ಪೌರಾಡಳಿತ ಖಾತೆ ದೊರೆಯುವ ವಿಶ್ವಾಸದಲ್ಲಿ ಸಚಿವ ಆರ್.ಶಂಕರ್

ಬೆಂಗಳೂರು, ಜೂನ್ 18: ಸಂಪುಟ ವಿಸ್ತರಣೆ ಆಗಿ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ ಐದು ದಿನ ಆಗಿದ್ದರೂ ಇನ್ನೂ ಅವರಿಗೆ ಖಾತೆ ಹಂಚಿಕೆ ಮಾಡಲಾಗಿಲ್ಲ.

ಪಕ್ಷೇತರ ಶಾಸಕರಾಗಿ ಗುರುತಿಸಿಕೊಂಡಿದ್ದ ಕೆಪಿಜೆಪಿಯ ಆರ್.ಶಂಕರ್ ಮತ್ತು ಮುಳಬಾಗಿಲು ಪಕ್ಷೇತರ ಶಾಸಕ ಎಚ್.ನಾಗೇಶ್ ಅವರು ಜೂನ್ 14 ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಈವರೆಗೆ ಅವರಿಬ್ಬರಿಗೆ ಖಾತೆ ನೀಡಲಾಗಿಲ್ಲ.

ಆದರೆ ಈ ಬಗ್ಗೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಆರ್.ಶಂಕರ್ ಅವರು, ನನಗೆ ಪೌರಾಡಳಿತ ಖಾತೆ ದೊರೆಯುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

I may get municipal administration portfolio: R Shankar

ಆರ್.ಶಂಕರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದಿನೇಶ್ ಗುಂಡೂರಾವ್ ಅವರಿಗೆ ಹೂಗುಚ್ಛ ನೀಡಿ, ಸಚಿವರನ್ನಾಗಿಸಿದ್ದಕ್ಕೆ ಧನ್ಯವಾದವನ್ನೂ ಹೇಳಿದರು.

ಕಾಂಗ್ರೆಸ್‌ನ ಶಿವಳ್ಳಿ ಅವರು ಈ ಮೊದಲು ಪೌರಾಡಳಿತ ಇಲಾಖೆಯನ್ನು ಸಂಭಾಳಿಸುತ್ತಿದ್ದರು. ಅವರ ಅಕಾಲಿಕ ಮರಣದ ನಂತರ ಖಾತೆ ಖಾಲಿ ಉಳಿದಿದೆ. ಅದೇ ಖಾತೆ ದೊರೆಯುವ ವಿಶ್ವಾಸದಲ್ಲಿ ಆರ್.ಶಂಕರ್ ಅವರಿದ್ದಾರೆ. ನಾಗೇಶ್ ಅವರಿಗೆ ಯಾವ ಖಾತೆ ದೊರೆಯುತ್ತದೆ ಎಂಬ ಖಾತರ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+