ಸಚಿವ ಸ್ಥಾನ ತ್ಯಾಗ ಮಾಡುತ್ತಾರಂತೆ ಜಮೀರ್ ಅಹ್ಮದ್
ಬೆಂಗಳೂರು, ಮೇ 21: ಕರ್ನಾಟಕ ಸರ್ಕಾರದಲ್ಲಿ ಆಹಾರ ಮತ್ತು ನಾಗರೀಕ ಸಚಿವರಾಗಿರುವ ಜಮೀರ್ ಅಹ್ಮದ್ ಅವರು ತಮ್ಮ ಸಚಿವ ಸ್ಥಾನವನ್ನು ತ್ಯಾಗ ಮಾಡುತ್ತಾರಂತೆ!
ಹೌದು, ಹೀಗೆಂದು ಅವರೇ ಇಂದು ಹೇಳಿದ್ದಾರೆ. ಇನ್ನೊಂದು ವರ್ಷವಾದ ಮೇಲೆ ತಮ್ಮ ಸಚಿವ ಸ್ಥಾನವನ್ನು ಶಾಸಕ ಮತ್ತು ಗೆಳೆಯರಾದ ಎನ್.ಎ.ಹ್ಯಾರಿಸ್ ಅವರಿಗೆ ನೀಡುತ್ತಾರಂತೆ ಜಮೀರ್ ಅಹ್ಮದ್.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಶಾಂತಿನಗರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಎನ್.ಎ.ಹ್ಯಾರಿಸ್ ಅವರು ಈ ಬಾರಿಯೇ ಸಚಿವ ಸ್ಥಾನ ಆಕಾಂಕ್ಷಿ ಆಗಿದ್ದರು, ಆದರೆ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಸುಮ್ಮನಿರಿಸಲಾಯಿತು.

ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ಸಿಕ್ಕಾಗ ಕಾಂಗ್ರೆಸ್ನ ಕೆಲವು ಹಿರಿಯ ಮುಸ್ಲಿಂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು, ರೋಶನ್ ಬೇಗ್ ಅದರಲ್ಲಿ ಪ್ರಮುಖರು, ಆದರೆ ಈಗ ಜಮೀರ್ ಅವರೇ ತಾವು ಸಚಿವ ಸ್ಥಾನವನ್ನು ಮುಂದಿನ ಬಾರಿ ಬಿಟ್ಟುಕೊಡುವುದಾಗಿ ಹೇಳಿದ್ದಾರೆ.
ಜಮೀರ್ ಮಾತ್ರವಲ್ಲದೆ ಪ್ರಸ್ತುತ ಸಚಿವರಾಗಿರುವ ಬಹುತೇಕರು ತಮ್ಮ ಸ್ಥಾನವನ್ನು ವರ್ಷದ ನಂತರ ಬಿಟ್ಟುಕೊಡಬೇಕಾಗಿ ಬರಬಹುದು.
ಈಗಾಗಲೇ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಮುಂದಿನ ವರ್ಷವೆಂದರೆ ಎರಡು ಅಥವಾ ಎರಡೂವರೆ ವರ್ಷಕ್ಕೆ ಸಂಪುಟ ವಿಸ್ತರಣೆ ನಡೆದು ಪ್ರಸ್ತುತ ಸಚಿವರು ತಮ್ಮ ಅಧಿಕಾರ ಕಳೆದುಕೊಂಡು ಹೊಸಬರಿಗೆ ಅಥವಾ ಅವಕಾಶ ವಂಚಿತರಿಗೆ ಅವಕಾಶ ನೀಡಲಾಗುವ ಸಾಧ್ಯತೆ ಹೆಚ್ಚಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications