ಡಿಕೆಶಿ ಬಂಧನ: ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆ

Recommended Video

      DK Shivakumar :ಬಿಜೆಪಿಗೆ ಶಾಕ್ ನೀಡಿ ಯಡಿಯೂರಪ್ಪ ಹೇಳಿಕೆ..? | Oneindia Kannada

      ಬೆಂಗಳೂರು, ಸೆಪ್ಟೆಂಬರ್ 03: ಡಿಕೆ.ಶಿವಕುಮಾರ್ ಅವರು ಬಂಧನವಾಗುತ್ತಿದ್ದಂತೆ ರಾಜ್ಯದ ನಾಯಕರು ವಿವಿಧ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

      ಡಿ.ಕೆ.ಶಿವಕುಮಾರ್ ಅವರ ಆಪ್ತರೂ ಆಗಿರುವ ಸಿಎಂ ಯಡಿಯೂರಪ್ಪ ಅವರು ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಡಿಕೆಶಿ ಬಿಡುಗಡೆ ಆಗಿ ಬಂದರೆ ಹೆಚ್ಚು ಸಂತೋಶ ಪಡುವುದು ನಾನೇ' ಎಂದು ಹೇಳಿದ್ದಾರೆ.

      ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಡಿ.ಕೆ.ಶಿವಕುಮಾರ್ ಬಿಡುಗಡೆ ಆಗಿ ಬಂದರೆ ಎಲ್ಲರಿಗಿಂತಲೂ ಹೆಚ್ಚು ಸಂತೋಶ ಪಡುವವನು ನಾನೇ' ಎಂದಿದ್ದಾರೆ.

      I Will Be Most Happiest Person If DK Shivakumar released: Yediyurappa

      ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಸಹ ಡಿಕೆಶಿ ಬಂಧನದ ಬಗ್ಗೆ ಟ್ವೀಟ್ ಮಾಡಿದ್ದು, 'ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೆ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿಕೆ.ಶಿವಕುಮಾರ್ ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಹೇಳಿದ್ದಾರೆ.

      ಮಾಜಿ ಸಿಎಂ ಸಿದ್ದರಾಮಯ್ಯ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ' ಎಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+