ವೋಟರ್ ಐಡಿ ಸಿಕ್ಕಿದ ಫ್ಲ್ಯಾಟ್ ಗೂ ನನಗೂ ಸಂಬಂಧವಿಲ್ಲ: ರಾಕೇಶ್
ಬೆಂಗಳೂರು, ಮೇ 9: 9,746ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ವ್ಯಾಪ್ತಿಯ ಜಾಲಹಳ್ಳಿಯ ಫ್ಲ್ಯಾಟ್ ಗೂ ನನಗೂ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕ ರಾಕೇಶ್ ಹೇಳಿದ್ದಾರೆ.
ಜೊತೆಗೆ ಫ್ಲ್ಯಾಟ್ ಮಾಲಿಕರಾದ ಮಂಜುಳಾ ನಂಜಾಮರಿ ನನಗೆ ದೂರದ ಸಂಬಂಧಿಯಾಗಿದ್ದು, ಅವರೊಂದಿಗೆ ಕಳೆದ 10 ವರ್ಷಗಳಿಂದ ಯಾವುದೇ ಸಂಬಂಧವಿಲ್ಲ ಎಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದೇ ವೇಳೆ ಈ ಮನೆಯಲ್ಲಿ ಮತದಾರರ ಗುರುತಿನ ಚೀಟಿ ಇರುವ ಬಗ್ಗೆ ನಿಮಗೆ ಹೇಗೆ ಮಾಹಿತಿ ಸಿಕ್ಕಿತು ಎಂಬ ಪ್ರಶ್ನೆ ವರದಿಗಾರರಿಂದ ಎದುರಾಯಿತು. ಇದಕ್ಕೆ ಉತ್ತರಿಸಿದ ರಾಕೇಶ್, "ಮನೆಯೊಳಗೆ ಮತದಾರರ ಗುರುತಿನ ಚೀಟಿಗಳನ್ನು ಇಡಲಾಗಿದೆ ಎಂಬ ಖಚಿತ ಮಾಹಿತಿ ಸಿಕ್ಕ ನಂತರವಷ್ಟೇ ನಾವು ಮನೆಯಲ್ಲಿ ಹುಡುಕಾಡಿದೆವು. ಮನೆಗೆ ಕಾರುಗಳು ಬರುವುದು ಹೋಗುವುದರ ಮೇಲೆ ನಾವು ನಿಗಾ ಇಟ್ಟಿದ್ದೆವು," ಎಂದು ವಿವರಿಸಿದ್ದಾರೆ.

ಈ ಸಂದರ್ಭ ಮತ್ತೆ ಪತ್ರಕರ್ತರು ಮತ್ತೆ, 'ಅದೇ ಮನೆಯ ಮೇಲೆ ಹೇಗೆ ನಿಗಾ ಇಟ್ಟಿದ್ರಿ?' ಎಂದು ಪ್ರಶ್ನಿಸಿದರು. ಇದರಿಂದ ಸ್ವಲ್ಪ ತಬ್ಬಿಬ್ಬಾದ ರಾಕೇಶ್ ಮತ್ತೆ ಹಳೇ ಕಥೆ ಉರು ಹೊಡೆದರು. ಆಗ ಪಕ್ಕದಲ್ಲಿದ್ದ ಅನ್ವರ್ ಮಾಣಿಪ್ಪಾಡಿ 'ಪ್ರಚಾರಕ್ಕೆ ಹೋದಾಗ ಎಂದು ಹೇಳಿ' ಎಂದು ಕಿವಿಯಲ್ಲಿ ಉಸುರಿದರು. ನಂತರ ರಾಕೇಶ್ ಕೂಡ ಅದೇ ಮಾತನ್ನು ಪುನರುಚ್ಛರಿಸಿದರು.
ಇನ್ನು ಈ ಸಂಬಂಧ ಬಿಜೆಪಿ ನಾಯಕರ ನಿಯೋಗ ಇಂದು ಸಂಜೆ 6 ಗಂಟೆಗೆ ಚುನಾವಣಾ ಆಯೋಗಕ್ಕೆ ತೆರಳಿ ದೂರು ನೀಡಲಿದೆ. ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಕ್ವಿ, ಜೆಪಿ ನಡ್ಡಾ ಮತ್ತು ಧರ್ಮೇಂದ್ರ ಪ್ರಧಾನ್ ಅವರ ನಿಯೋಗ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications