ವೋಟರ್ ಐಡಿ ಸಿಕ್ಕಿದ ಫ್ಲ್ಯಾಟ್ ಗೂ ನನಗೂ ಸಂಬಂಧವಿಲ್ಲ: ರಾಕೇಶ್
ಬೆಂಗಳೂರು, ಮೇ 9: 9,746ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ವ್ಯಾಪ್ತಿಯ ಜಾಲಹಳ್ಳಿಯ ಫ್ಲ್ಯಾಟ್ ಗೂ ನನಗೂ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕ ರಾಕೇಶ್ ಹೇಳಿದ್ದಾರೆ.
ಜೊತೆಗೆ ಫ್ಲ್ಯಾಟ್ ಮಾಲಿಕರಾದ ಮಂಜುಳಾ ನಂಜಾಮರಿ ನನಗೆ ದೂರದ ಸಂಬಂಧಿಯಾಗಿದ್ದು, ಅವರೊಂದಿಗೆ ಕಳೆದ 10 ವರ್ಷಗಳಿಂದ ಯಾವುದೇ ಸಂಬಂಧವಿಲ್ಲ ಎಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದೇ ವೇಳೆ ಈ ಮನೆಯಲ್ಲಿ ಮತದಾರರ ಗುರುತಿನ ಚೀಟಿ ಇರುವ ಬಗ್ಗೆ ನಿಮಗೆ ಹೇಗೆ ಮಾಹಿತಿ ಸಿಕ್ಕಿತು ಎಂಬ ಪ್ರಶ್ನೆ ವರದಿಗಾರರಿಂದ ಎದುರಾಯಿತು. ಇದಕ್ಕೆ ಉತ್ತರಿಸಿದ ರಾಕೇಶ್, "ಮನೆಯೊಳಗೆ ಮತದಾರರ ಗುರುತಿನ ಚೀಟಿಗಳನ್ನು ಇಡಲಾಗಿದೆ ಎಂಬ ಖಚಿತ ಮಾಹಿತಿ ಸಿಕ್ಕ ನಂತರವಷ್ಟೇ ನಾವು ಮನೆಯಲ್ಲಿ ಹುಡುಕಾಡಿದೆವು. ಮನೆಗೆ ಕಾರುಗಳು ಬರುವುದು ಹೋಗುವುದರ ಮೇಲೆ ನಾವು ನಿಗಾ ಇಟ್ಟಿದ್ದೆವು," ಎಂದು ವಿವರಿಸಿದ್ದಾರೆ.

ಈ ಸಂದರ್ಭ ಮತ್ತೆ ಪತ್ರಕರ್ತರು ಮತ್ತೆ, 'ಅದೇ ಮನೆಯ ಮೇಲೆ ಹೇಗೆ ನಿಗಾ ಇಟ್ಟಿದ್ರಿ?' ಎಂದು ಪ್ರಶ್ನಿಸಿದರು. ಇದರಿಂದ ಸ್ವಲ್ಪ ತಬ್ಬಿಬ್ಬಾದ ರಾಕೇಶ್ ಮತ್ತೆ ಹಳೇ ಕಥೆ ಉರು ಹೊಡೆದರು. ಆಗ ಪಕ್ಕದಲ್ಲಿದ್ದ ಅನ್ವರ್ ಮಾಣಿಪ್ಪಾಡಿ 'ಪ್ರಚಾರಕ್ಕೆ ಹೋದಾಗ ಎಂದು ಹೇಳಿ' ಎಂದು ಕಿವಿಯಲ್ಲಿ ಉಸುರಿದರು. ನಂತರ ರಾಕೇಶ್ ಕೂಡ ಅದೇ ಮಾತನ್ನು ಪುನರುಚ್ಛರಿಸಿದರು.
ಇನ್ನು ಈ ಸಂಬಂಧ ಬಿಜೆಪಿ ನಾಯಕರ ನಿಯೋಗ ಇಂದು ಸಂಜೆ 6 ಗಂಟೆಗೆ ಚುನಾವಣಾ ಆಯೋಗಕ್ಕೆ ತೆರಳಿ ದೂರು ನೀಡಲಿದೆ. ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಕ್ವಿ, ಜೆಪಿ ನಡ್ಡಾ ಮತ್ತು ಧರ್ಮೇಂದ್ರ ಪ್ರಧಾನ್ ಅವರ ನಿಯೋಗ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಲಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications