'ಯಾರಿಗಾದರೂ ನೋವಾಗಿದ್ದರೆ ಸ್ಸಾರಿ' ಎಂದ ಬೇಳೂರು ಗೋಪಾಲಕೃಷ್ಣ
ಬೆಂಗಳೂರು, ಮಾರ್ಚ್ 5: "ನನಗೆ ಪ್ರಧಾನಮಂತ್ರಿ ಅವರ ಬಗ್ಗೆ ಗೌರವ ಇದೆ. ಪ್ರಧಾನಿ ಅವರ ಹತ್ಯೆ ಆಗಬೇಕು ಅಂತ ನಾನು ಹೇಳಿಲ್ಲ. ಗಾಂಧೀಜಿಗೆ ಅವಮಾನ ಆಗುವಾಗ ನಾನು ಸುಮ್ಮನಿರಲು ಹೇಗೆ ಸಾಧ್ಯ? ನಾನು ಹೇಳಿದ್ದು; ನೀವು ಇದೇ ಕೆಲಸವನ್ನು ಪ್ರಧಾನಿಗಳಿಗೂ ಮಾಡ್ತೀರಾ? ಅಂತ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ".
-ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಹೇಳಿಕೆಗೆ ನೀಡಿದ ಸ್ಪಷ್ಟೀಕರಣ ಇದು. ಬುಧವಾರ ಮಧ್ಯಾಹ್ನದಿಂದ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆ ಭಾರೀ ಚರ್ಚೆಗೆ ಒಳಗಾಗಿತ್ತು. ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ಬೆಂಬಲಿಸುವಂಥವರು ತಮ್ಮ ಪ್ರಧಾನಿಗೆ ಗುಂಡಿಟ್ಟು ಹತ್ಯೆ ಮಾಡಲಿ ಎಂದು ಸಮಾರಂಭವೊಂದರಲ್ಲಿ ಅವರು ಹೇಳಿದ್ದರು.
ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿರುದ್ಧ ಬಿಜೆಪಿ ಮುಖಂಡರ ನಿಯೋಗವು ಮಾರ್ಚ್ 6ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಿದೆ ಎಂದು ತಿಳಿಸಲಾಗಿದೆ.

ರಾಜ್ಯ ವಕ್ತಾರ ಅಶ್ವತ್ಥ್ ನಾರಾಯಣ, ಸಹ ವಕ್ತಾರ ಎಸ್.ಪ್ರಕಾಶ್, ಮಾಜಿ ಉಪ ಮೇಯರ್ ಎಸ್. ಹರೀಶ್, ಮುಖಂಡರಾದ ಚಲವಾದಿ ನಾರಾಯಣ ಸ್ವಾಮಿ ಅವರು ನಿಯೋಗದಲ್ಲಿರುತ್ತಾರೆ ಎನ್ನಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications