧಿಕಾರಿಗಳಿಗೆ ಲಂಚ ತಿನ್ನಿಸಿ ಎಐಎಡಿಎಂಕೆ ಚಿಹ್ನೆ ಕೊಡಿಸುವುದಾಗಿ ಸುಕೇಶ್ ಭರವಸೆ ನೀಡಿದ್ದರು.ದೆಹಲಿಯ ಹಯಾತ್ ಹೋಟೆಲ್ ನಲ್ಲಿ ಸುಕೇಶ್ ನನ್ನು ಬಂಧಿಸಿದಾಗ ಹೊಟೆಲ್ ರೂಮಿನಲ್ಲಿ 1.3ಕೋಟಿರು ಹಾಗೂ ಹೊರಗಡೆ ನಿಲ್ಲಿಸಿದ್ದ ಮರ್ಸಿಡೀಸ್ ಬೆಂಜ್ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.[ತಮಿಳುನಾಡಿನಲ್ಲಿ ಮತ್ತೊಂದು ಹೈಡ್ರಾಮ, ಎಐಎಡಿಎಂಕೆ ಬಣಗಳ ವಿಲೀನ?]
ಎರಡೆಲೆ ಏಕೆ ಬೇಕು: ಎಐಎಡಿಎಂಕೆ ಪಕ್ಷದ ಚಿಹ್ನೆ ಸದ್ಯಕ್ಕೆ ಚುನಾವಣಾ ಆಯೋಗದ ವಶದಲ್ಲಿದೆ. ಪಳನಸ್ವಾಮಿ, ಶಶಿಕಲಾ ಗುಂಪು ಹಾಗೂ ಓ ಪನ್ನೀರ್ ಸೆಲ್ವಂ ಗುಂಪು ಎರಡೆಲೆಗಾಗಿ ಕಿತ್ತಾಡಿದ್ದರಿಂದ ಚಿಹ್ನೆ ಸದ್ಯಕ್ಕೆ ಇಬ್ಬರಿಗೂ ಲಭ್ಯವಿಲ್ಲ.
ಆರ್ ಕೆ ನಗರ ಕ್ಷೇತದ ಉಪ ಚುನಾವಣೆ ಬಾಕಿ ಇರುವುದರಿಂದ ಪಕ್ಷದ ಮೂಲ ಚಿಹ್ನೆ ಮಹತ್ವ ಪಡೆದುಕೊಂಡಿದೆ. ಭ್ರಷ್ಟಾಚಾರದ ಕೂಪವಾಗಿದ್ದ ಆರ್ ಕೆ ನಗರ ಕ್ಷೇತ್ರದಲ್ಲಿ ಚುನಾವಣೆ ದಿನಾಂಕ ಏಪ್ರಿಲ್ 11ರಿಂದ ಮುಂದೂಡಲ್ಪಟ್ಟಿದ್ದು, ಮತ್ತೆ ಯಾವಾಗ ಇನ್ನೂ ತಿಳಿದು ಬಂದಿಲ್ಲ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications